<p><strong>ನವದೆಹಲಿ:</strong> ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಪಿಐ) ಆಗಸ್ಟ್ 1 ರಿಂದ 16ರವರೆಗೆ ಬಂಡವಾಳ ಮಾರುಕಟ್ಟೆ<br />ಯಿಂದ ₹ 8,319 ಕೋಟಿ ಹಿಂದಕ್ಕೆ ಪಡೆದಿದ್ದಾರೆ.</p>.<p>ಹೂಡಿಕೆದಾರರು ₹ 10,416 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರೆ, ₹ 2,096 ಕೋಟಿ ಮೌಲ್ಯದ ಸಾಲಪತ್ರಗಳನ್ನು ಖರೀದಿಸಿದ್ದಾರೆ.ಜುಲೈನಲ್ಲಿ ₹ 2,986 ಕೋಟಿ ಮೌಲ್ಯದ ಬಂಡವಾಳ ಹಿಂದಕ್ಕೆ ಪಡೆದಿದ್ದರು.</p>.<p>‘ಆಗಸ್ಟ್ನಲ್ಲಿ ನಡೆದಿರುವ 10 ದಿನಗಳ ವಹಿವಾಟಿನಲ್ಲಿ 9 ದಿನಗಳ ಕಾಲ ಮಾರಾಟ ಮಾಡಿದ್ದಾರೆ. ಇದು ಹೂಡಿಕೆ ಬಗೆಗಿನ ನಕಾರಾತ್ಮಕ ಭಾವನೆಯನ್ನು ತೋರಿಸುತ್ತದೆ’ ಎಂದು ಮಾರ್ನಿಂಗ್ಸ್ಟಾರ್ ಕಂಪನಿಯ ಹಿರಿಯ ವ್ಯವಸ್ಥಾಪಕ ಸಂಶೋಧಕ ಹಿಮಾಂಶು ಶ್ರೀವಾಸ್ತವ ಅವರು ಹೇಳಿದ್ದಾರೆ.</p>.<p>‘ಕೇಂದ್ರ ಬಜೆಟ್ನಲ್ಲಿ ಸಿರಿವಂತರ ಮೇಲೆ ಸರ್ಚಾರ್ಜ್ ಹೆಚ್ಚಿಸಲಾಗಿದೆ. ಎಫ್ಪಿಐ ಮೇಲೆ ಸರ್ಚಾರ್ಜ್ ಹಿಂದೆಪಡೆಯುವ ಕುರಿತು ಸ್ಪಷ್ಟನೆ ಸಿಗದೇ ಇರುವುದರಿಂದ ಹೂಡಿಕೆದಾರರು ಆತಂಕಕ್ಕೆ ಒಳಗಾಗಿ ಮಾರಾಟಕ್ಕೆ ಗಮನ ನೀಡಿದ್ದಾರೆ’ ಎಂದು ವಿವರಿಸಿದ್ದಾರೆ.</p>.<p>ಭಾರತದ ಆರ್ಥಿಕತೆಯ ಮಂದಗತಿಯ ಬೆಳವಣಿಗೆ, ಕಂಪನಿಗಳ ತ್ರೈಮಾಸಿಕ ಪ್ರಗತಿ ಮಾರುಕಟ್ಟೆಯ ನಿರೀಕ್ಷೆಗಿಂತಲೂ ಕಡಿಮೆ ಇರುವುದು ಹೀಗೆ ಇನ್ನೂ ಹಲವು ಸಂಗತಿಗಳು ಷೇರುಪೇಟೆಯಲ್ಲಿ ನಕಾರಾತ್ಮಕ ಚಟುವಟಿಕೆಯನ್ನು ಹೆಚ್ಚಾಗುವಂತೆ ಮಾಡಿವೆ.</p>.<p>ಅಮೆರಿಕ–ಚೀನಾ ಮಧ್ಯೆ ನಡೆಯುತ್ತಿರುವ ವಾಣಿಜ್ಯ ಸಮರವು ಜಾಗತಿಕ ಹೂಡಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಭಾರತದ ಮೇಲೆಯೂ ಅದು ಪ್ರಭಾವಿಸಿದೆ ಎಂದು ತಜ್ಞರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಪಿಐ) ಆಗಸ್ಟ್ 1 ರಿಂದ 16ರವರೆಗೆ ಬಂಡವಾಳ ಮಾರುಕಟ್ಟೆ<br />ಯಿಂದ ₹ 8,319 ಕೋಟಿ ಹಿಂದಕ್ಕೆ ಪಡೆದಿದ್ದಾರೆ.</p>.<p>ಹೂಡಿಕೆದಾರರು ₹ 10,416 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರೆ, ₹ 2,096 ಕೋಟಿ ಮೌಲ್ಯದ ಸಾಲಪತ್ರಗಳನ್ನು ಖರೀದಿಸಿದ್ದಾರೆ.ಜುಲೈನಲ್ಲಿ ₹ 2,986 ಕೋಟಿ ಮೌಲ್ಯದ ಬಂಡವಾಳ ಹಿಂದಕ್ಕೆ ಪಡೆದಿದ್ದರು.</p>.<p>‘ಆಗಸ್ಟ್ನಲ್ಲಿ ನಡೆದಿರುವ 10 ದಿನಗಳ ವಹಿವಾಟಿನಲ್ಲಿ 9 ದಿನಗಳ ಕಾಲ ಮಾರಾಟ ಮಾಡಿದ್ದಾರೆ. ಇದು ಹೂಡಿಕೆ ಬಗೆಗಿನ ನಕಾರಾತ್ಮಕ ಭಾವನೆಯನ್ನು ತೋರಿಸುತ್ತದೆ’ ಎಂದು ಮಾರ್ನಿಂಗ್ಸ್ಟಾರ್ ಕಂಪನಿಯ ಹಿರಿಯ ವ್ಯವಸ್ಥಾಪಕ ಸಂಶೋಧಕ ಹಿಮಾಂಶು ಶ್ರೀವಾಸ್ತವ ಅವರು ಹೇಳಿದ್ದಾರೆ.</p>.<p>‘ಕೇಂದ್ರ ಬಜೆಟ್ನಲ್ಲಿ ಸಿರಿವಂತರ ಮೇಲೆ ಸರ್ಚಾರ್ಜ್ ಹೆಚ್ಚಿಸಲಾಗಿದೆ. ಎಫ್ಪಿಐ ಮೇಲೆ ಸರ್ಚಾರ್ಜ್ ಹಿಂದೆಪಡೆಯುವ ಕುರಿತು ಸ್ಪಷ್ಟನೆ ಸಿಗದೇ ಇರುವುದರಿಂದ ಹೂಡಿಕೆದಾರರು ಆತಂಕಕ್ಕೆ ಒಳಗಾಗಿ ಮಾರಾಟಕ್ಕೆ ಗಮನ ನೀಡಿದ್ದಾರೆ’ ಎಂದು ವಿವರಿಸಿದ್ದಾರೆ.</p>.<p>ಭಾರತದ ಆರ್ಥಿಕತೆಯ ಮಂದಗತಿಯ ಬೆಳವಣಿಗೆ, ಕಂಪನಿಗಳ ತ್ರೈಮಾಸಿಕ ಪ್ರಗತಿ ಮಾರುಕಟ್ಟೆಯ ನಿರೀಕ್ಷೆಗಿಂತಲೂ ಕಡಿಮೆ ಇರುವುದು ಹೀಗೆ ಇನ್ನೂ ಹಲವು ಸಂಗತಿಗಳು ಷೇರುಪೇಟೆಯಲ್ಲಿ ನಕಾರಾತ್ಮಕ ಚಟುವಟಿಕೆಯನ್ನು ಹೆಚ್ಚಾಗುವಂತೆ ಮಾಡಿವೆ.</p>.<p>ಅಮೆರಿಕ–ಚೀನಾ ಮಧ್ಯೆ ನಡೆಯುತ್ತಿರುವ ವಾಣಿಜ್ಯ ಸಮರವು ಜಾಗತಿಕ ಹೂಡಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಭಾರತದ ಮೇಲೆಯೂ ಅದು ಪ್ರಭಾವಿಸಿದೆ ಎಂದು ತಜ್ಞರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>