ನವದೆಹಲಿ: ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಐಪಿಒ ಪ್ರಕ್ರಿಯೆಯನ್ನುಪ್ರಸಕ್ತ ಹಣಕಾಸು ವರ್ಷದಲ್ಲಿಯೇ ಪೂರ್ಣಗೊಳಿಸುವ ಇರಾದೆಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕೃಷ್ಣರಾವ್ ಕರಾಡ್ ಅವರು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ಷೇರು ವಿಕ್ರಯ ಗುರಿ ತಲುಪಲು ಎಲ್ಐಸಿ ಐಪಿಒ ಬಹಳ ಮುಖ್ಯವಾಗಿದೆ. ಹಲವು ಕಂಪನಿಗಳ ಷೇರುವಿಕ್ರಯವು ಈ ವರ್ಷದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಕರಾಡ್ ಹೇಳಿದ್ದಾರೆ.