<p><strong>ಮುಂಬೈ</strong>: ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 7ಕ್ಕೆ ತಲುಪುವ ಸಾಧ್ಯತೆ ಇದೆ’ ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ (ಸಿಇಎ) ವಿ. ಅನಂತ ನಾಗೇಶ್ವರನ್ ಹೇಳಿದ್ದಾರೆ.</p>.<p>ಮೂರು ಜಾಗತಿಕ ರೇಟಿಂಗ್ ಸಂಸ್ಥೆಗಳು ಇತ್ತೀಚೆಗೆ ದೇಶದ ರೇಟಿಂಗ್ ಹೆಚ್ಚಿಸಿವೆ. ದೇಶವು ಇದೇ ಪಥದಲ್ಲಿ ಮುಂದುವರಿದರೆ ಶೀಘ್ರ ‘ಎ’ ರೇಟಿಂಗ್ ವರ್ಗಕ್ಕೆ ಸೇರ್ಪಡೆ ಆಗಬಹುದು ಎಂದು ಬುಧವಾರ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.</p>.<p>ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತೆಗೆದುಕೊಂಡ ಕ್ರಮಗಳು ದೇಶದ ಆರ್ಥಿಕತೆಯನ್ನು ‘ಆರಾಮದಾಯಕ ಸ್ಥಾನದಲ್ಲಿ’ ಇರಿಸುತ್ತವೆ. ಆದಾಯ ತೆರಿಗೆ ವಿನಾಯಿತಿ ಮತ್ತು ಜಿಎಸ್ಟಿ ಇಳಿಕೆಯಂತಹ ಆರ್ಥಿಕ ಕ್ರಮಗಳು ದೇಶದ ಆರ್ಥಿಕ ಪ್ರಗತಿಯನ್ನು ಹೆಚ್ಚಿಸಲಿವೆ ಎಂದು ಹೇಳಿದ್ದಾರೆ.</p>.<p>ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 6.3ಕ್ಕೆ ಇಳಿಕೆ ಆಗಬಹುದು ಎಂದು ಫೆಬ್ರುವರಿಯಲ್ಲಿ ಅನಂತ ನಾಗೇಶ್ವರನ್ ಹೇಳಿದ್ದರು. ಅಮೆರಿಕದ ಸುಂಕದಿಂದ ಜಿಡಿಪಿ ಶೇ 6ಕ್ಕೆ ಇಳಿಯುವ ನಿರೀಕ್ಷೆ ಇದೆ ಎಂದು ಹೇಳಿದ್ದರು. </p>
<p><strong>ಮುಂಬೈ</strong>: ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 7ಕ್ಕೆ ತಲುಪುವ ಸಾಧ್ಯತೆ ಇದೆ’ ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ (ಸಿಇಎ) ವಿ. ಅನಂತ ನಾಗೇಶ್ವರನ್ ಹೇಳಿದ್ದಾರೆ.</p>.<p>ಮೂರು ಜಾಗತಿಕ ರೇಟಿಂಗ್ ಸಂಸ್ಥೆಗಳು ಇತ್ತೀಚೆಗೆ ದೇಶದ ರೇಟಿಂಗ್ ಹೆಚ್ಚಿಸಿವೆ. ದೇಶವು ಇದೇ ಪಥದಲ್ಲಿ ಮುಂದುವರಿದರೆ ಶೀಘ್ರ ‘ಎ’ ರೇಟಿಂಗ್ ವರ್ಗಕ್ಕೆ ಸೇರ್ಪಡೆ ಆಗಬಹುದು ಎಂದು ಬುಧವಾರ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.</p>.<p>ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತೆಗೆದುಕೊಂಡ ಕ್ರಮಗಳು ದೇಶದ ಆರ್ಥಿಕತೆಯನ್ನು ‘ಆರಾಮದಾಯಕ ಸ್ಥಾನದಲ್ಲಿ’ ಇರಿಸುತ್ತವೆ. ಆದಾಯ ತೆರಿಗೆ ವಿನಾಯಿತಿ ಮತ್ತು ಜಿಎಸ್ಟಿ ಇಳಿಕೆಯಂತಹ ಆರ್ಥಿಕ ಕ್ರಮಗಳು ದೇಶದ ಆರ್ಥಿಕ ಪ್ರಗತಿಯನ್ನು ಹೆಚ್ಚಿಸಲಿವೆ ಎಂದು ಹೇಳಿದ್ದಾರೆ.</p>.<p>ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 6.3ಕ್ಕೆ ಇಳಿಕೆ ಆಗಬಹುದು ಎಂದು ಫೆಬ್ರುವರಿಯಲ್ಲಿ ಅನಂತ ನಾಗೇಶ್ವರನ್ ಹೇಳಿದ್ದರು. ಅಮೆರಿಕದ ಸುಂಕದಿಂದ ಜಿಡಿಪಿ ಶೇ 6ಕ್ಕೆ ಇಳಿಯುವ ನಿರೀಕ್ಷೆ ಇದೆ ಎಂದು ಹೇಳಿದ್ದರು. </p>