‘ಕೋವಿಡ್ -19 ಸವಾಲಿನ ಮಧ್ಯೆ ಭಾರತದ ಇಂಧನ ಸುರಕ್ಷತೆಯನ್ನು ಕಾಪಾಡಲು ಹೆಚ್ಚಿನ ಮುತುವರ್ಜಿ ವಹಿಸಲಾಗಿದ್ದು, ಮಂಗಳೂರು ಮತ್ತು ಪಾದೂರು ತೈಲ ಸಂಗ್ರಹಾಗಾರಗಳನ್ನು ಸಂಪೂರ್ಣವಾಗಿ ತುಂಬಲು, ಕಡಿಮೆ ಬೆಲೆಗೆ ಖರೀದಿಸಿದ ಕಚ್ಚಾತೈಲವನ್ನು ಹೊತ್ತ ಹಡಗುಗಳು ಸಾಲುಗಟ್ಟಿ ನಿಂತಿವೆ’ ಎಂದು ಪೆಟ್ರೋಲಿಯಂ ಸಚಿವಾಲಯ ಟ್ವೀಟ್ನಲ್ಲಿ ತಿಳಿಸಿದೆ.