ನವದೆಹಲಿ: ದೇಶದ ಉಷ್ಣವಿದ್ಯುತ್ ಸ್ಥಾವರಗಳಲ್ಲಿನ ಕಲ್ಲಿದ್ದಲು ಸಂಗ್ರಹವನ್ನು ಮಾರ್ಚ್ ಅಂತ್ಯಕ್ಕೆ ಮೊದಲು 4.5 ಕೋಟಿ ಟನ್ಗೆ ಹೆಚ್ಚಿಸುವ ಯೋಜನೆ ಇದೆ ಎಂದು ಕೇಂದ್ರ ಸರ್ಕಾರವು ಗುರುವಾರ ಹೇಳಿದೆ. ಕಲ್ಲಿದ್ದಲಿನ ದೇಶಿ ಉತ್ಪಾದನೆಯು ಕಳೆದ ಕೆಲವು ತಿಂಗಳಲ್ಲಿ ಹೆಚ್ಚಳ ಕಂಡಿದೆ.
‘ಈ ತಿಂಗಳ ಅಂತ್ಯದ ಹೊತ್ತಿಗೆ ದೇಶದ ಕಲ್ಲಿದ್ದಲು ಆಧಾರಿತ ಉಷ್ಣವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಸಂಗ್ರಹವನ್ನು 3 ಕೋಟಿ ಟನ್ಗೆ ಹೆಚ್ಚಿಸುವ ಉದ್ದೇಶ ಕೇಂದ್ರ ಕಲ್ಲಿದ್ದಲು ಸಚಿವಾಲಯಕ್ಕೆ ಇದೆ’ ಎಂದು ಪ್ರಕಟಣೆ ತಿಳಿಸಿದೆ.
ಬೇಸಿಗೆ ಕಾಲದಲ್ಲಿ ಉಷ್ಣವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲಿನ ಕೊರತೆ ತೀವ್ರವಾಗಿತ್ತು. ಇದರಿಂದಾಗಿ ದೇಶದ ಹಲವು ಕಡೆಗಳಲ್ಲಿ ವಿದ್ಯುತ್ ಕಡಿತ ಜಾರಿಗೆ ಬಂದಿತ್ತು.