<p><strong>ನವದೆಹಲಿ</strong>: ಅಕ್ಟೋಬರ್ನಿಂದ ಆರಂಭವಾಗಿರುವ ಪ್ರಸ್ತಕ ವರ್ಷದ ಸಕ್ಕರೆ ಮಾರುಕಟ್ಟೆ ವರ್ಷದಲ್ಲಿ 15 ಲಕ್ಷ ಟನ್ ಸಕ್ಕರೆ ರಫ್ತಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.</p>.<p>ಕಾಕಂಬಿ (ಮೊಲಾಸಿಸ್) ರಫ್ತು ಮೇಲಿನ ಶೇಕಡ 50ರಷ್ಟು ಸುಂಕವನ್ನು ತೆಗೆಯಲು ಕೇಂದ್ರ ನಿರ್ಧರಿಸಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನವೆಂಬರ್ 7ರಂದು ಬರೆದ ಪತ್ರದಲ್ಲಿ ಜೋಶಿ ತಿಳಿಸಿದ್ದಾರೆ.</p>.<p>ದೇಶದಲ್ಲಿನ ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮದ ಬಗ್ಗೆ ಪತ್ರದಲ್ಲಿ ವಿವರಿಸಿದ್ದಾರೆ.</p>.<p>2024–25ರ ಸಕ್ಕರೆ ಮಾರುಕಟ್ಟೆ ವರ್ಷದಲ್ಲಿ (ಅಕ್ಟೋಬರ್ನಿಂದ ಸೆಪ್ಟೆಂಬರ್) 10 ಲಕ್ಷ ಟನ್ ಸಕ್ಕರೆ ರಫ್ತಿಗೆ ಕೇಂದ್ರ ಅನುಮತಿ ನೀಡಿತ್ತು. ಈ ಪೈಕಿ 8 ಲಕ್ಷ ಟನ್ ಸಕ್ಕರೆ ಮಾತ್ರ ರಫ್ತಾಗಿತ್ತು. </p>.<p>ಈ ಬಾರಿ ಉದ್ಯಮವು 20 ಲಕ್ಷ ಟನ್ ಸಕ್ಕರೆ ರಫ್ತಿಗೆ ಬೇಡಿಕೆ ಇಟ್ಟಿತ್ತು. ಆದರೆ, 15 ಲಕ್ಷ ಟನ್ ರಫ್ತಿಗೆ ಅನುಮತಿ ನೀಡಿದೆ.</p>.<p>ಸಕ್ಕರೆ ದಾಸ್ತಾನು ಹೆಚ್ಚಳದಿಂದಾಗಿ ಸಕ್ಕರೆ ರಫ್ತಿಗೆ ಅನುಮತಿ ನೀಡಲು ಕೇಂದ್ರ ಚಿಂತನೆ ನಡೆಸುತ್ತಿದೆ ಎಂದು ಇತ್ತೀಚೆಗೆ ಕೇಂದ್ರ ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಅವರು ಹೇಳಿದ್ದರು.</p>.<p>ಕಳೆದ ಸಕ್ಕರೆ ಮಾರುಕಟ್ಟೆ ವರ್ಷದಲ್ಲಿ 34 ಲಕ್ಷ ಟನ್ ಸಕ್ಕರೆಯನ್ನು ಎಥೆನಾಲ್ ತಯಾರಿಕೆಗೆ ಕೈಗಾರಿಕೆಗಳು ಬಳಕೆ ಮಾಡಿವೆ. ಇದು ಅಂದಾಜು ಮಾಡಿದ್ದ 45 ಲಕ್ಷ ಟನ್ಗಿಂತ ಕಡಿಮೆ. ಇದರ ಪರಿಣಾಮವಾಗಿ ಹೆಚ್ಚಿನ ದಾಸ್ತಾನು ಇದೆ ಎಂದು ಚೋಪ್ರಾ ತಿಳಿಸಿದ್ದರು.</p>.