ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಠೇವಣಿ ವಿಮೆ ಹೆಚ್ಚಳಕ್ಕೆ ಚಿಂತನೆ

Last Updated 14 ನವೆಂಬರ್ 2019, 19:41 IST
ಅಕ್ಷರ ಗಾತ್ರ

ನವದೆಹಲಿ: ಬ್ಯಾಂಕ್‌ಗಳಲ್ಲಿನ ಠೇವಣಿಗಳಿಗೆ ಸದ್ಯಕ್ಕೆ ಇರುವ ವಿಮೆ ಪರಿಹಾರ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್‌ ಮತ್ತು ಬ್ಯಾಂಕ್‌ಗಳು ದಿವಾಳಿ ಎದ್ದ ಅಥವಾ ಆರ್‌ಬಿಐ ಅವುಗಳ ಲೈಸನ್ಸ್‌ ರದ್ದುಪಡಿಸಿದ ಸಂದರ್ಭದಲ್ಲಿ ಠೇವಣಿಗಳಿಗೆ ಸದ್ಯಕ್ಕೆ ಇರುವ ₹ 1 ಲಕ್ಷದ ವಿಮೆ ಪರಿಹಾರ ಮೊತ್ತವನ್ನು ₹ 2 ಲಕ್ಷಕ್ಕಿಂತ ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ (ಎಫ್‌ಆರ್‌ಡಿಐ) ಮಸೂದೆ ಮಂಡಿಸಲಾಗುತ್ತಿದೆ.

ಠೇವಣಿ ವಿಮೆ ಪರಿಹಾರ ಮೊತ್ತವನ್ನು ಈ ಹಿಂದೆ 1993ರಲ್ಲಿ ₹ 30 ಸಾವಿರದಿಂದ ₹ 1 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. ವಿಮೆ ಪರಿಹಾರ ಮೊತ್ತ ಹೆಚ್ಚಳದಿಂದ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿನ ಜನರ ವಿಶ್ವಾಸ ಹೆಚ್ಚಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT