<p><strong>ಬೆಂಗಳೂರು</strong>: ನಗರದಲ್ಲಿ ಇತ್ತೀಚೆಗೆ ನಡೆದ ‘ಜಿಸಿಸಿ ಲೀಡರ್ಸ್ ಕನೆಕ್ಟ್’ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿಸಿಸಿ) ಬೆಂಬಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (ಎಸ್ಬಿಐ), ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಜೊತೆಗೆ ತಿಳಿವಳಿಕೆ ಒಪ್ಪಂದ ಪತ್ರಕ್ಕೆ ಅಂಕಿತ ಹಾಕಿದೆ.</p>.<p>ಕೆಡಿಇಎಂ ಅಧ್ಯಕ್ಷ ಬಿ.ವಿ. ನಾಯ್ಡು ಅವರ ಸಮ್ಮುಖದಲ್ಲಿ ಬ್ಯಾಂಕ್ನ ಬೆಂಗಳೂರು ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ ಮತ್ತು ಕೆಡಿಇಎಂ ಸಿಇಒ ಸಂಜೀವ್ ಗುಪ್ತಾ ಸಹಿ ಹಾಕಿದರು.</p>.<p>ರಾಜ್ಯದಲ್ಲಿ ಜಿಸಿಸಿಗಳನ್ನು ಸಕ್ರಿಯಗೊಳಿಸುವ ಮತ್ತು ಸಬಲೀಕರಣಗೊಳಿಸುವ ಗುರಿಗೆ ಈ ಒಪ್ಪಂದವು ನೆರವಾಗಲಿದೆ. ಬೆಂಗಳೂರಿನಲ್ಲಿ ದೇಶದ ಮೊದಲ ವಿಶಿಷ್ಟ ಜಿಸಿಸಿ ಕೇಂದ್ರ ತೆರೆಯಲಾಗುವುದು ಎಂದು ಬ್ಯಾಂಕ್ ತಿಳಿಸಿದೆ.</p>.<p>ಜಿಸಿಸಿ, ನವೋದ್ಯಮ ಮತ್ತು ಐ.ಟಿ–ಬಿ.ಟಿ ವಲಯದ ಪ್ರಮುಖ ನೇಮಕಾತಿಗೆ ಪರಿಹಾರ ಒದಗಿಸುವ ಜ್ಯೋಯಿನ್ ಗ್ರೂಪ್ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೆಸ್ಟರ್ನ್ ಡಿಜಿಟಲ್ ನಿರ್ದೇಶಕ ವೀರ ಲೋಕೇಶ್, ಬಾಯರ್ ಇಂಡಿಯಾದ ರಾಷ್ಟ್ರೀಯ ಮುಖ್ಯಸ್ಥೆ ಶಾರದಾ, ಡೆಲಾಯ್ಟ್ ಸಂಸ್ಥೆಯ ಪಾಲುದಾರ ಆದಿತ್ಯ ಮೀನಾ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಇತ್ತೀಚೆಗೆ ನಡೆದ ‘ಜಿಸಿಸಿ ಲೀಡರ್ಸ್ ಕನೆಕ್ಟ್’ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿಸಿಸಿ) ಬೆಂಬಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (ಎಸ್ಬಿಐ), ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಜೊತೆಗೆ ತಿಳಿವಳಿಕೆ ಒಪ್ಪಂದ ಪತ್ರಕ್ಕೆ ಅಂಕಿತ ಹಾಕಿದೆ.</p>.<p>ಕೆಡಿಇಎಂ ಅಧ್ಯಕ್ಷ ಬಿ.ವಿ. ನಾಯ್ಡು ಅವರ ಸಮ್ಮುಖದಲ್ಲಿ ಬ್ಯಾಂಕ್ನ ಬೆಂಗಳೂರು ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ ಮತ್ತು ಕೆಡಿಇಎಂ ಸಿಇಒ ಸಂಜೀವ್ ಗುಪ್ತಾ ಸಹಿ ಹಾಕಿದರು.</p>.<p>ರಾಜ್ಯದಲ್ಲಿ ಜಿಸಿಸಿಗಳನ್ನು ಸಕ್ರಿಯಗೊಳಿಸುವ ಮತ್ತು ಸಬಲೀಕರಣಗೊಳಿಸುವ ಗುರಿಗೆ ಈ ಒಪ್ಪಂದವು ನೆರವಾಗಲಿದೆ. ಬೆಂಗಳೂರಿನಲ್ಲಿ ದೇಶದ ಮೊದಲ ವಿಶಿಷ್ಟ ಜಿಸಿಸಿ ಕೇಂದ್ರ ತೆರೆಯಲಾಗುವುದು ಎಂದು ಬ್ಯಾಂಕ್ ತಿಳಿಸಿದೆ.</p>.<p>ಜಿಸಿಸಿ, ನವೋದ್ಯಮ ಮತ್ತು ಐ.ಟಿ–ಬಿ.ಟಿ ವಲಯದ ಪ್ರಮುಖ ನೇಮಕಾತಿಗೆ ಪರಿಹಾರ ಒದಗಿಸುವ ಜ್ಯೋಯಿನ್ ಗ್ರೂಪ್ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೆಸ್ಟರ್ನ್ ಡಿಜಿಟಲ್ ನಿರ್ದೇಶಕ ವೀರ ಲೋಕೇಶ್, ಬಾಯರ್ ಇಂಡಿಯಾದ ರಾಷ್ಟ್ರೀಯ ಮುಖ್ಯಸ್ಥೆ ಶಾರದಾ, ಡೆಲಾಯ್ಟ್ ಸಂಸ್ಥೆಯ ಪಾಲುದಾರ ಆದಿತ್ಯ ಮೀನಾ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>