ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ರಸ್ತೆ ಅಪಘಾತದಲ್ಲಿ ಉದ್ಯಮಿ ಸೈರಸ್ ಮಿಸ್ತ್ರಿ ದುರ್ಮರಣ

Last Updated 4 ಸೆಪ್ಟೆಂಬರ್ 2022, 18:38 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್‌ ಮಿಸ್ತ್ರಿ (54) ಅವರು ಕಾರು ಅಪಘಾತದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಮರ್ಸಿಡಿಸ್‌ ಬೆಂಜ್‌ ಕಾರಿನಲ್ಲಿ ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ, ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯ ಬಳಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದಿದ್ದರಿಂದ ಅವರು ಸಾವನ್ನಪ್ಪಿದರು ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಸೂರ್ಯ ನದಿಯ ಸೇತುವೆ ಮೇಲೆ ಅಪರಾಹ್ನ 3.15ರ ಸುಮಾರಿಗೆ ಅಪಘಾತ ಸಂಭವಿಸಿದೆಎಂದು ಪಾಲ್ಘರ್‌ ಜಿಲ್ಲೆಯ ಎಸ್‌ಪಿ ಬಾಳಾಸಾಹೇಬ್‌ ಪಾಟೀಲ್‌ ಮಾಹಿತಿ ನೀಡಿದ್ದಾರೆ.

ಮುಂಬೈನ ಸ್ತ್ರೀರೋಗತಜ್ಞೆ ಅನಾಹಿತಾ ಪಾಂಡೋಲೆ ಅವರು ಕಾರನ್ನು ಚಲಾಯಿಸುತ್ತಿದ್ದರು. ಕಾರು ಅತ್ಯಂತ ವೇಗವಾಗಿ ಚಲಿಸುತ್ತಿತ್ತು. ಈ ವೇಳೆ ಎಡಗಡೆಯಿಂದ ಇನ್ನೊಂದು ವಾಹನವನ್ನು ಓವರ್‌ಟೇಕ್‌ ಮಾಡಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎನ್ನುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರು ಚಲಾಯಿಸುತ್ತಿದ್ದ ಅನಾಹಿತಾ ಪಾಂಡೋಲೆ ಮತ್ತು ಆಕೆಯ ಪತಿ ಡೇರಿಯಸ್‌ ಪಾಂಡೋಲೆಗೆ ಗಾಯಗಳಾಗಿವೆ. ಆದರೆ, ಮಿಸ್ತ್ರಿ ಮತ್ತು ಡೇರಿಯಸ್‌ನ ಸಹೋದರ ಜಹಂಗೀರ್ ಪಾಂಡೋಲೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗಾಯಾಳುಗಳನ್ನು ಗುಜರಾತ್‌ನ ವಾಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT