ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ರಾಜ್ಯಗಳ ಜೊತೆ ನಡೆಸಿದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಆಗಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದುಸ್ತಾನ್ ಪೆಟ್ರೋಲಿಯಂ ಕಂಪನಿ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ತೈಲ ಮಾರಾಟ ಕಂಪನಿಗಳ ಪ್ರತಿನಿಧಿಗಳು ಸರ್ಕಾರದ ಆಲೋಚನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಮ್ಮಿಂದ ಸಾಧ್ಯವಾಗುವ ಎಲ್ಲ ಸಹಕಾರ ನೀಡಲಾಗುತ್ತದೆ ಎಂದು ತಿಳಿಸಿದರು.