<p><strong>ನವದೆಹಲಿ:</strong> ಪ್ರಸಕ್ತ ವರ್ಷದಲ್ಲಿ 5 ಲಕ್ಷ ಟನ್ ಈರುಳ್ಳಿ ಕಾಪು ದಾಸ್ತಾನು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<p>ಮುಕ್ತ ಮಾರುಕಟ್ಟೆಯಲ್ಲಿ ದರ ಏರಿಕೆ ನಿಯಂತ್ರಿಸಲು ಪ್ರತಿ ವರ್ಷ ಈರುಳ್ಳಿಯನ್ನು ದಾಸ್ತಾನು ಮಾಡಲಾಗುತ್ತದೆ. ಕಳೆದ ವರ್ಷ ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವಾಲಯವು 5 ಲಕ್ಷ ಟನ್ ಈರುಳ್ಳಿ ದಾಸ್ತಾನು ಮಾಡಿತ್ತು. ಈ ಪೈಕಿ ಇನ್ನೂ ಒಂದು ಲಕ್ಷ ಟನ್ ದಾಸ್ತಾನು ಉಳಿದಿದೆ. </p>.<p>ಕೇಂದ್ರ ಸರ್ಕಾರದ ಏಜೆನ್ಸಿಗಳಾದ ಎನ್ಸಿಸಿಎಫ್ ಹಾಗೂ ನಾಫೆಡ್ ಮೂಲಕ ರೈತರಿಂದ ನೇರವಾಗಿ ಈರುಳ್ಳಿ ಖರೀದಿಸಿ ದಾಸ್ತಾನು ಮಾಡಲಾಗುತ್ತದೆ. ದರ ಏರಿಕೆಯಾದಾಗ ಸಂಗ್ರಹಿಸಿಟ್ಟಿರುವ ಈರುಳ್ಳಿಯನ್ನು ಖರೀದಿ ಏಜೆನ್ಸಿಗಳ ಮೂಲಕವೇ ಚಿಲ್ಲರೆ ಮಾರುಕಟ್ಟೆಯಲ್ಲಿ ರಿಯಾಯಿತಿ ದರದಡಿ ಮಾರಾಟ ಮಾಡಲಿದೆ. </p>.<p>ದೇಶದಲ್ಲಿ ಈರುಳ್ಳಿಯ ಬೆಲೆ ನಿಯಂತ್ರಿಸುವ ಉದ್ದೇಶದಿಂದ ಇದೇ 31ರ ವರೆಗೆ ರಫ್ತಿಗೆ ನಿಷೇಧ ಹೇರಲಾಗಿದೆ. ಆದರೆ, ಮಿತ್ರ ರಾಷ್ಟ್ರಗಳನ್ನು ಈ ಪಟ್ಟಿಯಿಂದ ಹೊರಗಿಡಲಾಗಿದೆ.</p>.<p><strong>ಉತ್ಪಾದನೆ ಶೇ 16ರಷ್ಟು ಕುಸಿತ:</strong> ಕಳೆದ ವರ್ಷಕ್ಕೆ ಹೋಲಿಸಿದರೆ 2023–24ನೇ ಸಾಲಿನಡಿ ಈರುಳ್ಳಿ ಉತ್ಪಾದನೆಯು ಶೇ 16ರಷ್ಟು ಕಡಿಮೆಯಾಗಲಿದೆ ಎಂದು ಕೇಂದ್ರ ಕೃಷಿ ಸಚಿವಾಲಯವು ಅಂದಾಜಿಸಿದೆ.</p>.<p>ಮಹಾರಾಷ್ಟ್ರದಲ್ಲಿ 34.31 ಲಕ್ಷ ಟನ್, ಕರ್ನಾಟಕ 9.95 ಲಕ್ಷ ಟನ್, ಆಂಧ್ರಪ್ರದೇಶ 3.54 ಲಕ್ಷ ಟನ್ ಹಾಗೂ ರಾಜಸ್ಥಾನದಲ್ಲಿ 3.12 ಲಕ್ಷ ಟನ್ನಷ್ಟು ಉತ್ಪಾದನೆ ಕುಸಿತವಾಗಲಿದೆ ಎಂದು ತಿಳಿಸಿದೆ.</p>.<p>‘ಹಾಗಾಗಿ, ದೇಶದಲ್ಲಿ ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮುಂಜಾಗ್ರತೆಯಾಗಿ ಈರುಳ್ಳಿ ದಾಸ್ತಾನಿಗೆ ಸರ್ಕಾರ ನಿರ್ಧರಿಸಿದೆ’ ಎಂದು ಮೂಲಗಳು ತಿಳಿಸಿವೆ.</p>.<p><strong>ಆಹಾರ ಪದಾರ್ಥಗಳ ಬೆಲೆ ನಿಯಂತ್ರಣಕ್ಕೆ ಕ್ರಮ: ಗೋಯಲ್ </strong></p><p><strong>ನವದೆಹಲಿ (ಪಿಟಿಐ):</strong> ‘ದೇಶದಲ್ಲಿ ಈರುಳ್ಳಿ ಟೊಮೆಟೊ ಬೇಳೆಕಾಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ’ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ. </p><p>‘ಲೋಕಸಭೆಗೆ ಶೀಘ್ರವೇ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಆಹಾರ ಪದಾರ್ಥಗಳ ಬೆಲೆಗಳನ್ನು ನಿಯಂತ್ರಿಸಲು ಕ್ರಮವಹಿಸಲಾಗಿದೆ. ಯಾವುದೇ ಪದಾರ್ಥದ ಬೆಲೆಯು ತಾತ್ಕಾಲಿಕವಾಗಿ ಏರಿಕೆಯಾದ ವೇಳೆ ಕೇಂದ್ರ ಸರ್ಕಾರವು ಕೆಲವೇ ದಿನಗಳಲ್ಲಿ ನಿಯಂತ್ರಿಸಿರುವ ಹಲವು ನಿದರ್ಶನಗಳಿವೆ’ ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ. </p><p>ದೇಶದ ಮಹಿಳೆಯರ ಹಿತಕಾಯಲು ಸರ್ಕಾರ ಬದ್ಧವಾಗಿದೆ. ಆಹಾರದ ಹಣದುಬ್ಬರ ನಿಯಂತ್ರಣಕ್ಕೂ ಕ್ರಮವಹಿಸಿದೆ. ಇದಕ್ಕಾಗಿಯೇ ಕಳೆದ ಕೆಲವು ವರ್ಷಗಳಿಂದ ಬೆಲೆ ಸ್ಥಿರೀಕರಣ ನಿಧಿಯಡಿ ₹28 ಸಾವಿರ ಕೋಟಿಯನ್ನು ಖರ್ಚು ಮಾಡಿದೆ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಸಕ್ತ ವರ್ಷದಲ್ಲಿ 5 ಲಕ್ಷ ಟನ್ ಈರುಳ್ಳಿ ಕಾಪು ದಾಸ್ತಾನು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<p>ಮುಕ್ತ ಮಾರುಕಟ್ಟೆಯಲ್ಲಿ ದರ ಏರಿಕೆ ನಿಯಂತ್ರಿಸಲು ಪ್ರತಿ ವರ್ಷ ಈರುಳ್ಳಿಯನ್ನು ದಾಸ್ತಾನು ಮಾಡಲಾಗುತ್ತದೆ. ಕಳೆದ ವರ್ಷ ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವಾಲಯವು 5 ಲಕ್ಷ ಟನ್ ಈರುಳ್ಳಿ ದಾಸ್ತಾನು ಮಾಡಿತ್ತು. ಈ ಪೈಕಿ ಇನ್ನೂ ಒಂದು ಲಕ್ಷ ಟನ್ ದಾಸ್ತಾನು ಉಳಿದಿದೆ. </p>.<p>ಕೇಂದ್ರ ಸರ್ಕಾರದ ಏಜೆನ್ಸಿಗಳಾದ ಎನ್ಸಿಸಿಎಫ್ ಹಾಗೂ ನಾಫೆಡ್ ಮೂಲಕ ರೈತರಿಂದ ನೇರವಾಗಿ ಈರುಳ್ಳಿ ಖರೀದಿಸಿ ದಾಸ್ತಾನು ಮಾಡಲಾಗುತ್ತದೆ. ದರ ಏರಿಕೆಯಾದಾಗ ಸಂಗ್ರಹಿಸಿಟ್ಟಿರುವ ಈರುಳ್ಳಿಯನ್ನು ಖರೀದಿ ಏಜೆನ್ಸಿಗಳ ಮೂಲಕವೇ ಚಿಲ್ಲರೆ ಮಾರುಕಟ್ಟೆಯಲ್ಲಿ ರಿಯಾಯಿತಿ ದರದಡಿ ಮಾರಾಟ ಮಾಡಲಿದೆ. </p>.