ಬೆಂಗಳೂರು: ‘ಸ್ಟಾರ್ಟ್ಅಪ್ಗಳಿಗೆ ಧನಸಹಾಯಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನವನ್ನು 2024ರ ಜ. 1ರವರೆಗೆ ವಿಸ್ತರಿಸಲಾಗಿದೆ’ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಹಿಂದೆ ಡಿ. 23ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.
ಹೊಸ ಸ್ಟಾರ್ಟ್ಅಪ್ಗಳಿಂದ ವಿನೂತನ ಚಿಂತನೆಯನ್ನು ಹೊರತಂದು ಪೋಷಿಸುವ ಜೊತೆಗೆ ವಿವಿಧ ಹಂತಗಳಲ್ಲಿ ಹಣಕಾಸಿನ ನೆರವು ನೀಡುವ ಉದ್ದೇಶದಿಂದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಈ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆಯಡಿ ಸ್ಟಾರ್ಟ್ಅಪ್ಗಳಿಗೆ ₹ 50 ಲಕ್ಷವರೆಗೆ ಅನುದಾನ ನೀಡಲಾಗುತ್ತದೆ.