<p><strong>ನವದೆಹಲಿ</strong>: ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ನಿವೃತ್ತ ನಿರ್ದೇಶಕ ಪ್ರೊ.ಸುಬ್ಬಣ್ಣ ಅಯ್ಯಪ್ಪನ್ ಅವರ ನಿಗೂಢ ಸಾವಿನ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕಿದೆ ಎಂದು ಐಸಿಎಆರ್ನ ಮಾಜಿ ಸದಸ್ಯ ವೇಣುಗೋಪಾಲ್ ಬಾದರವಾಡ ಒತ್ತಾಯಿಸಿದ್ದಾರೆ.</p>.<p>ಈ ಕುರಿತು ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.</p>.<p>ಅಯ್ಯಪ್ಪನ್ ಅವರ ಸಾವು ತೀವ್ರ ದುಃಖ ತರಿಸಿದೆ. ನದಿ ದಡದಲ್ಲಿ ಅವರ ಸ್ಕೂಟರ್ ಸಿಕ್ಕಿದೆ. ಹಾಗಾಗಿ, ಅವರ ಸಾವು ನಿಗೂಢ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಸಿಬಿಐ ತನಿಖೆಯ ಮೂಲಕ ಸತ್ಯವನ್ನು ಬಯಲಿಗೆಳೆಯಬೇಕಿದೆ ಎಂದು ಕೋರಿದ್ದಾರೆ.</p>.<p>ಅವರ ಸಾವಿನ ದುರಂತವು ಐಸಿಎಆರ್, ಎಎಸ್ಆರ್ಬಿ (ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ) ಮತ್ತು ಸಂಯೋಜಿತ ಸಂಸ್ಥೆಗಳಲ್ಲಿ ಆಳವಾಗಿ ಬೇರೂರಿರುವ ಭ್ರಷ್ಟಾಚಾರ, ಅಕ್ರಮ ನೇಮಕಾತಿ ಮತ್ತು ಅಧಿಕಾರ ದುರುಪಯೋಗಕ್ಕೆ ಕನ್ನಡಿ ಹಿಡಿಯುತ್ತದೆ ಎಂದು ಆರೋಪಿಸಿದ್ದಾರೆ.</p>.<p>ಸಾಂಸ್ಥಿಕ ಸಂಸ್ಥೆಗಳಲ್ಲಿನ ಹಗೆತನವು ಅವರ ಸಾವಿಗೆ ಕಾರಣವಾಗಿರಬಹುದು ಎಂದು ಕೃಷಿ ಸಮುದಾಯಗಳು ಆರೋಪಿಸುತ್ತಿವೆ. ಹಾಗಾಗಿ, ತನಿಖೆಯಿಂದ ಮಾತ್ರವೇ ಸತ್ಯ ಹೊರಬರಲು ಸಾಧ್ಯ ಎಂದು ಹೇಳಿದ್ದಾರೆ.</p>.<p>ಐಸಿಎಆರ್ನ ಕೆಲವು ನಿರ್ಧಾರ ಕಾನೂನುಬಾಹಿರವಾಗಿವೆ. ಮೇ 5ರಂದು ಅಯ್ಯಪ್ಪನ್ ಅವರನ್ನು ಆಡಳಿತ ಮಂಡಳಿಯಿಂದ ಯಾವುದೇ ತನಿಖೆ ನಡೆಸದೆ ಆದೇಶದ ಮೂಲಕ ಏಕಪಕ್ಷೀಯವಾಗಿ ತೆಗೆದು ಹಾಕಲಾಗಿತ್ತು ಎಂದು ದೂರಿದ್ದಾರೆ. </p>.<p>ಐಸಿಎಆರ್ ಕೈಗೊಂಡಿರುವ ಈ ಕಾನೂನುಬಾಹಿರ ಕ್ರಮವು ಮಂಡಳಿಯೊಳಗಿನ ಅಪಾಯಕಾರಿ ಪ್ರವೃತ್ತಿಗೆ ಸಾಕ್ಷಿಯಾಗಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವವರ ಧ್ವನಿಯನ್ನು ಅಡಗಿಸುತ್ತದೆ. ಆ ಮೂಲಕ ಮಂಡಳಿಯಲ್ಲಿ ಆಳವಾಗಿ ಬೇರೂರಿರುವ ಭ್ರಷ್ಟಾಚಾರವನ್ನು ರಕ್ಷಿಸುತ್ತದೆ ಎಂದು ಆರೋಪಿಸಿದ್ದಾರೆ.</p>.<p>ಅಯ್ಯಪ್ಪನ್ ಅವರು ಮೈಸೂರಿನ ವಿಶ್ವೇಶ್ವರ ನಗರ ಕೈಗಾರಿಕಾ ಪ್ರದೇಶದ ಅಕ್ಕಮಹಾದೇವಿ ರಸ್ತೆಯ ಮನೆಯಲ್ಲಿ ವಾಸವಾಗಿದ್ದರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿ ಕಾವೇರಿ ನದಿಯಲ್ಲಿ ಶನಿವಾರ ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ನಿವೃತ್ತ ನಿರ್ದೇಶಕ ಪ್ರೊ.