<p><strong>ನವದೆಹಲಿ: </strong>‘ಒತ್ತಾಯದಿಂದ ಸಾಲ ವಸೂಲಿ ಮಾಡಲು ಬಾಡಿಗೆ ಬಂಟರನ್ನು (ಬೌನ್ಸರ್) ನೇಮಕ ಮಾಡಿಕೊಳ್ಳುವ ಅಧಿಕಾರ ಯಾವುದೇ ಬ್ಯಾಂಕ್ಗೆ ಇಲ್ಲ’ ಎಂದು ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಸ್ಪಷ್ಟಪಡಿಸಿದ್ದಾರೆ.</p>.<p>ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಅವರು ಉತ್ತರ ನೀಡುತ್ತಿದ್ದರು.</p>.<p>ಸಾಲ ವಸೂಲಾತಿಯಲ್ಲಿ ಅನಗತ್ಯ ಕಿರುಕುಳ ನೀಡುವುದು, ಒರಟುತನ ತೋರುವುದು, ತೋಳ್ಬಲ ಬಳಸಿ ಸಾಲಗಾರರನ್ನು ಬೆದರಿಸುವುದಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಸುತ್ತೋಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ.</p>.<p>ಪೊಲೀಸ್ ದೃಢೀಕರಣ ಮತ್ತು ಇತರ ಕೆಲ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರವೇ ಸಾಲ ವಸೂಲಾತಿ ಏಜೆಂಟರನ್ನು ನೇಮಿಸಿಕೊಳ್ಳಲು ಸ್ಪಷ್ಟ ನಿರ್ದೇಶನ ಇದೆ. ಸಾಲ ವಸೂಲಿ ಏಜೆಂಟರು ಸಾಲಗಾರರ ಜತೆ ಒರಟಾಗಿ ವರ್ತಿಸುವುದನ್ನು ಗಂಭೀರವಾಗಿ ಪರಿಗಣಿಸುವುದಾಗಿ ಕೇಂದ್ರೀಯ ಬ್ಯಾಂಕ್ ತಿಳಿಸಿದೆ.</p>.<p>‘ಆರ್ಬಿಐನ ಮಾರ್ಗದರ್ಶಿ ಸೂತ್ರಗಳ ಉಲ್ಲಂಘನೆ ಆಗಿರುವ ಬಗ್ಗೆ ಸಾಕಷ್ಟು ದೂರುಗಳಿವೆ. ಇಂತಹ ಪ್ರಕರಣಗಳಲ್ಲಿ ಬ್ಯಾಂಕ್ನ ಸಾಲ ವಸೂಲಿ ಏಜೆಂಟರ ಮೇಲೆ ಆರ್ಬಿಐ ನಿಷೇಧ ಹೇರಬಹುದಾಗಿದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಒತ್ತಾಯದಿಂದ ಸಾಲ ವಸೂಲಿ ಮಾಡಲು ಬಾಡಿಗೆ ಬಂಟರನ್ನು (ಬೌನ್ಸರ್) ನೇಮಕ ಮಾಡಿಕೊಳ್ಳುವ ಅಧಿಕಾರ ಯಾವುದೇ ಬ್ಯಾಂಕ್ಗೆ ಇಲ್ಲ’ ಎಂದು ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಸ್ಪಷ್ಟಪಡಿಸಿದ್ದಾರೆ.</p>.<p>ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಅವರು ಉತ್ತರ ನೀಡುತ್ತಿದ್ದರು.</p>.<p>ಸಾಲ ವಸೂಲಾತಿಯಲ್ಲಿ ಅನಗತ್ಯ ಕಿರುಕುಳ ನೀಡುವುದು, ಒರಟುತನ ತೋರುವುದು, ತೋಳ್ಬಲ ಬಳಸಿ ಸಾಲಗಾರರನ್ನು ಬೆದರಿಸುವುದಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಸುತ್ತೋಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ.</p>.<p>ಪೊಲೀಸ್ ದೃಢೀಕರಣ ಮತ್ತು ಇತರ ಕೆಲ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರವೇ ಸಾಲ ವಸೂಲಾತಿ ಏಜೆಂಟರನ್ನು ನೇಮಿಸಿಕೊಳ್ಳಲು ಸ್ಪಷ್ಟ ನಿರ್ದೇಶನ ಇದೆ. ಸಾಲ ವಸೂಲಿ ಏಜೆಂಟರು ಸಾಲಗಾರರ ಜತೆ ಒರಟಾಗಿ ವರ್ತಿಸುವುದನ್ನು ಗಂಭೀರವಾಗಿ ಪರಿಗಣಿಸುವುದಾಗಿ ಕೇಂದ್ರೀಯ ಬ್ಯಾಂಕ್ ತಿಳಿಸಿದೆ.</p>.<p>‘ಆರ್ಬಿಐನ ಮಾರ್ಗದರ್ಶಿ ಸೂತ್ರಗಳ ಉಲ್ಲಂಘನೆ ಆಗಿರುವ ಬಗ್ಗೆ ಸಾಕಷ್ಟು ದೂರುಗಳಿವೆ. ಇಂತಹ ಪ್ರಕರಣಗಳಲ್ಲಿ ಬ್ಯಾಂಕ್ನ ಸಾಲ ವಸೂಲಿ ಏಜೆಂಟರ ಮೇಲೆ ಆರ್ಬಿಐ ನಿಷೇಧ ಹೇರಬಹುದಾಗಿದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>