ಈ ತಿದ್ದುಪಡಿ ಜಾರಿಗೆ ಬಂದರೆ, ಸಾಲ ವಸೂಲಾತಿ ಪ್ರಕ್ರಿಯೆ ಹೆಚ್ಚು ಆಕರ್ಷಕವಾಗಲಿದೆ. ಖರೀದಿದಾರರಲ್ಲಿ ಆತ್ಮವಿಶ್ವಾಸ ಮೂಡಿಸಲು ಸಾಧ್ಯವಾಗಲಿದೆ. ಸಾಲ ವಸೂಲಾತಿ ಪ್ರಕ್ರಿಯೆಗೆ ಒಳಪಟ್ಟಿರುವ ಬಹುತೇಕ ಪ್ರಕರಣಗಳಲ್ಲಿ ಪ್ರವರ್ತಕರ ವಿರುದ್ಧ ವಿವಿಧ ಸಂಸ್ಥೆಗಳಿಂದ ತನಿಖೆ ನಡೆಯುತ್ತಿವೆ. ಇಂತಹ ತನಿಖೆಗಳ ವ್ಯಾಪ್ತಿಯಿಂದ ಆಸ್ತಿ ಖರೀದಿದಾರರನ್ನು ಹೊರಗೆ ಇಡುವುದು ತಿದ್ದುಪಡಿಯ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.