ಬೆಂಗಳೂರು: ರಾಜ್ಯ ಸರ್ಕಾರವು ಅಯೋಧ್ಯೆಯಲ್ಲಿ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2021-22ರ ಸಾಲಿನ ಬಜೆಟ್ ಅನ್ನು ಸೋಮವಾರ ಮಂಡಿಸಿದರು.
'ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣಕ್ಕೆ ಪ್ರಸಕ್ತ ಸಾಲಿನಲ್ಲಿ ₹10 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ,' ಎಂದು ಅವರು ಬಜೆಟ್ ಮಂಡನೆ ವೇಳೆ ಘೋಷಿಸಿದರು.
ಈ ಯಾತ್ರಿನಿವಾಸಕ್ಕಾಗಿ ಉತ್ತರ ಪ್ರದೇಶ ಸರ್ಕಾರವು 5 ಎಕರೆ ಪ್ರದೇಶವನ್ನು ಮಂಜೂರು ಮಾಡಲಿದೆ ಎಂದೂ ಅವರು ಇದೇ ವೇಳೆ ಹೇಳಿದರು.