<p><strong>ನವದೆಹಲಿ: </strong>ವಿತ್ತೀಯ ಕೊರತೆ ಗುರಿ ತಲುಪಲು, ಕೇಂದ್ರ ಸರ್ಕಾರವು ಆರ್ಬಿಐನಿಂದ ಮಧ್ಯಂತರ ಲಾಭಾಂಶದ ರೂಪದಲ್ಲಿ ₹ 30 ಸಾವಿರ ಕೋಟಿ ಕೇಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ವರಮಾನ ಸಂಗ್ರಹ ಇಳಿಮುಖವಾಗಿದೆ. ಆರ್ಥಿಕ ಬೆಳವಣಿಗೆ ದರವು ಮೊದಲ ತ್ರೈಮಾಸಿಕದಲ್ಲಿ ಶೇ 5ಕ್ಕೆ ಕುಸಿದಿದೆ. ಹೀಗಾಗಿ ಆರ್ಥಿಕತೆಗೆ ಚೇತರಿಕೆ ನೀಡಲು ಹಲವು ಸುಧಾರಣಾ ಕ್ರಮಗಳನ್ನು ಘೋಷಿಸುತ್ತಿದೆ. ಆದರೆ, ಇದಕ್ಕೆ ಅಗತ್ಯವಾದ ಬಂಡವಾಳ ಹೊಂದಿಸಿಕೊಳ್ಳುವುದು ಸಹ ಸವಾಲಾಗಿದೆ.</p>.<p>ಪ್ರಸಕ್ತ ಹಣಕಾಸು ವರ್ಷಕ್ಕೆ ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ 3.3ರಲ್ಲಿ ನಿಯಂತ್ರಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಆರ್ಬಿಐನಿಂದ ₹ 25 ಸಾವಿರ ಕೋಟಿಯಿಂದ ₹ 30 ಸಾವಿರ ಕೋಟಿಯನ್ನು ಮಧ್ಯಂತರ ಲಾಭಾಂಶ ನೀಡುವಂತೆ ಕೇಳಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಆರ್ಬಿಐನಿಂದ ಲಾಭಾಂಶ ಪಡೆಯುವ ಮಾರ್ಗವಲ್ಲದೆ, ಕೇಂದ್ರೋದ್ಯಮಗಳ ಷೇರು ವಿಕ್ರಯ, ರಾಷ್ಟ್ರೀಯ ಸಣ್ಣ ಉಳಿತಾಯ ನಿಧಿಗಳ (ಎನ್ಎಸ್ಎಸ್ಎಫ್) ಗರಿಷ್ಠ ಬಳಕೆಮಾಡುವ ಮೂಲಕವೂ ಬಂಡವಾಳ ಸಂಗ್ರಹಿಸಬಹುದಾಗಿದೆ.</p>.<p><strong>ಹೆಚ್ಚುವರಿ ಮೀಸಲು ನಿಧಿಯಲ್ಲಿ</strong></p>.<p>₹ 1.76 ಲಕ್ಷ ಕೋಟಿಯನ್ನು ಸರ್ಕಾರಕ್ಕೆ ವರ್ಗಾಯಿಸಲುಗವರ್ನರ್ ಶಕ್ತಿಕಾಂತ್ ದಾಸ್ ಅವರ ನೇತೃತ್ವದ ಆರ್ಬಿಐ ಆಡಳಿತ ಮಂಡಳಿ ಕಳೆದ ತಿಂಗಳು ಒಪ್ಪಿಗೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ವಿತ್ತೀಯ ಕೊರತೆ ಗುರಿ ತಲುಪಲು, ಕೇಂದ್ರ ಸರ್ಕಾರವು ಆರ್ಬಿಐನಿಂದ ಮಧ್ಯಂತರ ಲಾಭಾಂಶದ ರೂಪದಲ್ಲಿ ₹ 30 ಸಾವಿರ ಕೋಟಿ ಕೇಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ವರಮಾನ ಸಂಗ್ರಹ ಇಳಿಮುಖವಾಗಿದೆ. ಆರ್ಥಿಕ ಬೆಳವಣಿಗೆ ದರವು ಮೊದಲ ತ್ರೈಮಾಸಿಕದಲ್ಲಿ ಶೇ 5ಕ್ಕೆ ಕುಸಿದಿದೆ. ಹೀಗಾಗಿ ಆರ್ಥಿಕತೆಗೆ ಚೇತರಿಕೆ ನೀಡಲು ಹಲವು ಸುಧಾರಣಾ ಕ್ರಮಗಳನ್ನು ಘೋಷಿಸುತ್ತಿದೆ. ಆದರೆ, ಇದಕ್ಕೆ ಅಗತ್ಯವಾದ ಬಂಡವಾಳ ಹೊಂದಿಸಿಕೊಳ್ಳುವುದು ಸಹ ಸವಾಲಾಗಿದೆ.</p>.<p>ಪ್ರಸಕ್ತ ಹಣಕಾಸು ವರ್ಷಕ್ಕೆ ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ 3.3ರಲ್ಲಿ ನಿಯಂತ್ರಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಆರ್ಬಿಐನಿಂದ ₹ 25 ಸಾವಿರ ಕೋಟಿಯಿಂದ ₹ 30 ಸಾವಿರ ಕೋಟಿಯನ್ನು ಮಧ್ಯಂತರ ಲಾಭಾಂಶ ನೀಡುವಂತೆ ಕೇಳಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಆರ್ಬಿಐನಿಂದ ಲಾಭಾಂಶ ಪಡೆಯುವ ಮಾರ್ಗವಲ್ಲದೆ, ಕೇಂದ್ರೋದ್ಯಮಗಳ ಷೇರು ವಿಕ್ರಯ, ರಾಷ್ಟ್ರೀಯ ಸಣ್ಣ ಉಳಿತಾಯ ನಿಧಿಗಳ (ಎನ್ಎಸ್ಎಸ್ಎಫ್) ಗರಿಷ್ಠ ಬಳಕೆಮಾಡುವ ಮೂಲಕವೂ ಬಂಡವಾಳ ಸಂಗ್ರಹಿಸಬಹುದಾಗಿದೆ.</p>.<p><strong>ಹೆಚ್ಚುವರಿ ಮೀಸಲು ನಿಧಿಯಲ್ಲಿ</strong></p>.<p>₹ 1.76 ಲಕ್ಷ ಕೋಟಿಯನ್ನು ಸರ್ಕಾರಕ್ಕೆ ವರ್ಗಾಯಿಸಲುಗವರ್ನರ್ ಶಕ್ತಿಕಾಂತ್ ದಾಸ್ ಅವರ ನೇತೃತ್ವದ ಆರ್ಬಿಐ ಆಡಳಿತ ಮಂಡಳಿ ಕಳೆದ ತಿಂಗಳು ಒಪ್ಪಿಗೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>