<p>ಮುಂಬೈ (ಪಿಟಿಐ): ’ಕೊರೊನಾ–2‘ ವೈರಸ್ ಹಾವಳಿ ಕಾರಣಕ್ಕೆ ವಹಿವಾಟಿನ ಮೇಲೆ ಆಗಿರುವ ಪರಿಣಾಮದಿಂದ ಕಾರ್ಮಿಕರನ್ನು ರಕ್ಷಿಸಲು ಹರಳು ಮತ್ತು ಚಿನ್ನಾಭರಣ ರಫ್ತು ಉತ್ತೇಜನಾ ಮಂಡಳಿಯು (ಜಿಜೆಇಪಿಸಿ) ₹50 ಕೊಟಿ ಮೊತ್ತದ ಕ್ಷೇಮಾಭಿವೃದ್ಧಿ ನಿಧಿ ಘೋಷಿಸಿದೆ.</p>.<p>‘ಜಗತ್ತೇ ಕೋವಿಡ್–19ಗೆ ಸಿಲುಕಿ ನರಳುತ್ತಿದೆ. ಭಾರತದಲ್ಲಿಯೂ ಇದರ ತೀವ್ರತೆ ಹೆಚ್ಚಾಗುತ್ತಿದೆ. ಇಂತಹ ಕಷ್ಟಕಾಲದಲ್ಲಿ ನಮ್ಮ ಕಾರ್ಮಿಕರ ರಕ್ಷಣೆ ಮಾಡುವುದು ಅಗತ್ಯವಾಗಿದೆ’ ಎಂದು ಮಂಡಳಿಯ ಅಧ್ಯಕ್ಷ ಪ್ರಮೋದ್ ಅಗರ್ವಾಲ್ ತಿಳಿಸಿದ್ದಾರೆ.</p>.<p>ದೇಶದಾದ್ಯಂತ ಈ ವಲಯದಲ್ಲಿ 50 ಲಕ್ಷಕ್ಕೂ ಅಧಿಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.‘ಇಂತಹ ಕಷ್ಟದ ಸಂದರ್ಭದಲ್ಲಿ ಪ್ರತಿಯೊಬ್ಬರೂ ತಮ್ಮ ಉದ್ಯೋಗಿಗಳ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಹಾಗೂ ಮಾನವೀಯತೆಯಿಂದ ವರ್ತಿಸುವಂತೆ’ ಅವರು ಒತ್ತಾಯಿಸಿದ್ದಾರೆ.</p>.<p>‘ಕೇಂದ್ರದ ನಿರ್ಧಾರದಿಂದ ಹರಳು ಮತ್ತು ಚಿನ್ನಾಭರಣ ವಲಯದಲ್ಲಿನ ಎಂಎಸ್ಎಂಇಗಳಿಗೆ ಪ್ರಯೋಜನ ಆಗಲಿದೆ’ ಎಂದು ಮಂಡಳಿಯ ಉಪಾಧ್ಯಕ್ಷ ಕೋಲಿನ್ ಶಾ ಹೇಳಿದ್ದಾರೆ.</p>.<p>₹ 5 ಕೋಟಿಗಿಂತಲೂ ಕಡಿಮೆ ವಾರ್ಷಿಕ ವರಮಾನ ಹೊಂದಿರುವ ಉದ್ದಿಮೆಗಳಿಗೆಜಿಎಸ್ಟಿ ರಿಟರ್ನ್ಸ್ ಪಾವತಿಗೆ ವಿಳಂಬ ಶುಲ್ಕ, ದಂಡ ಮತ್ತು ಬಡ್ಡಿದರ ಇಲ್ಲದೇ ಮೂರು ತಿಂಗಳು ಅವಧಿ ವಿಸ್ತರಣೆ ಮಾಡಿರುವುದು ನಗದು ಒತ್ತಡವನ್ನು ಕಡಿಮೆ ಮಾಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ (ಪಿಟಿಐ): ’ಕೊರೊನಾ–2‘ ವೈರಸ್ ಹಾವಳಿ ಕಾರಣಕ್ಕೆ ವಹಿವಾಟಿನ ಮೇಲೆ ಆಗಿರುವ ಪರಿಣಾಮದಿಂದ ಕಾರ್ಮಿಕರನ್ನು ರಕ್ಷಿಸಲು ಹರಳು ಮತ್ತು ಚಿನ್ನಾಭರಣ ರಫ್ತು ಉತ್ತೇಜನಾ ಮಂಡಳಿಯು (ಜಿಜೆಇಪಿಸಿ) ₹50 ಕೊಟಿ ಮೊತ್ತದ ಕ್ಷೇಮಾಭಿವೃದ್ಧಿ ನಿಧಿ ಘೋಷಿಸಿದೆ.</p>.<p>‘ಜಗತ್ತೇ ಕೋವಿಡ್–19ಗೆ ಸಿಲುಕಿ ನರಳುತ್ತಿದೆ. ಭಾರತದಲ್ಲಿಯೂ ಇದರ ತೀವ್ರತೆ ಹೆಚ್ಚಾಗುತ್ತಿದೆ. ಇಂತಹ ಕಷ್ಟಕಾಲದಲ್ಲಿ ನಮ್ಮ ಕಾರ್ಮಿಕರ ರಕ್ಷಣೆ ಮಾಡುವುದು ಅಗತ್ಯವಾಗಿದೆ’ ಎಂದು ಮಂಡಳಿಯ ಅಧ್ಯಕ್ಷ ಪ್ರಮೋದ್ ಅಗರ್ವಾಲ್ ತಿಳಿಸಿದ್ದಾರೆ.</p>.<p>ದೇಶದಾದ್ಯಂತ ಈ ವಲಯದಲ್ಲಿ 50 ಲಕ್ಷಕ್ಕೂ ಅಧಿಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.‘ಇಂತಹ ಕಷ್ಟದ ಸಂದರ್ಭದಲ್ಲಿ ಪ್ರತಿಯೊಬ್ಬರೂ ತಮ್ಮ ಉದ್ಯೋಗಿಗಳ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಹಾಗೂ ಮಾನವೀಯತೆಯಿಂದ ವರ್ತಿಸುವಂತೆ’ ಅವರು ಒತ್ತಾಯಿಸಿದ್ದಾರೆ.</p>.<p>‘ಕೇಂದ್ರದ ನಿರ್ಧಾರದಿಂದ ಹರಳು ಮತ್ತು ಚಿನ್ನಾಭರಣ ವಲಯದಲ್ಲಿನ ಎಂಎಸ್ಎಂಇಗಳಿಗೆ ಪ್ರಯೋಜನ ಆಗಲಿದೆ’ ಎಂದು ಮಂಡಳಿಯ ಉಪಾಧ್ಯಕ್ಷ ಕೋಲಿನ್ ಶಾ ಹೇಳಿದ್ದಾರೆ.</p>.<p>₹ 5 ಕೋಟಿಗಿಂತಲೂ ಕಡಿಮೆ ವಾರ್ಷಿಕ ವರಮಾನ ಹೊಂದಿರುವ ಉದ್ದಿಮೆಗಳಿಗೆಜಿಎಸ್ಟಿ ರಿಟರ್ನ್ಸ್ ಪಾವತಿಗೆ ವಿಳಂಬ ಶುಲ್ಕ, ದಂಡ ಮತ್ತು ಬಡ್ಡಿದರ ಇಲ್ಲದೇ ಮೂರು ತಿಂಗಳು ಅವಧಿ ವಿಸ್ತರಣೆ ಮಾಡಿರುವುದು ನಗದು ಒತ್ತಡವನ್ನು ಕಡಿಮೆ ಮಾಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>