ನವದೆಹಲಿ: ಕಿರಿಕಿರಿ ಉಂಟುಮಾಡುವ ದೂರವಾಣಿ ಕರೆಗಳ ಸಮಸ್ಯೆ ನಿವಾರಿಸಲು, ದೂರವಾಣಿ ಕರೆ ಹಾಗೂ ಎಸ್ಎಂಎಸ್ ಮೂಲಕ ನಡೆಸುವ ಹಣಕಾಸಿನ ವಂಚನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಉದ್ದೇಶದಿಂದ ದೂರಸಂಪರ್ಕ ಸಚಿವಾಲಯವು ಪ್ರತ್ಯೇಕ ವ್ಯವಸ್ಥೆಯೊಂದನ್ನು ರೂಪಿಸಲಿದೆ.
ದೂರಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ ಅವರ ಸೂಚನೆ ಆಧರಿಸಿ ಈ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.
‘ಟೆಲಿಮಾರ್ಕೆಟಿಂಗ್ ಕಂಪನಿಗಳು ತಪ್ಪು ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು, ದೂರಸಂಪರ್ಕ ಸೇವೆಗಳ ಗ್ರಾಹಕರಿಗೆ ಕಿರುಕುಳ ನೀಡುವವರ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು’ ಎಂದು ಪ್ರಕಟಣೆ ತಿಳಿಸಿದೆ.