ಗದಗ್ನ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿರುವ ದೀನ, ದುರ್ಬಲ, ಅನಾಥ ಮಕ್ಕಳಿಗೆ ಆಶ್ರಯ ನೀಡುವುದು ಪುಣ್ಯದ ಕಾರ್ಯ. ಇಂತಹ ಸತ್ಕಾರ್ಯಗಳನ್ನು ಮಾಡುತ್ತಿರುವ ಬಸವಲಿಂಗ ಪಟ್ಟದ್ದೇವರು ಇತರ ಸ್ವಾಮೀಜಿಗಳಿಗೆ ಮಾದರಿ ಆಗಿದ್ದಾರೆ ಎಂದು ಪ್ರಶಂಸಿಸಿದರು. ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಬಸವಣ್ಣನರ ಆಶಯದಂತೆ ಎಲ್ಲ ಜೀವಿಗಳಿಗೂ ಉತ್ತಮ ಬದುಕು ಕಲ್ಪಿಸಿಕೊಡಬೇಕು ಎಂದು ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದರು.