<p><strong>ಮುಂಬೈ:</strong> ದೇಶದ ಆರ್ಥಿಕ ವೃದ್ಧಿ (ಜಿಡಿಪಿ) ದರದ ಬಗ್ಗೆ ಸರ್ಕಾರಿ ಸಂಸ್ಥೆಯ ವರದಿಯು ಹೊಸ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.</p>.<p>ನ್ಯಾಷನಲ್ ಸ್ಯಾಂಪಲ್ ಸರ್ವೆ ಆಫೀಸ್ (ಎನ್ಎಸ್ಎಸ್ಒ) ನಡೆಸಿದ ಅಧ್ಯಯನದಲ್ಲಿ, ಆರ್ಥಿಕ ವೃದ್ಧಿ ದರ ಲೆಕ್ಕ ಹಾಕುವಲ್ಲಿ ಗಮನಾರ್ಹ ದೋಷಗಳು ಇರುವುದು ಪತ್ತೆಯಾಗಿದೆ.</p>.<p>ಆರ್ಥಿಕ ವೃದ್ಧಿ ದರ ಲೆಕ್ಕ ಹಾಕಲು ಪರಿಗಣಿಸಿರುವ ಕಂಪನಿಗಳ ಪೈಕಿ ಒಂದು ಮೂರಾಂಶದಷ್ಟು ಸಂಸ್ಥೆಗಳು ಬಾಗಿಲು ಹಾಕಿವೆ ಇಲ್ಲವೆ ಉತ್ಪಾದನೆ ನಿಲ್ಲಿಸಿವೆ ಅಥವಾ ಅವುಗಳನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ ಎಂದು ‘ಎನ್ಎಸ್ಎಸ್ಒ’ ಅಧ್ಯಯನದಲ್ಲಿ ಉಲ್ಲೇಖಿಸಲಾಗಿದೆ.</p>.<p>ಸರ್ಕಾರಿ ಸಂಸ್ಥೆಗಳು ಬಿಡುಗಡೆ ಮಾಡಿರುವ ವರದಿ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ ಎರಡನೆ ನಿದರ್ಶನ ಇದಾಗಿದೆ. ದೇಶದಲ್ಲಿನನಿರುದ್ಯೋಗ ಪ್ರಮಾಣವು 2017–18ರಲ್ಲಿ 45 ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿ (ಶೇ 6.1) ಇದೆ ಎಂದು ಇದಕ್ಕೂ ಮೊದಲು ಮಾಹಿತಿ ಸೋರಿಕೆಯಾಗಿತ್ತು.</p>.<p>‘ಭಾರತದ ಜಿಡಿಪಿ ವೃದ್ಧಿ ದರ ಮತ್ತು ಅದಕ್ಕೆ ಸಂಬಂಧಿಸಿದ ಅಂಕಿ ಅಂಶಗಳು ಇತ್ತೀಚಿನ ದಿನಗಳಲ್ಲಿ ಅಂತರರಾಷ್ಟ್ರೀಯ ಪರಾಮರ್ಶೆಗೆ ಒಳಪಟ್ಟಿವೆ. ಹೊಸ ವರದಿಗಳು ಜಿಡಿಪಿ ವೃದ್ಧಿ ದರ ಹೆಚ್ಚಳದ ಖಚಿತತೆ ಮತ್ತು ವಿಶ್ವಾಸಾರ್ಹತೆ ಬಗ್ಗೆ ಹೊಸ ಪ್ರಶ್ನೆಗಳಿಗೆ ಎಡೆಮಾಡಿ<br />ಕೊಟ್ಟಿವೆ’ ಎಂದು ಅರ್ಥಶಾಸ್ತ್ರಜ್ಞ ಅಶಿತೋಷ್ ದಾತಾರ್ ಹೇಳಿದ್ದಾರೆ.</p>.<p class="Subhead"><strong>ತಗ್ಗಿದ ಜಿಡಿಪಿ:</strong> ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಿನ ವೃದ್ಧಿ ದರವನ್ನು ಸದ್ಯದ ಎನ್ಡಿಎ ಸರ್ಕಾರವು ಹಿಂದಿನ ವರ್ಷ ತಗ್ಗಿಸಿತ್ತು.</p>.<p>ನಾಲ್ಕು ವರ್ಷಗಳ ಹಿಂದೆ ಪರಿಚಯಿಸಿದ್ದ ಜಿಡಿಪಿ ಲೆಕ್ಕ ಹಾಕುವ ಹೊಸ ವಿಧಾನದಲ್ಲಿ, ಯುಪಿಎ ಸರ್ಕಾರದ ಅಧಿಕಾರಾವಧಿಯಲ್ಲಿನ ಸರಾಸರಿ ಜಿಡಿಪಿ ವೃದ್ಧಿ ದರವು, 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರದ ವರ್ಷಗಳಲ್ಲಿನ ವೃದ್ಧಿ ದರಕ್ಕಿಂತ ಕಡಿಮೆ ಇತ್ತು ಎಂದು ಎನ್ಡಿಎ ಸರ್ಕಾರ ಹೇಳಿಕೊಂಡಿತ್ತು.</p>.<p>ಈ ಬದಲಾವಣೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದ ಬಿಜೆಪಿ, ಹೊಸ ವಿಧಾನವು ವಿಶ್ವದ ಇತರ ಪ್ರಮುಖ ಆರ್ಥಿಕತೆಗಳಲ್ಲಿ ಬಳಸಲಾಗುತ್ತಿದೆ ಎಂದು ಹೇಳಿಕೊಂಡಿತ್ತು.</p>.<p class="Subhead"><strong>ಸರ್ಕಾರಕ್ಕೆ ಮುಜುಗರ:</strong> ಜಿಡಿಪಿ ಕುರಿತು ಹೊಸ ಅನುಮಾನಗಳಿಗೆ ಎಡೆಮಾಡಿಕೊಟ್ಟಿರುವ ವಿದ್ಯಮಾನವು, ಸಾರ್ವತ್ರಿಕ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪಾಲಿಗೆ ತೀವ್ರ ಮುಜುಗರ ಉಂಟು ಮಾಡಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.</p>.<p>ಮೋದಿ ಅವರು ನಿಯಮಿತವಾಗಿ ತಮ್ಮ ಆರ್ಥಿಕ ಸಾಧನೆಗಳ ಬಗ್ಗೆ ಹೇಳಿಕೊಳ್ಳುತ್ತಿರುತ್ತಾರೆ. ಜಿಡಿಪಿ ದರ ಎನ್ಡಿಎ ಸರ್ಕಾರದ ಅಧಿಕಾರಾವಧಿಯಲ್ಲಿ ಹಿಂದಿನ ಸರ್ಕಾರದ ಅವಧಿಗಿಂತ ಉತ್ತಮವಾಗಿದೆ ಎಂದು ಬಿಂಬಿಸಲು ಸರ್ಕಾರ ಅಂಕಿ ಅಂಶಗಳನ್ನೇ ತಿರುಚಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸುತ್ತಲೇ ಇದೆ.</p>.<p><strong>‘ಅಂಕಿ ಅಂಶ ವಿವಾದ ಇತ್ಯರ್ಥಕ್ಕೆ ಯತ್ನ’</strong></p>.<p><strong>ಮುಂಬೈ:</strong> ‘ಆರ್ಥಿಕತೆಗೆ ಸಂಬಂಧಿಸಿದ ಅಂಕಿ ಅಂಶಗಳ ವಿಶ್ವಾಸಾರ್ಹತೆ ಬಗ್ಗೆ ಕಂಡು ಬಂದಿರುವ ಸಂದೇಹಗಳ ನಿವಾರಣೆಗೆ ವಿವೇಕಯುತ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು 15ನೆ ಹಣಕಾಸು ಆಯೋಗದ ಅಧ್ಯಕ್ಷ ಎನ್. ಕೆ. ಸಿಂಗ್ ಹೇಳಿದ್ದಾರೆ.</p>.<p>‘ವಿಶ್ವಾಸಾರ್ಹ ದತ್ತಾಂಶಗಳನ್ನು ಪರಿಗಣಿಸುವ ಸರ್ವಸಮ್ಮತ ವಿಧಾನಗಳ ಬಗ್ಗೆ ನಾವು ನಮ್ಮ ಪ್ರಯತ್ನಗಳನ್ನು ಮಾಡುತ್ತೇವೆ. ಈ ನಿಟ್ಟಿನಲ್ಲಿ ಮಹಾ ಲೇಖಪಾಲರು (ಸಿಎಜಿ) ಮತ್ತು ಆರ್ಬಿಐ ನೆರವು ಪಡೆದುಕೊಳ್ಳಲಾಗುವುದು’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>ಆರ್ಥಿಕತೆ ಕುರಿತ ಅಂಕಿ ಅಂಶಗಳ ವಿಷಯದಲ್ಲಿ ರಾಜಕೀಯ ಹಸ್ತಕ್ಷೇಪದ ಬಗ್ಗೆ ಅರ್ಥಶಾಸ್ತ್ರಜ್ಞರಿಂದಲೂ ಆತಂಕ ವ್ಯಕ್ತವಾಗಿತ್ತು. ಸಾಂಖ್ಯಿಕ ಸಂಘಟನೆಗಳ ಸ್ವಾತಂತ್ರ್ಯ ಮತ್ತು ಸಮಗ್ರತೆ ಕಾಪಾಡುವ ಅಗತ್ಯ ಇದೆ ಎಂದು ಅವರೆಲ್ಲ ಬಲವಾಗಿ ಪ್ರತಿಪಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ದೇಶದ ಆರ್ಥಿಕ ವೃದ್ಧಿ (ಜಿಡಿಪಿ) ದರದ ಬಗ್ಗೆ ಸರ್ಕಾರಿ ಸಂಸ್ಥೆಯ ವರದಿಯು ಹೊಸ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.</p>.<p>ನ್ಯಾಷನಲ್ ಸ್ಯಾಂಪಲ್ ಸರ್ವೆ ಆಫೀಸ್ (ಎನ್ಎಸ್ಎಸ್ಒ) ನಡೆಸಿದ ಅಧ್ಯಯನದಲ್ಲಿ, ಆರ್ಥಿಕ ವೃದ್ಧಿ ದರ ಲೆಕ್ಕ ಹಾಕುವಲ್ಲಿ ಗಮನಾರ್ಹ ದೋಷಗಳು ಇರುವುದು ಪತ್ತೆಯಾಗಿದೆ.</p>.<p>ಆರ್ಥಿಕ ವೃದ್ಧಿ ದರ ಲೆಕ್ಕ ಹಾಕಲು ಪರಿಗಣಿಸಿರುವ ಕಂಪನಿಗಳ ಪೈಕಿ ಒಂದು ಮೂರಾಂಶದಷ್ಟು ಸಂಸ್ಥೆಗಳು ಬಾಗಿಲು ಹಾಕಿವೆ ಇಲ್ಲವೆ ಉತ್ಪಾದನೆ ನಿಲ್ಲಿಸಿವೆ ಅಥವಾ ಅವುಗಳನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ ಎಂದು ‘ಎನ್ಎಸ್ಎಸ್ಒ’ ಅಧ್ಯಯನದಲ್ಲಿ ಉಲ್ಲೇಖಿಸಲಾಗಿದೆ.</p>.