ದೇಶದಲ್ಲಿ ಸಾಕಷ್ಟು ಮಕ್ಕಳು ಹಾಗೂ ಮಹಿಳೆಯರು ಪೌಷ್ಟಿಕ ಆಹಾರವಿಲ್ಲದೆ ನರಳುತ್ತಿದ್ದಾರೆ. ಅಂಥವರಿಗೆ ನೀಡಬೇಕಾದ ಆಹಾರ ಪದಾರ್ಥಗಳನ್ನು, ಸರ್ವಸ್ವವನ್ನು ತ್ಯಾಗ ಮಾಡಿದ್ದ ಬಾಹುಬಲಿಯ ಕಲ್ಲಿನಮೂರ್ತಿ ಮೇಲೆ ಟನ್ಗಟ್ಟಲೆ ಸುರಿಯಲಾಗಿದೆ. ದೇವರ ಹಾಗೂ ಧರ್ಮದ ಹೆಸರಿನಲ್ಲಿ ಈ ರೀತಿ ವ್ಯರ್ಥ ಮಾಡದೆ ಅಗತ್ಯವುಳ್ಳವರಿಗೆ ಅವುಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.