<p><strong>ನವದೆಹಲಿ</strong>: ಎಲ್ಲಾ ಪೆಟ್ರೋಲ್ ಬಂಕ್ಗಳು ತನ್ನ ವ್ಯಾಪ್ತಿಯ 100 ಮೀಟರ್ ಸುತ್ತಮುತ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿಯು (ಪಿಎನ್ಜಿಆರ್ಬಿ) ಸೂಚಿಸಿದೆ.</p>.<p>ಮೇ ತಿಂಗಳಿನಲ್ಲಿ ಮುಂಬೈನ ಘಾಟ್ಕೊಪರ್ ಪೆಟ್ರೋಲ್ ಬಂಕ್ ಮೇಲೆ ಬೃಹತ್ ಜಾಹೀರಾತು ಫಲಕ ಉರುಳಿ ಬಿದ್ದು 17 ಮಂದಿ ಮೃತಪಟ್ಟಿದ್ದರು. ಈ ಘಟನೆ ಕುರಿತು ತನಿಖೆ ನಡೆಸಲು ಮಂಡಳಿಯಿಂದ ಸಮಿತಿ ರಚಿಸಲಾಗಿತ್ತು.</p>.<p>ಸಮಿತಿಯು ಮಂಡಳಿಗೆ ಅಂತಿಮ ವರದಿ ಸಲ್ಲಿಸಿದೆ. ಸಮಿತಿಯ ಶಿಫಾರಸಿನಂತೆ ಎಲ್ಲ ಇಂಧನ ಮಾರಾಟಗಾರರು ಮತ್ತು ಷೇರುದಾರರು ಒಂದು ತಿಂಗಳೊಳಗೆ ಬಂಕ್ನ ಆವರಣದ ಸುತ್ತಮುತ್ತ ಸುರಕ್ಷತಾ ಕ್ರಮಕೈಗೊಳ್ಳಬೇಕು ಎಂದು ಹೇಳಿದೆ.</p>.<p>ಆದರೆ, ಸಮಿತಿಯು ಘಟನೆ ಬಗ್ಗೆ ತನಿಖೆ ಮೂಲಕ ಪತ್ತೆ ಹಚ್ಚಿರುವ ವಿವರನ್ನು ಮಂಡಳಿಯು ಬಹಿರಂಗಪಡಿಸಿಲ್ಲ.</p>.<p>ಬಂಕ್ನ ಆವರಣ ಹಾಗೂ ಸುತ್ತಮುತ್ತ ಇರುವ ಅಪಾಯಕಾರಿ ಜಾಹೀರಾತು ಫಲಕಗಳು, ಬಿಲ್ ಬೋರ್ಡ್, ಕಟ್ಟಡಗಳನ್ನು ಗುರುತಿಸಬೇಕು. ಇವುಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎಲ್ಲಾ ಪೆಟ್ರೋಲ್ ಬಂಕ್ಗಳು ತನ್ನ ವ್ಯಾಪ್ತಿಯ 100 ಮೀಟರ್ ಸುತ್ತಮುತ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿಯು (ಪಿಎನ್ಜಿಆರ್ಬಿ) ಸೂಚಿಸಿದೆ.</p>.<p>ಮೇ ತಿಂಗಳಿನಲ್ಲಿ ಮುಂಬೈನ ಘಾಟ್ಕೊಪರ್ ಪೆಟ್ರೋಲ್ ಬಂಕ್ ಮೇಲೆ ಬೃಹತ್ ಜಾಹೀರಾತು ಫಲಕ ಉರುಳಿ ಬಿದ್ದು 17 ಮಂದಿ ಮೃತಪಟ್ಟಿದ್ದರು. ಈ ಘಟನೆ ಕುರಿತು ತನಿಖೆ ನಡೆಸಲು ಮಂಡಳಿಯಿಂದ ಸಮಿತಿ ರಚಿಸಲಾಗಿತ್ತು.</p>.<p>ಸಮಿತಿಯು ಮಂಡಳಿಗೆ ಅಂತಿಮ ವರದಿ ಸಲ್ಲಿಸಿದೆ. ಸಮಿತಿಯ ಶಿಫಾರಸಿನಂತೆ ಎಲ್ಲ ಇಂಧನ ಮಾರಾಟಗಾರರು ಮತ್ತು ಷೇರುದಾರರು ಒಂದು ತಿಂಗಳೊಳಗೆ ಬಂಕ್ನ ಆವರಣದ ಸುತ್ತಮುತ್ತ ಸುರಕ್ಷತಾ ಕ್ರಮಕೈಗೊಳ್ಳಬೇಕು ಎಂದು ಹೇಳಿದೆ.</p>.<p>ಆದರೆ, ಸಮಿತಿಯು ಘಟನೆ ಬಗ್ಗೆ ತನಿಖೆ ಮೂಲಕ ಪತ್ತೆ ಹಚ್ಚಿರುವ ವಿವರನ್ನು ಮಂಡಳಿಯು ಬಹಿರಂಗಪಡಿಸಿಲ್ಲ.</p>.<p>ಬಂಕ್ನ ಆವರಣ ಹಾಗೂ ಸುತ್ತಮುತ್ತ ಇರುವ ಅಪಾಯಕಾರಿ ಜಾಹೀರಾತು ಫಲಕಗಳು, ಬಿಲ್ ಬೋರ್ಡ್, ಕಟ್ಟಡಗಳನ್ನು ಗುರುತಿಸಬೇಕು. ಇವುಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>