<p><strong>ನವದೆಹಲಿ</strong>: ವಿಶೇಷ ಬಳಕೆ ಉದ್ದೇಶದ ಉಕ್ಕು ತಯಾರಿಕಾ ವಲಯದಲ್ಲಿ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೂರನೆಯ ಸುತ್ತಿನ ಉತ್ಪಾದನೆ ಆಧಾರಿತ ಉತ್ತೇಜನ (ಪಿಎಲ್ಐ) ಯೋಜನೆಯನ್ನು ಮಂಗಳವಾರ ಆರಂಭಿಸಿದೆ.</p>.<p>ದೇಶಿ ಉತ್ಪಾದನೆ ಹೆಚ್ಚಿಸುವುದು ಹಾಗೂ ಆಮದನ್ನು ತಗ್ಗಿಸುವುದು ಕೂಡ ಪಿಎಲ್ಐ ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ. ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಯೋಜನೆಗೆ ಚಾಲನೆ ನೀಡಿದರು.</p>.<p>ರಕ್ಷಣೆ, ವೈಮಾಂತರಿಕ್ಷ, ಇಂಧನ, ವಾಹನ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಬಳಕೆ ಮಾಡುವ ‘ವಿಶೇಷ ಬಳಕೆ ಉದ್ದೇಶದ ಉಕ್ಕು’ ತಯಾರಿಕಾ ವಲಯಕ್ಕೆ ಸಂಬಂಧಿಸಿದ ಪಿಎಲ್ಐ ಯೋಜನೆಗೆ ಕೇಂದ್ರ ಸಚಿವ ಸಂಪುಟವು 2021ರ ಜುಲೈನಲ್ಲಿ ಒಪ್ಪಿಗೆ ನೀಡಿತ್ತು. ಇದಕ್ಕೆ ₹6,322 ಕೋಟಿ ಅನುದಾನ ನಿಗದಿ ಮಾಡಲಾಗಿತ್ತು.</p>.<p class="bodytext">ಈ ಯೋಜನೆಯು ಮೊದಲ ಎರಡು ಸುತ್ತುಗಳಲ್ಲಿ ಇದುವರೆಗೆ ₹43,874 ಕೋಟಿ ಹೂಡಿಕೆಯನ್ನು ಆಕರ್ಷಿಸಿದೆ. ಈ ಪೈಕಿ ₹22,973 ಕೋಟಿ ಈಗಾಗಲೇ ಹೂಡಿಕೆ ಆಗಿದೆ. ಅಲ್ಲದೆ, ಮೊದಲ ಎರಡು ಸುತ್ತುಗಳ ಮೂಲಕ 13 ಸಾವಿರಕ್ಕೂ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಿದೆ.</p>.<p class="bodytext">‘ಮೊದಲ ಎರಡು ಸುತ್ತುಗಳಲ್ಲಿ ದೊರೆತ ಸ್ಪಂದನವು ಉತ್ತೇಜನಕಾರಿಯಾಗಿದೆ. ಆ ಯಶಸ್ಸು ಸುಧಾರಣೆ ಆಧಾರಿತ ಹಾಗೂ ಕೈಗಾರಿಕೆಗಳಿಗೆ ಅಗತ್ಯವಿರುವ ನೀತಿಗಳ ಶಕ್ತಿಯನ್ನು ಹೇಳುತ್ತಿದೆ’ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.</p>.<p class="bodytext">‘ಈ ಯೋಜನೆಯ ಮೂಲಕ ನಾವು ಭಾರತದಲ್ಲಿ ಉಕ್ಕು ತಯಾರಿಕೆ ಮಾಡುವುದಕ್ಕೆ ಮಾತ್ರ ಗಮನ ನೀಡುತ್ತಿಲ್ಲ. ಬದಲಿಗೆ, ಭಾರತದಿಂದ ಜಗತ್ತಿಗೆ ಉಕ್ಕು ಪೂರೈಕೆ ಮಾಡುವತ್ತಲೂ ಆಲೋಚನೆ ಹೊಂದಿದ್ದೇವೆ’ ಎಂದು ಹೇಳಿದ್ದಾರೆ.</p>.