<p><strong>ನವದೆಹಲಿ</strong>: ಧಾರಣೆ ಕುಸಿತದಿಂದ ತೊಂದರೆಗೆ ಸಿಲುಕಿರುವ ರೈತರ ಹಿತದೃಷ್ಟಿಯಿಂದ ಬೆಲೆ ಬೆಂಬಲ ಯೋಜನೆಯಡಿ (ಪಿಎಸ್ಎಸ್) ಏಪ್ರಿಲ್ 13ರ ವರೆಗೆ 3.40 ಲಕ್ಷ ಟನ್ ತೊಗರಿ ಖರೀದಿಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಶುಕ್ರವಾರ ತಿಳಿಸಿದೆ. </p>.<p>ಕರ್ನಾಟಕದಿಂದ ಅತಿಹೆಚ್ಚು 1.30 ಲಕ್ಷ ಟನ್ ತೊಗರಿ ಖರೀದಿಸಲಾಗಿದೆ. ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಲ್ಗೆ ₹7,550 ಬೆಲೆ ನಿಗದಿಪಡಿಸಿದೆ. ರಾಜ್ಯ ಸರ್ಕಾರ ₹450 ಪ್ರೋತ್ಸಾಹ ಧನ ಘೋಷಿಸಿದೆ. ಇದು ಖರೀದಿ ಹೆಚ್ಚಳಕ್ಕೆ ಕಾರಣವಾಗಿದೆ. </p>.<p>2024–25ನೇ ಮುಂಗಾರು ಋತುವಿನಲ್ಲಿ ಕರ್ನಾಟಕ ಸೇರಿ ಆಂಧ್ರಪ್ರದೇಶ, ಛತ್ತೀಸಗಢ, ಗುಜರಾತ್, ಹರಿಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರಪ್ರದೇಶದಲ್ಲಿ ಖರೀದಿಗೆ ಸಚಿವಾಲಯವು ಅನುಮತಿ ನೀಡಿದೆ. ಮಾರುಕಟ್ಟೆಯಲ್ಲಿ ದರ ನಿಯಂತ್ರಿಸಲು ಒಟ್ಟು 13.22 ಲಕ್ಷ ಟನ್ ತೊಗರಿಯನ್ನು ಈ ರಾಜ್ಯಗಳಿಂದ ಖರೀದಿಸಲು ಸರ್ಕಾರ ಗುರಿ ಹೊಂದಿದೆ ಎಂದು ತಿಳಿಸಿದೆ. </p>.<p>ತೆಲಂಗಾಣ ಮತ್ತು ಮಧ್ಯಪ್ರದೇಶದಿಂದ 17 ಸಾವಿರ ಟನ್ ಕಡಲೆಕಾಳು ಖರೀದಿಸಿದೆ. 28,700 ಟನ್ ಚೆನ್ನಂಗಿ ಬೇಳೆ (ಮಸೂರ್ ದಾಲ್) ಮತ್ತು 3 ಸಾವಿರ ಟನ್ ಹೆಸರುಕಾಳು ಖರೀದಿಸಲಾಗಿದೆ ಎಂದು ತಿಳಿಸಿದೆ.</p>.<p>ಮುಕ್ತ ಮಾರುಕಟ್ಟೆಯಲ್ಲಿ ಕನಿಷ್ಠ ಬೆಂಬಲ ಬೆಲೆಗಿಂತ (ಎಂಎಸ್ಪಿ) ಕಡಿಮೆ ದರದಲ್ಲಿ ಮಾರಾಟವಾಗುತ್ತಿದ್ದರೆ ಬೆಲೆ ಬೆಂಬಲ ಯೋಜನೆಯಡಿ ಕೃಷಿ ಹುಟ್ಟುವಳಿಗಳನ್ನು ಖರೀದಿಸಲಾಗುತ್ತದೆ ಎಂದು ಹೇಳಿದೆ.</p>.<p>ದೇಶದಲ್ಲಿ ದ್ವಿದಳ ಧಾನ್ಯಗಳ ಉತ್ಪಾದನೆ ಹೆಚ್ಚಿಸಲು ಕೇಂದ್ರವು ಆತ್ಮನಿರ್ಭರ ಮಿಷನ್ ಅನ್ನು 2028–29ರ ವರೆಗೂ ವಿಸ್ತರಿಸಿದೆ. ಕೇಂದ್ರದ ಏಜೆನ್ಸಿಗಳ ಮೂಲಕ ರೈತರಿಂದ ತೊಗರಿ, ಚೆನ್ನಂಗಿ ಬೇಳೆ ಮತ್ತು ಉದ್ದು ಖರೀದಿಸಲಾಗುವುದು ಎಂದು ಸರ್ಕಾರವು ಬಜೆಟ್ನಲ್ಲಿ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಧಾರಣೆ ಕುಸಿತದಿಂದ ತೊಂದರೆಗೆ ಸಿಲುಕಿರುವ ರೈತರ ಹಿತದೃಷ್ಟಿಯಿಂದ ಬೆಲೆ ಬೆಂಬಲ ಯೋಜನೆಯಡಿ (ಪಿಎಸ್ಎಸ್) ಏಪ್ರಿಲ್ 13ರ ವರೆಗೆ 3.40 ಲಕ್ಷ ಟನ್ ತೊಗರಿ ಖರೀದಿಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಶುಕ್ರವಾರ ತಿಳಿಸಿದೆ. </p>.<p>ಕರ್ನಾಟಕದಿಂದ ಅತಿಹೆಚ್ಚು 1.30 ಲಕ್ಷ ಟನ್ ತೊಗರಿ ಖರೀದಿಸಲಾಗಿದೆ. ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಲ್ಗೆ ₹7,550 ಬೆಲೆ ನಿಗದಿಪಡಿಸಿದೆ. ರಾಜ್ಯ ಸರ್ಕಾರ ₹450 ಪ್ರೋತ್ಸಾಹ ಧನ ಘೋಷಿಸಿದೆ. ಇದು ಖರೀದಿ ಹೆಚ್ಚಳಕ್ಕೆ ಕಾರಣವಾಗಿದೆ. </p>.<p>2024–25ನೇ ಮುಂಗಾರು ಋತುವಿನಲ್ಲಿ ಕರ್ನಾಟಕ ಸೇರಿ ಆಂಧ್ರಪ್ರದೇಶ, ಛತ್ತೀಸಗಢ, ಗುಜರಾತ್, ಹರಿಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರಪ್ರದೇಶದಲ್ಲಿ ಖರೀದಿಗೆ ಸಚಿವಾಲಯವು ಅನುಮತಿ ನೀಡಿದೆ. ಮಾರುಕಟ್ಟೆಯಲ್ಲಿ ದರ ನಿಯಂತ್ರಿಸಲು ಒಟ್ಟು 13.22 ಲಕ್ಷ ಟನ್ ತೊಗರಿಯನ್ನು ಈ ರಾಜ್ಯಗಳಿಂದ ಖರೀದಿಸಲು ಸರ್ಕಾರ ಗುರಿ ಹೊಂದಿದೆ ಎಂದು ತಿಳಿಸಿದೆ. </p>.<p>ತೆಲಂಗಾಣ ಮತ್ತು ಮಧ್ಯಪ್ರದೇಶದಿಂದ 17 ಸಾವಿರ ಟನ್ ಕಡಲೆಕಾಳು ಖರೀದಿಸಿದೆ. 28,700 ಟನ್ ಚೆನ್ನಂಗಿ ಬೇಳೆ (ಮಸೂರ್ ದಾಲ್) ಮತ್ತು 3 ಸಾವಿರ ಟನ್ ಹೆಸರುಕಾಳು ಖರೀದಿಸಲಾಗಿದೆ ಎಂದು ತಿಳಿಸಿದೆ.</p>.<p>ಮುಕ್ತ ಮಾರುಕಟ್ಟೆಯಲ್ಲಿ ಕನಿಷ್ಠ ಬೆಂಬಲ ಬೆಲೆಗಿಂತ (ಎಂಎಸ್ಪಿ) ಕಡಿಮೆ ದರದಲ್ಲಿ ಮಾರಾಟವಾಗುತ್ತಿದ್ದರೆ ಬೆಲೆ ಬೆಂಬಲ ಯೋಜನೆಯಡಿ ಕೃಷಿ ಹುಟ್ಟುವಳಿಗಳನ್ನು ಖರೀದಿಸಲಾಗುತ್ತದೆ ಎಂದು ಹೇಳಿದೆ.</p>.<p>ದೇಶದಲ್ಲಿ ದ್ವಿದಳ ಧಾನ್ಯಗಳ ಉತ್ಪಾದನೆ ಹೆಚ್ಚಿಸಲು ಕೇಂದ್ರವು ಆತ್ಮನಿರ್ಭರ ಮಿಷನ್ ಅನ್ನು 2028–29ರ ವರೆಗೂ ವಿಸ್ತರಿಸಿದೆ. ಕೇಂದ್ರದ ಏಜೆನ್ಸಿಗಳ ಮೂಲಕ ರೈತರಿಂದ ತೊಗರಿ, ಚೆನ್ನಂಗಿ ಬೇಳೆ ಮತ್ತು ಉದ್ದು ಖರೀದಿಸಲಾಗುವುದು ಎಂದು ಸರ್ಕಾರವು ಬಜೆಟ್ನಲ್ಲಿ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>