ಜಾಗತಿಕ ಮಟ್ಟದಲ್ಲಿ ಆಗಿರುವ ಬೆಲೆ ಏರಿಕೆಯ ದುಷ್ಪರಿಣಾಮದಿಂದ ರೈತರನ್ನು ರಸಗೊಬ್ಬರ ಸಬ್ಸಿಡಿ ದರ ಏರಿಕೆಯ ಮೂಲಕ ರಕ್ಷಿಸಲಾಗಿದೆ. ಬಜೆಟ್ನಲ್ಲಿ ₹ 1.05 ಲಕ್ಷ ಕೋಟಿ ಸಬ್ಸಿಡಿ ನಿಗದಿಪಡಿಸಿದ್ದು, ಅದಲ್ಲದೆ ಹೆಚ್ಚುವರಿಯಾಗಿ ₹ 1.10 ಲಕ್ಷ ಕೋಟಿಯನ್ನು ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.