ಸುಬ್ಬಣ್ಣ ಅಯ್ಯಪ್ಪನ್ ಅವರ ನಿಗೂಢ ಸಾವಿನ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕಿದೆ ಎಂದು ಐಸಿಎಆರ್ನ ಮಾಜಿ ಸದಸ್ಯ ವೇಣುಗೋಪಾಲ್ ಬಾದರವಾಡ ಒತ್ತಾಯಿಸಿದ್ದಾರೆ.</p>.<p>ಈ ಕುರಿತು ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.</p>.<p>ಅಯ್ಯಪ್ಪನ್ ಅವರ ಸಾವು ತೀವ್ರ ದುಃಖ ತರಿಸಿದೆ. ನದಿ ದಡದಲ್ಲಿ ಅವರ ಸ್ಕೂಟರ್ ಸಿಕ್ಕಿದೆ. ಹಾಗಾಗಿ, ಅವರ ಸಾವು ನಿಗೂಢ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಸಿಬಿಐ ತನಿಖೆಯ ಮೂಲಕ ಸತ್ಯವನ್ನು ಬಯಲಿಗೆಳೆಯಬೇಕಿದೆ ಎಂದು ಕೋರಿದ್ದಾರೆ.</p>.<p>ಅವರ ಸಾವಿನ ದುರಂತವು ಐಸಿಎಆರ್, ಎಎಸ್ಆರ್ಬಿ (ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ) ಮತ್ತು ಸಂಯೋಜಿತ ಸಂಸ್ಥೆಗಳಲ್ಲಿ ಆಳವಾಗಿ ಬೇರೂರಿರುವ ಭ್ರಷ್ಟಾಚಾರ, ಅಕ್ರಮ ನೇಮಕಾತಿ ಮತ್ತು ಅಧಿಕಾರ ದುರುಪಯೋಗಕ್ಕೆ ಕನ್ನಡಿ ಹಿಡಿಯುತ್ತದೆ ಎಂದು ಆರೋಪಿಸಿದ್ದಾರೆ.</p>.<p>ಸಾಂಸ್ಥಿಕ ಸಂಸ್ಥೆಗಳಲ್ಲಿನ ಹಗೆತನವು ಅವರ ಸಾವಿಗೆ ಕಾರಣವಾಗಿರಬಹುದು ಎಂದು ಕೃಷಿ ಸಮುದಾಯಗಳು ಆರೋಪಿಸುತ್ತಿವೆ. ಹಾಗಾಗಿ, ತನಿಖೆಯಿಂದ ಮಾತ್ರವೇ ಸತ್ಯ ಹೊರಬರಲು ಸಾಧ್ಯ ಎಂದು ಹೇಳಿದ್ದಾರೆ.</p>.<p>ಐಸಿಎಆರ್ನ ಕೆಲವು ನಿರ್ಧಾರ ಕಾನೂನುಬಾಹಿರವಾಗಿವೆ. ಮೇ 5ರಂದು ಅಯ್ಯಪ್ಪನ್ ಅವರನ್ನು ಆಡಳಿತ ಮಂಡಳಿಯಿಂದ ಯಾವುದೇ ತನಿಖೆ ನಡೆಸದೆ ಆದೇಶದ ಮೂಲಕ ಏಕಪಕ್ಷೀಯವಾಗಿ ತೆಗೆದು ಹಾಕಲಾಗಿತ್ತು ಎಂದು ದೂರಿದ್ದಾರೆ. </p>.<p>ಐಸಿಎಆರ್ ಕೈಗೊಂಡಿರುವ ಈ ಕಾನೂನುಬಾಹಿರ ಕ್ರಮವು ಮಂಡಳಿಯೊಳಗಿನ ಅಪಾಯಕಾರಿ ಪ್ರವೃತ್ತಿಗೆ ಸಾಕ್ಷಿಯಾಗಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವವರ ಧ್ವನಿಯನ್ನು ಅಡಗಿಸುತ್ತದೆ. ಆ ಮೂಲಕ ಮಂಡಳಿಯಲ್ಲಿ ಆಳವಾಗಿ ಬೇರೂರಿರುವ ಭ್ರಷ್ಟಾಚಾರವನ್ನು ರಕ್ಷಿಸುತ್ತದೆ ಎಂದು ಆರೋಪಿಸಿದ್ದಾರೆ.</p>.<p>ಅಯ್ಯಪ್ಪನ್ ಅವರು ಮೈಸೂರಿನ ವಿಶ್ವೇಶ್ವರ ನಗರ ಕೈಗಾರಿಕಾ ಪ್ರದೇಶದ ಅಕ್ಕಮಹಾದೇವಿ ರಸ್ತೆಯ ಮನೆಯಲ್ಲಿ ವಾಸವಾಗಿದ್ದರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿ ಕಾವೇರಿ ನದಿಯಲ್ಲಿ ಶನಿವಾರ ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>