<p><strong>ನವದೆಹಲಿ:</strong> ‘ಬಂದರು ನಿರ್ವಹಣೆಯಿಂದ ಇಂಧನ ಉತ್ಪಾದನೆಯವರೆಗೆ ಉದ್ಯಮಗಳನ್ನು ಮುನ್ನಡೆಸುತ್ತಿರುವ ಅದಾನಿ ಸಮೂಹವು ಈಗ ಸಂಶೋಧನೆಗೆ ವೇಗ ನೀಡಲು, ಪಾರದರ್ಶಕತೆಯನ್ನು ಹೆಚ್ಚಿಸಲು ಮುಂದಡಿ ಇರಿಸಲಿದೆ’ ಎಂದು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಹೇಳಿದ್ದಾರೆ.</p>.<p>ಸಮೂಹದ ಸಿಬ್ಬಂದಿಗೆ ಪತ್ರ ಬರೆದಿರುವ ಅದಾನಿ ಅವರು, ‘2023ರ ಜನವರಿಯಲ್ಲಿ ಅಮೆರಿಕದ ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆಯು ಸಮೂಹದ ಕಂಪನಿಗಳ ಮೇಲೆ ಹಲವು ಆರೋಪಗಳನ್ನು ಹೊರಿಸಿತ್ತು. ಈ ಆರೋಪಗಳನ್ನು ಸಮೂಹವು ತಿರಸ್ಕರಿಸಿತ್ತು. ಈ ಬಗ್ಗೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ಸಮಗ್ರ ತನಿಖೆ ನಡೆಸಿ, ಆರೋಪಗಳನ್ನು ಆಧಾರರಹಿತ ಎಂದು ಹೇಳಿದೆ’ ಎಂದು ತಿಳಿಸಿದ್ದಾರೆ.</p>.<p>ಪಾರದರ್ಶಕತೆ, ನಾವೀನ್ಯ, ದೀರ್ಘಕಾಲೀನ ಮೌಲ್ಯ ಸೃಷ್ಟಿ ಮತ್ತು ಪರಿವರ್ತನೆಯಂತಹ ಅಂಶಗಳ ಮೇಲೆ ಕಂಪನಿ ತನ್ನ ಗಮನವನ್ನು ಕೇಂದ್ರೀಕರಿಸಿದೆ ಎಂದು ಹೇಳಿದ್ದಾರೆ.</p>.<p>‘ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ನಾವು ಮಾಡುವ ಎಲ್ಲವುಗಳ ಅಡಿಪಾಯ ಆಗಿರಬೇಕು. ಈ ವಿವಾದವೊಂದು ಅಗ್ನಿಪರೀಕ್ಷೆ ಆಗಿತ್ತು. ಪ್ರತಿ ಬಿಕ್ಕಟ್ಟು ಸಂಸ್ಥೆಯನ್ನು ಸದೃಢಗೊಳಿಸುತ್ತದೆ’ ಎಂದು ಪತ್ರದಲ್ಲಿ ಹೇಳಿದ್ದಾರೆ.</p>.<p>ಹಿಂಡನ್ಬರ್ಗ್ ಆರೋಪದಿಂದ ಅದಾನಿ ಸಮೂಹದ ಮಾರುಕಟ್ಟೆ ಬಂಡವಾಳ ಮೌಲ್ಯ ₹13 ಲಕ್ಷ ಕೋಟಿಗೂ ಹೆಚ್ಚು ಕುಸಿದಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬಂದರು ನಿರ್ವಹಣೆಯಿಂದ ಇಂಧನ ಉತ್ಪಾದನೆಯವರೆಗೆ ಉದ್ಯಮಗಳನ್ನು ಮುನ್ನಡೆಸುತ್ತಿರುವ ಅದಾನಿ ಸಮೂಹವು ಈಗ ಸಂಶೋಧನೆಗೆ ವೇಗ ನೀಡಲು, ಪಾರದರ್ಶಕತೆಯನ್ನು ಹೆಚ್ಚಿಸಲು ಮುಂದಡಿ ಇರಿಸಲಿದೆ’ ಎಂದು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಹೇಳಿದ್ದಾರೆ.</p>.<p>ಸಮೂಹದ ಸಿಬ್ಬಂದಿಗೆ ಪತ್ರ ಬರೆದಿರುವ ಅದಾನಿ ಅವರು, ‘2023ರ ಜನವರಿಯಲ್ಲಿ ಅಮೆರಿಕದ ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆಯು ಸಮೂಹದ ಕಂಪನಿಗಳ ಮೇಲೆ ಹಲವು ಆರೋಪಗಳನ್ನು ಹೊರಿಸಿತ್ತು. ಈ ಆರೋಪಗಳನ್ನು ಸಮೂಹವು ತಿರಸ್ಕರಿಸಿತ್ತು. ಈ ಬಗ್ಗೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ಸಮಗ್ರ ತನಿಖೆ ನಡೆಸಿ, ಆರೋಪಗಳನ್ನು ಆಧಾರರಹಿತ ಎಂದು ಹೇಳಿದೆ’ ಎಂದು ತಿಳಿಸಿದ್ದಾರೆ.</p>.<p>ಪಾರದರ್ಶಕತೆ, ನಾವೀನ್ಯ, ದೀರ್ಘಕಾಲೀನ ಮೌಲ್ಯ ಸೃಷ್ಟಿ ಮತ್ತು ಪರಿವರ್ತನೆಯಂತಹ ಅಂಶಗಳ ಮೇಲೆ ಕಂಪನಿ ತನ್ನ ಗಮನವನ್ನು ಕೇಂದ್ರೀಕರಿಸಿದೆ ಎಂದು ಹೇಳಿದ್ದಾರೆ.</p>.<p>‘ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ನಾವು ಮಾಡುವ ಎಲ್ಲವುಗಳ ಅಡಿಪಾಯ ಆಗಿರಬೇಕು. ಈ ವಿವಾದವೊಂದು ಅಗ್ನಿಪರೀಕ್ಷೆ ಆಗಿತ್ತು. ಪ್ರತಿ ಬಿಕ್ಕಟ್ಟು ಸಂಸ್ಥೆಯನ್ನು ಸದೃಢಗೊಳಿಸುತ್ತದೆ’ ಎಂದು ಪತ್ರದಲ್ಲಿ ಹೇಳಿದ್ದಾರೆ.</p>.<p>ಹಿಂಡನ್ಬರ್ಗ್ ಆರೋಪದಿಂದ ಅದಾನಿ ಸಮೂಹದ ಮಾರುಕಟ್ಟೆ ಬಂಡವಾಳ ಮೌಲ್ಯ ₹13 ಲಕ್ಷ ಕೋಟಿಗೂ ಹೆಚ್ಚು ಕುಸಿದಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>