<p>ಸರ್ಕಾರಿ ಸಂಸ್ಥೆಗಳು ಬಿಡುಗಡೆ ಮಾಡಿರುವ ವರದಿ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ ಎರಡನೆ ನಿದರ್ಶನ ಇದಾಗಿದೆ. ದೇಶದಲ್ಲಿನನಿರುದ್ಯೋಗ ಪ್ರಮಾಣವು 2017–18ರಲ್ಲಿ 45 ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿ (ಶೇ 6.1) ಇದೆ ಎಂದು ಇದಕ್ಕೂ ಮೊದಲು ಮಾಹಿತಿ ಸೋರಿಕೆಯಾಗಿತ್ತು.</p>.<p>‘ಭಾರತದ ಜಿಡಿಪಿ ವೃದ್ಧಿ ದರ ಮತ್ತು ಅದಕ್ಕೆ ಸಂಬಂಧಿಸಿದ ಅಂಕಿ ಅಂಶಗಳು ಇತ್ತೀಚಿನ ದಿನಗಳಲ್ಲಿ ಅಂತರರಾಷ್ಟ್ರೀಯ ಪರಾಮರ್ಶೆಗೆ ಒಳಪಟ್ಟಿವೆ. ಹೊಸ ವರದಿಗಳು ಜಿಡಿಪಿ ವೃದ್ಧಿ ದರ ಹೆಚ್ಚಳದ ಖಚಿತತೆ ಮತ್ತು ವಿಶ್ವಾಸಾರ್ಹತೆ ಬಗ್ಗೆ ಹೊಸ ಪ್ರಶ್ನೆಗಳಿಗೆ ಎಡೆಮಾಡಿ<br />ಕೊಟ್ಟಿವೆ’ ಎಂದು ಅರ್ಥಶಾಸ್ತ್ರಜ್ಞ ಅಶಿತೋಷ್ ದಾತಾರ್ ಹೇಳಿದ್ದಾರೆ.</p>.<p class="Subhead"><strong>ತಗ್ಗಿದ ಜಿಡಿಪಿ:</strong> ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಿನ ವೃದ್ಧಿ ದರವನ್ನು ಸದ್ಯದ ಎನ್ಡಿಎ ಸರ್ಕಾರವು ಹಿಂದಿನ ವರ್ಷ ತಗ್ಗಿಸಿತ್ತು.</p>.<p>ನಾಲ್ಕು ವರ್ಷಗಳ ಹಿಂದೆ ಪರಿಚಯಿಸಿದ್ದ ಜಿಡಿಪಿ ಲೆಕ್ಕ ಹಾಕುವ ಹೊಸ ವಿಧಾನದಲ್ಲಿ, ಯುಪಿಎ ಸರ್ಕಾರದ ಅಧಿಕಾರಾವಧಿಯಲ್ಲಿನ ಸರಾಸರಿ ಜಿಡಿಪಿ ವೃದ್ಧಿ ದರವು, 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರದ ವರ್ಷಗಳಲ್ಲಿನ ವೃದ್ಧಿ ದರಕ್ಕಿಂತ ಕಡಿಮೆ ಇತ್ತು ಎಂದು ಎನ್ಡಿಎ ಸರ್ಕಾರ ಹೇಳಿಕೊಂಡಿತ್ತು.</p>.<p>ಈ ಬದಲಾವಣೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದ ಬಿಜೆಪಿ, ಹೊಸ ವಿಧಾನವು ವಿಶ್ವದ ಇತರ ಪ್ರಮುಖ ಆರ್ಥಿಕತೆಗಳಲ್ಲಿ ಬಳಸಲಾಗುತ್ತಿದೆ ಎಂದು ಹೇಳಿಕೊಂಡಿತ್ತು.</p>.