<p><strong>ನವದೆಹಲಿ</strong>: ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) ಮೇಲಿನ ವಿಶೇಷ ಸಬ್ಸಿಡಿ ಸೌಲಭ್ಯವನ್ನು ವಿಸ್ತರಿಸಿದೆ.</p>.<p>ರೈತರು ಪ್ರತಿ ಚೀಲವನ್ನು (50 ಕೆ.ಜಿ) ₹1,350 ಚಿಲ್ಲರೆ ದರದಲ್ಲಿ ಖರೀದಿಸಲು ಅನುಕೂಲವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ₹3,850 ಕೋಟಿ ಹೊರೆಯಾಗಲಿದೆ. ಈ ಸಬ್ಸಿಡಿಯು ಜನವರಿ 1ರಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದ ವರೆಗೆ ಜಾರಿಯಲ್ಲಿ ಇರಲಿದೆ ಎಂದು ಕೇಂದ್ರ ತಿಳಿಸಿದೆ.</p>.<p>ಕಳೆದ ವರ್ಷ ಸರ್ಕಾರವು ಏಪ್ರಿಲ್ನಿಂದ ಡಿಸೆಂಬರ್ಗೆ ಅನ್ವಯಿಸುವಂತೆ ಒಂದು ಟನ್ಗೆ ₹3,500 ವಿಶೇಷ ಸಬ್ಸಿಡಿಗೆ ಅನುಮತಿ ನೀಡಿತ್ತು. ಈ ಅವಧಿಯಲ್ಲಿ ಏರುತ್ತಿರುವ ವೆಚ್ಚ ಸರಿದೂಗಿಸಲು ₹2,625 ಕೋಟಿ ಪ್ಯಾಕೇಜ್ ಘೋಷಿಸಿತ್ತು. </p>.<p>ಪೋಷಕಾಂಶ ಆಧರಿತ ಸಬ್ಸಿಡಿ ಯೋಜನೆಯಡಿ ರೈತರಿಗೆ ಕೈಗೆಟಕುವ ದರದಲ್ಲಿ ಡಿಎಪಿ ರಸಗೊಬ್ಬರ ಒದಗಿಸಲು ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದೆ.</p>.<p>ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, ‘ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ರೈತರಿಗೆ ಅನುಕೂಲ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ’ ಎಂದರು.</p>.<p>ಜಾಗತಿಕ ಬಿಕ್ಕಟ್ಟಿನಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಿಎಪಿ ರಸಗೊಬ್ಬರ ಬೆಲೆಯು ಏಕಾಏಕಿ ಬದಲಾವಣೆ ಕಾಣುತ್ತಿದೆ ಎಂದು ತಿಳಿಸಿದರು. </p>.<p>ರಸಗೊಬ್ಬರ ತಯಾರಕರು ಮತ್ತು ಆಮದುದಾರರ ಮೂಲಕ ಸರ್ಕಾರವು ಸಬ್ಸಿಡಿ ದರದಲ್ಲಿ 28 ಗ್ರೇಡ್ ಗುಣಮಟ್ಟದ ಪಿ ಆ್ಯಂಡ್ ಕೆ (ಫಾಸ್ಪೆಟಿಕ್ ಮತ್ತು ಪೊಟ್ಯಾಸಿಕ್) ರಸಗೊಬ್ಬರವನ್ನು ರೈತರಿಗೆ ಒದಗಿಸುತ್ತಿದೆ. ಪೋಷಕಾಂಶ ಆಧರಿತ ಸಬ್ಸಿಡಿ ಯೋಜನೆಯಡಿ 2010ರ ಏಪ್ರಿಲ್ 1ರಿಂದ ಈ ರಸಗೊಬ್ಬರಕ್ಕೆ ಸಬ್ಸಿಡಿ ಸೌಲಭ್ಯ ಕಲ್ಪಿಸಲಾಗಿದೆ.</p>.<ul><li><p>₹5.5 ಲಕ್ಷ ಕೋಟಿ–2004ರಿಂದ 2014ರ ವರೆಗೆ ರಸಗೊಬ್ಬರಕ್ಕೆ ನೀಡಿರುವ ಸಬ್ಸಿಡಿ ಮೊತ್ತ </p></li><li><p>₹11.9 ಲಕ್ಷ ಕೋಟಿ–2014–2024ರವರೆಗೆ ರಸಗೊಬ್ಬರಕ್ಕೆ ನೀಡಿರುವ ಸಬ್ಸಿಡಿ ಮೊತ್ತ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) ಮೇಲಿನ ವಿಶೇಷ ಸಬ್ಸಿಡಿ ಸೌಲಭ್ಯವನ್ನು ವಿಸ್ತರಿಸಿದೆ.</p>.<p>ರೈತರು ಪ್ರತಿ ಚೀಲವನ್ನು (50 ಕೆ.ಜಿ) ₹1,350 ಚಿಲ್ಲರೆ ದರದಲ್ಲಿ ಖರೀದಿಸಲು ಅನುಕೂಲವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ₹3,850 ಕೋಟಿ ಹೊರೆಯಾಗಲಿದೆ. ಈ ಸಬ್ಸಿಡಿಯು ಜನವರಿ 1ರಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದ ವರೆಗೆ ಜಾರಿಯಲ್ಲಿ ಇರಲಿದೆ ಎಂದು ಕೇಂದ್ರ ತಿಳಿಸಿದೆ.</p>.<p>ಕಳೆದ ವರ್ಷ ಸರ್ಕಾರವು ಏಪ್ರಿಲ್ನಿಂದ ಡಿಸೆಂಬರ್ಗೆ ಅನ್ವಯಿಸುವಂತೆ ಒಂದು ಟನ್ಗೆ ₹3,500 ವಿಶೇಷ ಸಬ್ಸಿಡಿಗೆ ಅನುಮತಿ ನೀಡಿತ್ತು. ಈ ಅವಧಿಯಲ್ಲಿ ಏರುತ್ತಿರುವ ವೆಚ್ಚ ಸರಿದೂಗಿಸಲು ₹2,625 ಕೋಟಿ ಪ್ಯಾಕೇಜ್ ಘೋಷಿಸಿತ್ತು. </p>.<p>ಪೋಷಕಾಂಶ ಆಧರಿತ ಸಬ್ಸಿಡಿ ಯೋಜನೆಯಡಿ ರೈತರಿಗೆ ಕೈಗೆಟಕುವ ದರದಲ್ಲಿ ಡಿಎಪಿ ರಸಗೊಬ್ಬರ ಒದಗಿಸಲು ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದೆ.</p>.<p>ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, ‘ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ರೈತರಿಗೆ ಅನುಕೂಲ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ’ ಎಂದರು.</p>.<p>ಜಾಗತಿಕ ಬಿಕ್ಕಟ್ಟಿನಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಿಎಪಿ ರಸಗೊಬ್ಬರ ಬೆಲೆಯು ಏಕಾಏಕಿ ಬದಲಾವಣೆ ಕಾಣುತ್ತಿದೆ ಎಂದು ತಿಳಿಸಿದರು. </p>.<p>ರಸಗೊಬ್ಬರ ತಯಾರಕರು ಮತ್ತು ಆಮದುದಾರರ ಮೂಲಕ ಸರ್ಕಾರವು ಸಬ್ಸಿಡಿ ದರದಲ್ಲಿ 28 ಗ್ರೇಡ್ ಗುಣಮಟ್ಟದ ಪಿ ಆ್ಯಂಡ್ ಕೆ (ಫಾಸ್ಪೆಟಿಕ್ ಮತ್ತು ಪೊಟ್ಯಾಸಿಕ್) ರಸಗೊಬ್ಬರವನ್ನು ರೈತರಿಗೆ ಒದಗಿಸುತ್ತಿದೆ. ಪೋಷಕಾಂಶ ಆಧರಿತ ಸಬ್ಸಿಡಿ ಯೋಜನೆಯಡಿ 2010ರ ಏಪ್ರಿಲ್ 1ರಿಂದ ಈ ರಸಗೊಬ್ಬರಕ್ಕೆ ಸಬ್ಸಿಡಿ ಸೌಲಭ್ಯ ಕಲ್ಪಿಸಲಾಗಿದೆ.</p>.<ul><li><p>₹5.5 ಲಕ್ಷ ಕೋಟಿ–2004ರಿಂದ 2014ರ ವರೆಗೆ ರಸಗೊಬ್ಬರಕ್ಕೆ ನೀಡಿರುವ ಸಬ್ಸಿಡಿ ಮೊತ್ತ </p></li><li><p>₹11.9 ಲಕ್ಷ ಕೋಟಿ–2014–2024ರವರೆಗೆ ರಸಗೊಬ್ಬರಕ್ಕೆ ನೀಡಿರುವ ಸಬ್ಸಿಡಿ ಮೊತ್ತ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>