<p><strong>ನವದೆಹಲಿ: ಅ</strong>ಮೆರಿಕದ ಸಿಲಿಕಾನ್ ವ್ಯಾಲಿ ಬ್ಯಾಂಕ್ (ಎಸ್ವಿಬಿ) ದಿವಾಳಿ ಆಗಿರುವುದರ ಪರಿಣಾಮವು ದೇಶದ ಷೇರುಪೇಟೆಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಕಂಡುಬರುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.</p>.<p>ಇದರ ಜೊತೆಗೆ ಹಣದುಬ್ಬರ ಮತ್ತು ವಿದೇಶಿ ಬಂಡವಾಳ ಒಳಹರಿವು ಸಹ ವಹಿವಾಟಿನಲ್ಲಿ ಏರಿಳಿತ ಸೃಷ್ಟಿಸುವ ನಿರೀಕ್ಷೆ ಮಾಡಲಾಗಿದೆ. ಫೆಬ್ರುವರಿ ತಿಂಗಳ ಗ್ರಾಹಕ ದರ ಸೂಚ್ಯಂಕ ಆಧರಿಸಿದ ಹಣದುಬ್ಬರವು ಸೋಮವಾರ ಬಿಡುಗಡೆ ಆಗಲಿದೆ.</p>.<p>ಜಾಗತಿಕ ವಿದ್ಯಮಾನಗಳು ದುರ್ಬಲ ಆಗಿರುವುದರಿಂದ ಭಾರತದ ಷೇರುಪೇಟೆಗಳಲ್ಲಿ ವಹಿವಾಟು ಇಳಿಕೆ ಆಗುತ್ತಿದೆ. ಮುಂದಿನವಾರವೂ ಇದೇ ಸ್ಥಿತಿ ಇರಲಿದೆ ಎಂದು ಸ್ವಸ್ತಿಕ್ ಇನ್ವೆಸ್ಟ್ಮಾರ್ಟ್ ಲಿಮಿಟೆಡ್ನ ಸಂಶೋಧನಾ ಮುಖ್ಯಸ್ಥ ಸಂತೋಷ್ ಮೀನಾ ಹೇಳಿದ್ದಾರೆ.</p>.<p>ಹಣದುಬ್ಬರವನ್ನು ನಿಯಂತ್ರಿಸಲು ಕೇಂದ್ರೀಯ ಬ್ಯಾಂಕ್ಗಳು ಬಡ್ಡಿದರ ಹೆಚ್ಚಳ ಮಾಡುತ್ತಿವೆ. ಈ ನಡುವೆ, ನವೋದ್ಯಮಗಳಿಗೆ ಹಣಕಾಸಿನ ನೆರವು ನೀಡುವ ಎಸ್ವಿಬಿ ವೈಫಲ್ಯವು ಜಾಗತಿಕ ಹಣಕಾಸು ವ್ಯವಸ್ಥೆಯ ಸ್ಥಿತಿಯ ಬಗ್ಗೆ ಆತಂಕ ಮೂಡಿಸಿದೆ.</p>.<p>ಇನ್ನೂ ಹೆಚ್ಚಿನ ಸಮಯದವರೆಗೆ ಮತ್ತು ತ್ವರಿತವಾಗಿ ಬಡ್ಡಿದರ ಹೆಚ್ಚಳ ಮಾಡುವ ಬಗ್ಗೆ ಅಮೆರಿಕದ ಫೆಡರಲ್ ರಿಸರ್ವ್ ಸೂಚನೆ ನೀಡಿದೆ. ಇದರಿಂದಾಗಿ ಜಾಗತಿಕ ಮಾರುಕಟ್ಟೆಗಳಲ್ಲಿ ಅನಿಶ್ಚಿತ ಸ್ಥಿತಿ ನಿರ್ಮಾಣವಾಗಿದೆ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ಅ</strong>ಮೆರಿಕದ ಸಿಲಿಕಾನ್ ವ್ಯಾಲಿ ಬ್ಯಾಂಕ್ (ಎಸ್ವಿಬಿ) ದಿವಾಳಿ ಆಗಿರುವುದರ ಪರಿಣಾಮವು ದೇಶದ ಷೇರುಪೇಟೆಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಕಂಡುಬರುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.</p>.<p>ಇದರ ಜೊತೆಗೆ ಹಣದುಬ್ಬರ ಮತ್ತು ವಿದೇಶಿ ಬಂಡವಾಳ ಒಳಹರಿವು ಸಹ ವಹಿವಾಟಿನಲ್ಲಿ ಏರಿಳಿತ ಸೃಷ್ಟಿಸುವ ನಿರೀಕ್ಷೆ ಮಾಡಲಾಗಿದೆ. ಫೆಬ್ರುವರಿ ತಿಂಗಳ ಗ್ರಾಹಕ ದರ ಸೂಚ್ಯಂಕ ಆಧರಿಸಿದ ಹಣದುಬ್ಬರವು ಸೋಮವಾರ ಬಿಡುಗಡೆ ಆಗಲಿದೆ.</p>.<p>ಜಾಗತಿಕ ವಿದ್ಯಮಾನಗಳು ದುರ್ಬಲ ಆಗಿರುವುದರಿಂದ ಭಾರತದ ಷೇರುಪೇಟೆಗಳಲ್ಲಿ ವಹಿವಾಟು ಇಳಿಕೆ ಆಗುತ್ತಿದೆ. ಮುಂದಿನವಾರವೂ ಇದೇ ಸ್ಥಿತಿ ಇರಲಿದೆ ಎಂದು ಸ್ವಸ್ತಿಕ್ ಇನ್ವೆಸ್ಟ್ಮಾರ್ಟ್ ಲಿಮಿಟೆಡ್ನ ಸಂಶೋಧನಾ ಮುಖ್ಯಸ್ಥ ಸಂತೋಷ್ ಮೀನಾ ಹೇಳಿದ್ದಾರೆ.</p>.<p>ಹಣದುಬ್ಬರವನ್ನು ನಿಯಂತ್ರಿಸಲು ಕೇಂದ್ರೀಯ ಬ್ಯಾಂಕ್ಗಳು ಬಡ್ಡಿದರ ಹೆಚ್ಚಳ ಮಾಡುತ್ತಿವೆ. ಈ ನಡುವೆ, ನವೋದ್ಯಮಗಳಿಗೆ ಹಣಕಾಸಿನ ನೆರವು ನೀಡುವ ಎಸ್ವಿಬಿ ವೈಫಲ್ಯವು ಜಾಗತಿಕ ಹಣಕಾಸು ವ್ಯವಸ್ಥೆಯ ಸ್ಥಿತಿಯ ಬಗ್ಗೆ ಆತಂಕ ಮೂಡಿಸಿದೆ.</p>.<p>ಇನ್ನೂ ಹೆಚ್ಚಿನ ಸಮಯದವರೆಗೆ ಮತ್ತು ತ್ವರಿತವಾಗಿ ಬಡ್ಡಿದರ ಹೆಚ್ಚಳ ಮಾಡುವ ಬಗ್ಗೆ ಅಮೆರಿಕದ ಫೆಡರಲ್ ರಿಸರ್ವ್ ಸೂಚನೆ ನೀಡಿದೆ. ಇದರಿಂದಾಗಿ ಜಾಗತಿಕ ಮಾರುಕಟ್ಟೆಗಳಲ್ಲಿ ಅನಿಶ್ಚಿತ ಸ್ಥಿತಿ ನಿರ್ಮಾಣವಾಗಿದೆ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>