<p class="Subhead"><strong>ಸರ್ಕಾರಕ್ಕೆ ಮುಜುಗರ:</strong> ಜಿಡಿಪಿ ಕುರಿತು ಹೊಸ ಅನುಮಾನಗಳಿಗೆ ಎಡೆಮಾಡಿಕೊಟ್ಟಿರುವ ವಿದ್ಯಮಾನವು, ಸಾರ್ವತ್ರಿಕ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪಾಲಿಗೆ ತೀವ್ರ ಮುಜುಗರ ಉಂಟು ಮಾಡಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.</p>.<p>ಮೋದಿ ಅವರು ನಿಯಮಿತವಾಗಿ ತಮ್ಮ ಆರ್ಥಿಕ ಸಾಧನೆಗಳ ಬಗ್ಗೆ ಹೇಳಿಕೊಳ್ಳುತ್ತಿರುತ್ತಾರೆ. ಜಿಡಿಪಿ ದರ ಎನ್ಡಿಎ ಸರ್ಕಾರದ ಅಧಿಕಾರಾವಧಿಯಲ್ಲಿ ಹಿಂದಿನ ಸರ್ಕಾರದ ಅವಧಿಗಿಂತ ಉತ್ತಮವಾಗಿದೆ ಎಂದು ಬಿಂಬಿಸಲು ಸರ್ಕಾರ ಅಂಕಿ ಅಂಶಗಳನ್ನೇ ತಿರುಚಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸುತ್ತಲೇ ಇದೆ.</p>.<p><strong>‘ಅಂಕಿ ಅಂಶ ವಿವಾದ ಇತ್ಯರ್ಥಕ್ಕೆ ಯತ್ನ’</strong></p>.<p><strong>ಮುಂಬೈ:</strong> ‘ಆರ್ಥಿಕತೆಗೆ ಸಂಬಂಧಿಸಿದ ಅಂಕಿ ಅಂಶಗಳ ವಿಶ್ವಾಸಾರ್ಹತೆ ಬಗ್ಗೆ ಕಂಡು ಬಂದಿರುವ ಸಂದೇಹಗಳ ನಿವಾರಣೆಗೆ ವಿವೇಕಯುತ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು 15ನೆ ಹಣಕಾಸು ಆಯೋಗದ ಅಧ್ಯಕ್ಷ ಎನ್. ಕೆ. ಸಿಂಗ್ ಹೇಳಿದ್ದಾರೆ.</p>.<p>‘ವಿಶ್ವಾಸಾರ್ಹ ದತ್ತಾಂಶಗಳನ್ನು ಪರಿಗಣಿಸುವ ಸರ್ವಸಮ್ಮತ ವಿಧಾನಗಳ ಬಗ್ಗೆ ನಾವು ನಮ್ಮ ಪ್ರಯತ್ನಗಳನ್ನು ಮಾಡುತ್ತೇವೆ. ಈ ನಿಟ್ಟಿನಲ್ಲಿ ಮಹಾ ಲೇಖಪಾಲರು (ಸಿಎಜಿ) ಮತ್ತು ಆರ್ಬಿಐ ನೆರವು ಪಡೆದುಕೊಳ್ಳಲಾಗುವುದು’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>ಆರ್ಥಿಕತೆ ಕುರಿತ ಅಂಕಿ ಅಂಶಗಳ ವಿಷಯದಲ್ಲಿ ರಾಜಕೀಯ ಹಸ್ತಕ್ಷೇಪದ ಬಗ್ಗೆ ಅರ್ಥಶಾಸ್ತ್ರಜ್ಞರಿಂದಲೂ ಆತಂಕ ವ್ಯಕ್ತವಾಗಿತ್ತು. ಸಾಂಖ್ಯಿಕ ಸಂಘಟನೆಗಳ ಸ್ವಾತಂತ್ರ್ಯ ಮತ್ತು ಸಮಗ್ರತೆ ಕಾಪಾಡುವ ಅಗತ್ಯ ಇದೆ ಎಂದು ಅವರೆಲ್ಲ ಬಲವಾಗಿ ಪ್ರತಿಪಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>