<p>ಪ್ರಸಕ್ತ ಋತುವಿನಲ್ಲಿ 3.4 ಕೋಟಿ ಟನ್ ಸಕ್ಕರೆ ಉತ್ಪಾದನೆ ಆಗಲಿದೆ. ಈ ಪೈಕಿ 2.85 ಕೋಟಿ ಟನ್ ಸಕ್ಕರೆಗೆ ದೇಶದ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಕ್ಟೋಬರ್ನಿಂದ ಆರಂಭವಾಗಿರುವ ಪ್ರಸ್ತಕ ವರ್ಷದ ಸಕ್ಕರೆ ಮಾರುಕಟ್ಟೆ ವರ್ಷದಲ್ಲಿ 15 ಲಕ್ಷ ಟನ್ ಸಕ್ಕರೆ ರಫ್ತಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.</p>.<p>ಕಾಕಂಬಿ (ಮೊಲಾಸಿಸ್) ರಫ್ತು ಮೇಲಿನ ಶೇಕಡ 50ರಷ್ಟು ಸುಂಕವನ್ನು ತೆಗೆಯಲು ಕೇಂದ್ರ ನಿರ್ಧರಿಸಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನವೆಂಬರ್ 7ರಂದು ಬರೆದ ಪತ್ರದಲ್ಲಿ ಜೋಶಿ ತಿಳಿಸಿದ್ದಾರೆ.</p>.<p>ದೇಶದಲ್ಲಿನ ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮದ ಬಗ್ಗೆ ಪತ್ರದಲ್ಲಿ ವಿವರಿಸಿದ್ದಾರೆ.</p>.<p>2024–25ರ ಸಕ್ಕರೆ ಮಾರುಕಟ್ಟೆ ವರ್ಷದಲ್ಲಿ (ಅಕ್ಟೋಬರ್ನಿಂದ ಸೆಪ್ಟೆಂಬರ್) 10 ಲಕ್ಷ ಟನ್ ಸಕ್ಕರೆ ರಫ್ತಿಗೆ ಕೇಂದ್ರ ಅನುಮತಿ ನೀಡಿತ್ತು. ಈ ಪೈಕಿ 8 ಲಕ್ಷ ಟನ್ ಸಕ್ಕರೆ ಮಾತ್ರ ರಫ್ತಾಗಿತ್ತು. </p>.<p>ಈ ಬಾರಿ ಉದ್ಯಮವು 20 ಲಕ್ಷ ಟನ್ ಸಕ್ಕರೆ ರಫ್ತಿಗೆ ಬೇಡಿಕೆ ಇಟ್ಟಿತ್ತು. ಆದರೆ, 15 ಲಕ್ಷ ಟನ್ ರಫ್ತಿಗೆ ಅನುಮತಿ ನೀಡಿದೆ.</p>.<p>ಸಕ್ಕರೆ ದಾಸ್ತಾನು ಹೆಚ್ಚಳದಿಂದಾಗಿ ಸಕ್ಕರೆ ರಫ್ತಿಗೆ ಅನುಮತಿ ನೀಡಲು ಕೇಂದ್ರ ಚಿಂತನೆ ನಡೆಸುತ್ತಿದೆ ಎಂದು ಇತ್ತೀಚೆಗೆ ಕೇಂದ್ರ ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಅವರು ಹೇಳಿದ್ದರು.</p>.<p>ಕಳೆದ ಸಕ್ಕರೆ ಮಾರುಕಟ್ಟೆ ವರ್ಷದಲ್ಲಿ 34 ಲಕ್ಷ ಟನ್ ಸಕ್ಕರೆಯನ್ನು ಎಥೆನಾಲ್ ತಯಾರಿಕೆಗೆ ಕೈಗಾರಿಕೆಗಳು ಬಳಕೆ ಮಾಡಿವೆ. ಇದು ಅಂದಾಜು ಮಾಡಿದ್ದ 45 ಲಕ್ಷ ಟನ್ಗಿಂತ ಕಡಿಮೆ. ಇದರ ಪರಿಣಾಮವಾಗಿ ಹೆಚ್ಚಿನ ದಾಸ್ತಾನು ಇದೆ ಎಂದು ಚೋಪ್ರಾ ತಿಳಿಸಿದ್ದರು.</p>.<p>ಪ್ರಸಕ್ತ ಋತುವಿನಲ್ಲಿ 3.4 ಕೋಟಿ ಟನ್ ಸಕ್ಕರೆ ಉತ್ಪಾದನೆ ಆಗಲಿದೆ. ಈ ಪೈಕಿ 2.85 ಕೋಟಿ ಟನ್ ಸಕ್ಕರೆಗೆ ದೇಶದ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>