ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್ ಮತ್ತು ಬ್ಯಾಂಕ್ಗಳು ದಿವಾಳಿ ಎದ್ದ ಅಥವಾ ಆರ್ಬಿಐ ಅವುಗಳ ಲೈಸನ್ಸ್ ರದ್ದುಪಡಿಸಿದ ಸಂದರ್ಭದಲ್ಲಿ ಠೇವಣಿಗಳಿಗೆ ಸದ್ಯಕ್ಕೆ ಇರುವ ₹ 1 ಲಕ್ಷದ ವಿಮೆ ಪರಿಹಾರ ಮೊತ್ತವನ್ನು ₹ 2 ಲಕ್ಷಕ್ಕಿಂತ ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ (ಎಫ್ಆರ್ಡಿಐ) ಮಸೂದೆ ಮಂಡಿಸಲಾಗುತ್ತಿದೆ.