ಪ್ರಕರಣದ ವಿಚಾರಣೆ ನಡೆಸುತ್ತಿರುವ ಮುಖ್ಯ ನಾಯಮೂರ್ತಿ ಸಾಖೀಬ್ ನಿಸಾರ್ ನೇತೃತ್ವದ ತ್ರಿಸದಸ್ಯ ಪೀಠ, ಸೇನಾಧಿಕಾರಿಯಾಗಿದ್ದವರು ತನ್ನ ದೇಶಕ್ಕೆ ಹಿಂದಿರುಗಲು ಇಷ್ಟೊಂದು ಭಯಪಡುತ್ತಿರುವುದು ಏಕೆ ಎಂದು ಆಶ್ಚರ್ಯವ್ಯಕ್ತಪಡಿಸಿದೆ. ಗುರುವಾರ ಮಧ್ಯಾಹ್ನ ಎರಡು ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕು, ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮಕೈಗೊಳ್ಳುವುದಾಗಿ ಕೋರ್ಟ್ ಎಚ್ಚರಿಕೆ ನೀಡಿದೆ ಎಂದು ’ಡಾನ್’ ಪತ್ರಿಕೆ ವರದಿ ಮಾಡಿದೆ.