<p><strong>ನವದೆಹಲಿ</strong>: ಪ್ರಸಕ್ತ ಮಾರುಕಟ್ಟೆ ವರ್ಷದಲ್ಲಿ 10 ಲಕ್ಷ ಟನ್ ಸಕ್ಕರೆ ರಫ್ತಿಗೆ ಕೇಂದ್ರ ಸರ್ಕಾರ ಸೋಮವಾರ ಅನುಮತಿ ನೀಡಿದೆ.</p>.<p>ದೇಶೀಯ ಬೆಲೆಗಳನ್ನು ಸ್ಥಿರಗೊಳಿಸಲು ಮತ್ತು ಉದ್ಯಮಕ್ಕೆ ನೆರವು ನೀಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.</p>.<p>‘5 ಕೋಟಿ ರೈತ ಕುಟುಂಬಗಳು ಮತ್ತು 5 ಲಕ್ಷ ಕಾರ್ಮಿಕರಿಗೆ ಇದರ ಲಾಭ ದೊರೆಯಲಿದೆ’ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.</p>.<p>ಸಕ್ಕರೆ ಕಾರ್ಖಾನೆಗಳಿಗೆ ನಗದು ಹರಿವನ್ನು ಹೆಚ್ಚಿಸಲಿದೆ. ಇದರಿಂದ ನಿಗದಿತ ಸಮಯಕ್ಕೆ ಕಬ್ಬಿನ ಬಾಕಿ ಪಾವತಿಸಬಹುದು. ಜೊತೆಗೆ ಲಭ್ಯತೆಯನ್ನು ಹೆಚ್ಚಿಸಲಿದ್ದು, ದರ ಏರಿಕೆಯನ್ನು ನಿಯಂತ್ರಿಸಲಿದೆ ಎಂದು ತಿಳಿಸಿದ್ದಾರೆ.</p>.<p>ಪ್ರಸಕ್ತ ವರ್ಷದ ಸೆಪ್ಟೆಂಬರ್ 30ರ ವರೆಗೆ ಮಿಲ್ಗಳು ನೇರವಾಗಿ ಅಥವಾ ವ್ಯಾಪಾರಿಗಳ ಮೂಲಕ ಸಕ್ಕರೆ ರಫ್ತು ಮಾಡಬಹುದಾಗಿದೆ ಎಂದು ಹೇಳಿದ್ದಾರೆ.</p>.<p>ಭಾರತೀಯ ಸಕ್ಕರೆ ಮತ್ತು ಜೈವಿಕ ಇಂಧನ ತಯಾರಕರ ಸಂಘವು (ಐಎಸ್ಬಿಎಂಎ) ಸರ್ಕಾರದ ಈ ಆದೇಶವನ್ನು ಸ್ವಾಗತಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಸಕ್ತ ಮಾರುಕಟ್ಟೆ ವರ್ಷದಲ್ಲಿ 10 ಲಕ್ಷ ಟನ್ ಸಕ್ಕರೆ ರಫ್ತಿಗೆ ಕೇಂದ್ರ ಸರ್ಕಾರ ಸೋಮವಾರ ಅನುಮತಿ ನೀಡಿದೆ.</p>.<p>ದೇಶೀಯ ಬೆಲೆಗಳನ್ನು ಸ್ಥಿರಗೊಳಿಸಲು ಮತ್ತು ಉದ್ಯಮಕ್ಕೆ ನೆರವು ನೀಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.</p>.<p>‘5 ಕೋಟಿ ರೈತ ಕುಟುಂಬಗಳು ಮತ್ತು 5 ಲಕ್ಷ ಕಾರ್ಮಿಕರಿಗೆ ಇದರ ಲಾಭ ದೊರೆಯಲಿದೆ’ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.</p>.<p>ಸಕ್ಕರೆ ಕಾರ್ಖಾನೆಗಳಿಗೆ ನಗದು ಹರಿವನ್ನು ಹೆಚ್ಚಿಸಲಿದೆ. ಇದರಿಂದ ನಿಗದಿತ ಸಮಯಕ್ಕೆ ಕಬ್ಬಿನ ಬಾಕಿ ಪಾವತಿಸಬಹುದು. ಜೊತೆಗೆ ಲಭ್ಯತೆಯನ್ನು ಹೆಚ್ಚಿಸಲಿದ್ದು, ದರ ಏರಿಕೆಯನ್ನು ನಿಯಂತ್ರಿಸಲಿದೆ ಎಂದು ತಿಳಿಸಿದ್ದಾರೆ.</p>.<p>ಪ್ರಸಕ್ತ ವರ್ಷದ ಸೆಪ್ಟೆಂಬರ್ 30ರ ವರೆಗೆ ಮಿಲ್ಗಳು ನೇರವಾಗಿ ಅಥವಾ ವ್ಯಾಪಾರಿಗಳ ಮೂಲಕ ಸಕ್ಕರೆ ರಫ್ತು ಮಾಡಬಹುದಾಗಿದೆ ಎಂದು ಹೇಳಿದ್ದಾರೆ.</p>.<p>ಭಾರತೀಯ ಸಕ್ಕರೆ ಮತ್ತು ಜೈವಿಕ ಇಂಧನ ತಯಾರಕರ ಸಂಘವು (ಐಎಸ್ಬಿಎಂಎ) ಸರ್ಕಾರದ ಈ ಆದೇಶವನ್ನು ಸ್ವಾಗತಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>