<p>ದೇಶದಲ್ಲಿ ಈರುಳ್ಳಿಯ ಬೆಲೆ ನಿಯಂತ್ರಿಸುವ ಉದ್ದೇಶದಿಂದ ಇದೇ 31ರ ವರೆಗೆ ರಫ್ತಿಗೆ ನಿಷೇಧ ಹೇರಲಾಗಿದೆ. ಆದರೆ, ಮಿತ್ರ ರಾಷ್ಟ್ರಗಳನ್ನು ಈ ಪಟ್ಟಿಯಿಂದ ಹೊರಗಿಡಲಾಗಿದೆ.</p>.<p><strong>ಉತ್ಪಾದನೆ ಶೇ 16ರಷ್ಟು ಕುಸಿತ:</strong> ಕಳೆದ ವರ್ಷಕ್ಕೆ ಹೋಲಿಸಿದರೆ 2023–24ನೇ ಸಾಲಿನಡಿ ಈರುಳ್ಳಿ ಉತ್ಪಾದನೆಯು ಶೇ 16ರಷ್ಟು ಕಡಿಮೆಯಾಗಲಿದೆ ಎಂದು ಕೇಂದ್ರ ಕೃಷಿ ಸಚಿವಾಲಯವು ಅಂದಾಜಿಸಿದೆ.</p>.<p>ಮಹಾರಾಷ್ಟ್ರದಲ್ಲಿ 34.31 ಲಕ್ಷ ಟನ್, ಕರ್ನಾಟಕ 9.95 ಲಕ್ಷ ಟನ್, ಆಂಧ್ರಪ್ರದೇಶ 3.54 ಲಕ್ಷ ಟನ್ ಹಾಗೂ ರಾಜಸ್ಥಾನದಲ್ಲಿ 3.12 ಲಕ್ಷ ಟನ್ನಷ್ಟು ಉತ್ಪಾದನೆ ಕುಸಿತವಾಗಲಿದೆ ಎಂದು ತಿಳಿಸಿದೆ.</p>.<p>‘ಹಾಗಾಗಿ, ದೇಶದಲ್ಲಿ ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮುಂಜಾಗ್ರತೆಯಾಗಿ ಈರುಳ್ಳಿ ದಾಸ್ತಾನಿಗೆ ಸರ್ಕಾರ ನಿರ್ಧರಿಸಿದೆ’ ಎಂದು ಮೂಲಗಳು ತಿಳಿಸಿವೆ.</p>.<p><strong>ಆಹಾರ ಪದಾರ್ಥಗಳ ಬೆಲೆ ನಿಯಂತ್ರಣಕ್ಕೆ ಕ್ರಮ: ಗೋಯಲ್ </strong></p><p><strong>ನವದೆಹಲಿ (ಪಿಟಿಐ):</strong> ‘ದೇಶದಲ್ಲಿ ಈರುಳ್ಳಿ ಟೊಮೆಟೊ ಬೇಳೆಕಾಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ’ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ. </p><p>‘ಲೋಕಸಭೆಗೆ ಶೀಘ್ರವೇ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಆಹಾರ ಪದಾರ್ಥಗಳ ಬೆಲೆಗಳನ್ನು ನಿಯಂತ್ರಿಸಲು ಕ್ರಮವಹಿಸಲಾಗಿದೆ. ಯಾವುದೇ ಪದಾರ್ಥದ ಬೆಲೆಯು ತಾತ್ಕಾಲಿಕವಾಗಿ ಏರಿಕೆಯಾದ ವೇಳೆ ಕೇಂದ್ರ ಸರ್ಕಾರವು ಕೆಲವೇ ದಿನಗಳಲ್ಲಿ ನಿಯಂತ್ರಿಸಿರುವ ಹಲವು ನಿದರ್ಶನಗಳಿವೆ’ ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ. </p><p>ದೇಶದ ಮಹಿಳೆಯರ ಹಿತಕಾಯಲು ಸರ್ಕಾರ ಬದ್ಧವಾಗಿದೆ. ಆಹಾರದ ಹಣದುಬ್ಬರ ನಿಯಂತ್ರಣಕ್ಕೂ ಕ್ರಮವಹಿಸಿದೆ. ಇದಕ್ಕಾಗಿಯೇ ಕಳೆದ ಕೆಲವು ವರ್ಷಗಳಿಂದ ಬೆಲೆ ಸ್ಥಿರೀಕರಣ ನಿಧಿಯಡಿ ₹28 ಸಾವಿರ ಕೋಟಿಯನ್ನು ಖರ್ಚು ಮಾಡಿದೆ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>