<p class="bodytext">ಯೋಜನೆಯ ಮೂರನೆಯ ಸುತ್ತು ಹೊಸ ಉದ್ದಿಮೆಗಳಿಗೆ ಹಾಗೂ ಈಗಾಗಲೇ ಇರುವ ಉದ್ದಿಮೆಗಳಿಗೆ ಹೊಸ ಅವಕಾಶಗಳನ್ನು ತೆರೆಯುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿಶೇಷ ಬಳಕೆ ಉದ್ದೇಶದ ಉಕ್ಕು ತಯಾರಿಕಾ ವಲಯದಲ್ಲಿ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೂರನೆಯ ಸುತ್ತಿನ ಉತ್ಪಾದನೆ ಆಧಾರಿತ ಉತ್ತೇಜನ (ಪಿಎಲ್ಐ) ಯೋಜನೆಯನ್ನು ಮಂಗಳವಾರ ಆರಂಭಿಸಿದೆ.</p>.<p>ದೇಶಿ ಉತ್ಪಾದನೆ ಹೆಚ್ಚಿಸುವುದು ಹಾಗೂ ಆಮದನ್ನು ತಗ್ಗಿಸುವುದು ಕೂಡ ಪಿಎಲ್ಐ ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ. ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಯೋಜನೆಗೆ ಚಾಲನೆ ನೀಡಿದರು.</p>.<p>ರಕ್ಷಣೆ, ವೈಮಾಂತರಿಕ್ಷ, ಇಂಧನ, ವಾಹನ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಬಳಕೆ ಮಾಡುವ ‘ವಿಶೇಷ ಬಳಕೆ ಉದ್ದೇಶದ ಉಕ್ಕು’ ತಯಾರಿಕಾ ವಲಯಕ್ಕೆ ಸಂಬಂಧಿಸಿದ ಪಿಎಲ್ಐ ಯೋಜನೆಗೆ ಕೇಂದ್ರ ಸಚಿವ ಸಂಪುಟವು 2021ರ ಜುಲೈನಲ್ಲಿ ಒಪ್ಪಿಗೆ ನೀಡಿತ್ತು. ಇದಕ್ಕೆ ₹6,322 ಕೋಟಿ ಅನುದಾನ ನಿಗದಿ ಮಾಡಲಾಗಿತ್ತು.</p>.<p class="bodytext">ಈ ಯೋಜನೆಯು ಮೊದಲ ಎರಡು ಸುತ್ತುಗಳಲ್ಲಿ ಇದುವರೆಗೆ ₹43,874 ಕೋಟಿ ಹೂಡಿಕೆಯನ್ನು ಆಕರ್ಷಿಸಿದೆ. ಈ ಪೈಕಿ ₹22,973 ಕೋಟಿ ಈಗಾಗಲೇ ಹೂಡಿಕೆ ಆಗಿದೆ. ಅಲ್ಲದೆ, ಮೊದಲ ಎರಡು ಸುತ್ತುಗಳ ಮೂಲಕ 13 ಸಾವಿರಕ್ಕೂ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಿದೆ.</p>.<p class="bodytext">‘ಮೊದಲ ಎರಡು ಸುತ್ತುಗಳಲ್ಲಿ ದೊರೆತ ಸ್ಪಂದನವು ಉತ್ತೇಜನಕಾರಿಯಾಗಿದೆ. ಆ ಯಶಸ್ಸು ಸುಧಾರಣೆ ಆಧಾರಿತ ಹಾಗೂ ಕೈಗಾರಿಕೆಗಳಿಗೆ ಅಗತ್ಯವಿರುವ ನೀತಿಗಳ ಶಕ್ತಿಯನ್ನು ಹೇಳುತ್ತಿದೆ’ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.</p>.<p class="bodytext">‘ಈ ಯೋಜನೆಯ ಮೂಲಕ ನಾವು ಭಾರತದಲ್ಲಿ ಉಕ್ಕು ತಯಾರಿಕೆ ಮಾಡುವುದಕ್ಕೆ ಮಾತ್ರ ಗಮನ ನೀಡುತ್ತಿಲ್ಲ. ಬದಲಿಗೆ, ಭಾರತದಿಂದ ಜಗತ್ತಿಗೆ ಉಕ್ಕು ಪೂರೈಕೆ ಮಾಡುವತ್ತಲೂ ಆಲೋಚನೆ ಹೊಂದಿದ್ದೇವೆ’ ಎಂದು ಹೇಳಿದ್ದಾರೆ.</p>.<p class="bodytext">ಯೋಜನೆಯ ಮೂರನೆಯ ಸುತ್ತು ಹೊಸ ಉದ್ದಿಮೆಗಳಿಗೆ ಹಾಗೂ ಈಗಾಗಲೇ ಇರುವ ಉದ್ದಿಮೆಗಳಿಗೆ ಹೊಸ ಅವಕಾಶಗಳನ್ನು ತೆರೆಯುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>