<p><strong>ನವದೆಹಲಿ</strong>: ಭಾರತದಲ್ಲಿ ಕೃತಕ ಬುದ್ಧಿಮತ್ತೆ (ಎ.ಐ) ಪ್ರಯಾಣವು ಅಸಾಧಾರವಾಗಿರಲಿದೆ ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಬುಧವಾರ ಹೇಳಿದ್ದಾರೆ.</p><p>ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ‘ನಮ್ಮ ಜೀವಮಾನದಲ್ಲಿ ಅತಿದೊಡ್ಡ ಸ್ಥಿತ್ಯಂತರಕ್ಕೆ ಎ.ಐ ವೇದಿಕೆಯಾಗುತ್ತಿದೆ’ ಎಂದಿರುವ ಅವರು, ‘ಭಾರತದಂತಹ ದೇಶಗಳಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ‘ಎ.ಐ ಇಂಪ್ಯಾಕ್ಟ್ ಶೃಂಗಸಭೆ’ಯಲ್ಲಿ ಪಾಲ್ಗೊಂಡಿರುವ ಅವರು, ಭಾರತ ಮತ್ತು ಅಮೆರಿಕದ ನಡುವೆ ಎ.ಐ. ಸಂಪರ್ಕವನ್ನು ಬಲಪಡಿಸುವ ಸಲುವಾಗಿ ಸಾಗರದ ಆಳದಲ್ಲಿ ಹೊಸ ಕೇಬಲ್ ಜಾಲ ಅಳವಡಿಸುವ ಯೋಜನೆಯನ್ನೂ ಪ್ರಕಟಿಸಿದ್ದಾರೆ.</p><p>ಹಾಗೆಯೇ, ಕೋಟ್ಯಂತರ ಸರ್ಕಾರಿ ನೌಕರರಿಗೆ ತರಬೇತಿ ಕಾರ್ಯಕ್ರಮ ಆಯೋಜಿಸುವುದಾಗಿ ಹಾಗೂ ಒಂದು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳಿಗೆ ನೆರವು ನೀಡುವ ಅಟಲ್ ಟಿಂಕರಿಂಗ್ ಲ್ಯಾಬ್ಗಳಿಗೆ ಎ.ಐ ಸಹಾಕರವನ್ನೂ ಘೋಷಿಸಿದ್ದಾರೆ.</p><p>ಪಿಚೈ ಅವರು, ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.</p>.ಗೂಗಲ್ ಸಿಇಒ ಸುಂದರ್ ಪಿಚೈ ಭೇಟಿಯಾದ ಪ್ರಧಾನಿ ಮೋದಿ: ಎಐ ಒಡಂಬಡಿಕೆ ಬಗ್ಗೆ ಚರ್ಚೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತದಲ್ಲಿ ಕೃತಕ ಬುದ್ಧಿಮತ್ತೆ (ಎ.ಐ) ಪ್ರಯಾಣವು ಅಸಾಧಾರವಾಗಿರಲಿದೆ ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಬುಧವಾರ ಹೇಳಿದ್ದಾರೆ.</p><p>ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ‘ನಮ್ಮ ಜೀವಮಾನದಲ್ಲಿ ಅತಿದೊಡ್ಡ ಸ್ಥಿತ್ಯಂತರಕ್ಕೆ ಎ.ಐ ವೇದಿಕೆಯಾಗುತ್ತಿದೆ’ ಎಂದಿರುವ ಅವರು, ‘ಭಾರತದಂತಹ ದೇಶಗಳಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ‘ಎ.ಐ ಇಂಪ್ಯಾಕ್ಟ್ ಶೃಂಗಸಭೆ’ಯಲ್ಲಿ ಪಾಲ್ಗೊಂಡಿರುವ ಅವರು, ಭಾರತ ಮತ್ತು ಅಮೆರಿಕದ ನಡುವೆ ಎ.ಐ. ಸಂಪರ್ಕವನ್ನು ಬಲಪಡಿಸುವ ಸಲುವಾಗಿ ಸಾಗರದ ಆಳದಲ್ಲಿ ಹೊಸ ಕೇಬಲ್ ಜಾಲ ಅಳವಡಿಸುವ ಯೋಜನೆಯನ್ನೂ ಪ್ರಕಟಿಸಿದ್ದಾರೆ.</p><p>ಹಾಗೆಯೇ, ಕೋಟ್ಯಂತರ ಸರ್ಕಾರಿ ನೌಕರರಿಗೆ ತರಬೇತಿ ಕಾರ್ಯಕ್ರಮ ಆಯೋಜಿಸುವುದಾಗಿ ಹಾಗೂ ಒಂದು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳಿಗೆ ನೆರವು ನೀಡುವ ಅಟಲ್ ಟಿಂಕರಿಂಗ್ ಲ್ಯಾಬ್ಗಳಿಗೆ ಎ.ಐ ಸಹಾಕರವನ್ನೂ ಘೋಷಿಸಿದ್ದಾರೆ.</p><p>ಪಿಚೈ ಅವರು, ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.</p>.ಗೂಗಲ್ ಸಿಇಒ ಸುಂದರ್ ಪಿಚೈ ಭೇಟಿಯಾದ ಪ್ರಧಾನಿ ಮೋದಿ: ಎಐ ಒಡಂಬಡಿಕೆ ಬಗ್ಗೆ ಚರ್ಚೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>