ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹ ನಿರ್ಮಾಣ ವಲಯಕ್ಕೆ ಉತ್ತೇಜನ: ನಿರ್ಮಲಾ ಘೋಷಣೆ

₹ 25 ಸಾವಿರ ಕೋಟಿ ನಿಧಿ ಸ್ಥಾಪನೆ
Last Updated 6 ನವೆಂಬರ್ 2019, 22:06 IST
ಅಕ್ಷರ ಗಾತ್ರ

ನವದೆಹಲಿ: ಸ್ಥಗಿತಗೊಂಡಿರುವ ಗೃಹ ನಿರ್ಮಾಣ ಯೋಜನೆಗಳಿಗೆ ನೆರವಾಗಿ ಆರ್ಥಿಕತೆಗೆ ಚೇತರಿಕೆ ನೀಡಲು ಕೇಂದ್ರ ಸರ್ಕಾರವು ₹ 25 ಸಾವಿರ ಕೋಟಿ ಮೊತ್ತದ ಪರಿಹಾರ ನಿಧಿ ಸ್ಥಾಪಿಸಲು ಮುಂದಾಗಿದೆ.

ಹಣಕಾಸು ಅಲಭ್ಯತೆ ಮತ್ತಿತರ ಕಾರಣಕ್ಕೆ ನಿರ್ಮಾಣ ಚಟುವಟಿಕೆ ಸ್ಥಗಿತಗೊಂಡಿರುವ 1,600 ಗೃಹ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸಲು ಹಣಕಾಸು ನೆರವು ನೀಡುವುದು ಈ ನಿಧಿಯ ಉದ್ದೇಶವಾಗಿದೆ.

‘ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಈ ಮಹತ್ವದ ನಿರ್ಧಾರ ಕೈಗೊಂಡಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ನಿರ್ದಿಷ್ಟ ಉದ್ದೇಶಕ್ಕೆ ಸ್ಥಾಪಿಸಲಾಗುವ ಪರ್ಯಾಯ ಹೂಡಿಕೆ ನಿಧಿಯಲ್ಲಿ (ಎಐಎಫ್‌) ಕೇಂದ್ರ ಸರ್ಕಾರ ₹ 10 ಸಾವಿರ ಕೋಟಿ, ಎಸ್‌ಬಿಐ ಮತ್ತು ಎಲ್‌ಐಸಿ ಜತೆಯಾಗಿ ₹ 15 ಸಾವಿರ ಕೋಟಿ ತೊಡಗಿಸಲಿವೆ. 4.58 ಲಕ್ಷ ಮನೆಗಳನ್ನು ಒಳಗೊಂಡಿರುವ 1,600 ಗೃಹ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸಲು ಈ ನಿಧಿಯನ್ನು ಬಳಸಿಕೊಳ್ಳಲಾಗುವುದು. ಈ ನಿಧಿಯಲ್ಲಿ ಪಿಂಚಣಿ ನಿಧಿಯೂ ಹಣ ತೊಡಗಿಸುವ ನಿರೀಕ್ಷೆ ಇದೆ. ಇದರಿಂದ ನಿಧಿ ಮೊತ್ತ ಹೆಚ್ಚಲಿದೆ.

‘ವಸೂಲಾಗದ ಸಾಲ (ಎನ್‌ಪಿಎ) ಎಂದು ಘೋಷಿಸಿರುವ ಮತ್ತು ಸಾಲ ವಸೂಲಾತಿ ಪ್ರಕ್ರಿಯೆಗೆ (ಐಬಿಸಿ) ಒಳಗಾಗಿರುವ ಯೋಜನೆಗಳಿಗೂ ಈ ನಿಧಿಯ ನೆರವು ದೊರೆಯಲಿದೆ’’ ಎಂದು ಹೇಳಿದ್ದಾರೆ.

ಇದರಿಂದ ಉದ್ಯೋಗ ಅವಕಾಶಗಳು ಹೆಚ್ಚಲಿವೆ. ಸಿಮೆಂಟ್‌, ಉಕ್ಕು, ಕಬ್ಬಿಣಕ್ಕೆ ಬೇಡಿಕೆ ಹೆಚ್ಚಳಗೊಂಡು ಈ ಉದ್ದಿಮೆಗಳು ಚೇತರಿಸಿಕೊಳ್ಳಲಿವೆ. ಆರ್ಥಿಕತೆಯ ಇತರ ಪ್ರಮುಖ ವಲಯಗಳಲ್ಲಿನ ಒತ್ತಡವೂ ನಿವಾರಣೆಯಾಗುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT