ಬೆಂಗಳೂರಿನಲ್ಲಿಯೇ ಎಂಟು ಲಕ್ಷಕ್ಕಿಂತ ಹೆಚ್ಚು ಜನ ಗಾರ್ಮೆಂಟ್ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಯುರೋಪಿನಲ್ಲಿ ಮಾರುಕಟ್ಟೆ ಈಗಷ್ಟೇ ತೆರೆದುಕೊಂಡಿದೆ. ಅಲ್ಲಿಂದ ದೊಡ್ಡ ಸಂಖ್ಯೆಯಲ್ಲಿ ವಸ್ತ್ರ, ಉಡುಪು ಸಿದ್ಧಪಡಿಸುವಂತೆ ಕೋರಿಕೆ ಬಂದಿದೆ. ಈ ಸಂದರ್ಭದಲ್ಲಿ ಕಾಲಮಿತಿಯಲ್ಲಿ ಸಿದ್ಧಪಡಿಸಿ ಕೊಡದಿದ್ದರೆ ಗಾರ್ಮೆಂಟ್ಸ್ ಉದ್ಯಮವು ಭಾರಿ ದಂಡ ತೆರಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಒಕ್ಕೂಟದ ಅಧ್ಯಕ್ಷ ಬಿ.ಸಿ. ಪ್ರಭಾಕರ್ ಮನವಿ ಮಾಡಿದ್ದಾರೆ.