<p><strong>ಮುಂಬೈ:</strong> ‘ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಕುಸಿತಕ್ಕೆ ರೆಪೊ ದರ ಕಡಿತಗೊಳಿಸದಿರುವುದು ಕಾರಣವಲ್ಲ. ಇದರ ಹಿಂದೆ ಹಲವು ಕಾರಣಗಳು ಬೆಸೆದುಕೊಂಡಿವೆ’ ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ ನಿರ್ಗಮಿತ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.</p>.<p>ತಮ್ಮ ಅಧಿಕಾರಾವಧಿಯ ಕೊನೆಯ ದಿನವಾದ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸದ್ಯ ಚಿಲ್ಲರೆ ಹಣದುಬ್ಬರ ಏರಿಕೆಯ ಹಾದಿ ಹಿಡಿದಿದೆ. ಇದರ ನಿಯಂತ್ರಣದ ಮೂಲಕ ಸಮತೋಲನ ಕಾಯ್ದುಕೊಳ್ಳುವುದೇ ಆರ್ಬಿಐ ಮುಂದಿರುವ ಸವಾಲಾಗಿದೆ’ ಎಂದರು. </p>.<p>ದಾಸ್ ಅವರ ಆರು ವರ್ಷದ ಅಧಿಕಾರಾವಧಿಯಲ್ಲಿ ಕೋವಿಡ್, ರಷ್ಯಾ–ಉಕ್ರೇನ್ ಯುದ್ಧ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಸವಾಲಿನಿಂದ ಕೂಡಿತ್ತು. ದಾಸ್ ಅಧ್ಯಕ್ಷತೆಯಲ್ಲಿ ನಡೆದ ಆರ್ಬಿಐ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯು ಸತತ 11 ಬಾರಿ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. </p>.<p>‘ಭವಿಷ್ಯದ ಆರ್ಥಿಕತೆಯ ಮುನ್ನೋಟ ಹಾಗೂ ಜಾಗತಿಕ ಬಿಕ್ಕಟ್ಟಿನಿಂದಾಗಿ ಬಡ್ಡಿದರ ಪರಿಷ್ಕರಣೆಗೆ ಮುಂದಾಗಿಲ್ಲ’ ಎಂದರು.</p>.<p>‘ನಮ್ಮ ಸುತ್ತಲೂ ನಡೆಯುತ್ತಿರುವ ಆರ್ಥಿಕ ಚಟುವಟಿಕೆಗಳ ಬಗ್ಗೆ ಎಂಪಿಸಿ ಮತ್ತು ಆರ್ಬಿಐಗೆ ಮನದಟ್ಟಾಗಿದೆ. ಹಾಗಾಗಿ, ನಮ್ಮ ಆಯ್ಕೆ ಉತ್ತಮವಾಗಿದೆ’ ಎಂದು ಸಮರ್ಥಿಸಿಕೊಂಡರು.</p>.<p>‘ದೇಶದ ಆರ್ಥಿಕತೆ ಬೆಳವಣಿಗೆಯು ಚೇತರಿಕೆ ಹಾದಿಯಲ್ಲಿದೆ. ಜಾಗತಿಕ ಬಿಕ್ಕಟ್ಟಿನಿಂದ ಎದುರಾಗುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಹೊಂದಿದೆ’ ಎಂದರು.</p>.<p>‘ನೂತನ ಗವರ್ನರ್ ಸಂಜಯ್ ಮಲ್ಹೋತ್ರಾ ಅವರಿಗೆ ಅಪಾರ ಅನುಭವವಿದೆ. ಕೇಂದ್ರೀಯ ಬ್ಯಾಂಕ್ಗೆ ಉತ್ತಮ ಕೊಡುಗೆ ನೀಡಲಿದ್ದಾರೆ’ ಎಂದು ಹೇಳಿದರು.</p>.<p>ತ್ವರಿತಗತಿ ಹಾಗೂ ಸುಲಭವಾಗಿ ಸಾಲ ಸೌಲಭ್ಯ ಕಲ್ಪಿಸಲು ಆರ್ಬಿಐ ಡಿಜಿಟಲ್ ವೇದಿಕೆಯಾದ ಯುನಿಫೈಡ್ ಲೆಂಡಿಂಗ್ ಇಂಟರ್ಫೇಸ್ (ಯುಎಲ್ಐ) ಅನ್ನು ರೂಪಿಸಿದ್ದು, ದೇಶದಾದ್ಯಂತ ಆರಂಭಗೊಳ್ಳಲಿದೆ. ಕೇಂದ್ರೀಯ ಬ್ಯಾಂಕ್ನ ಡಿಜಿಟಲ್ ಕರೆನ್ಸಿಯು (ಸಿಬಿಡಿಸಿ) ಭವಿಷ್ಯದ ಕರೆನ್ಸಿಯಾಗಲಿದೆ ಎಂದು ಹೇಳಿದರು.</p>.<div><blockquote>ಕಳೆದ ಆರು ವರ್ಷದಲ್ಲಿ ಕೇಂದ್ರ ಹಣಕಾಸು ಸಚಿವಾಲಯ ಮತ್ತು ಆರ್ಬಿಐ ನಡುವೆ ಉತ್ತಮ ಸಹಕಾರ ಮತ್ತು ಸಮನ್ವಯವಿತ್ತು</blockquote><span class="attribution">ಶಕ್ತಿಕಾಂತ ದಾಸ್ ಆರ್ಬಿಐನ ನಿರ್ಗಮಿತ ಗವರ್ನರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಕುಸಿತಕ್ಕೆ ರೆಪೊ ದರ ಕಡಿತಗೊಳಿಸದಿರುವುದು ಕಾರಣವಲ್ಲ. ಇದರ ಹಿಂದೆ ಹಲವು ಕಾರಣಗಳು ಬೆಸೆದುಕೊಂಡಿವೆ’ ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ ನಿರ್ಗಮಿತ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.</p>.<p>ತಮ್ಮ ಅಧಿಕಾರಾವಧಿಯ ಕೊನೆಯ ದಿನವಾದ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸದ್ಯ ಚಿಲ್ಲರೆ ಹಣದುಬ್ಬರ ಏರಿಕೆಯ ಹಾದಿ ಹಿಡಿದಿದೆ. ಇದರ ನಿಯಂತ್ರಣದ ಮೂಲಕ ಸಮತೋಲನ ಕಾಯ್ದುಕೊಳ್ಳುವುದೇ ಆರ್ಬಿಐ ಮುಂದಿರುವ ಸವಾಲಾಗಿದೆ’ ಎಂದರು. </p>.<p>ದಾಸ್ ಅವರ ಆರು ವರ್ಷದ ಅಧಿಕಾರಾವಧಿಯಲ್ಲಿ ಕೋವಿಡ್, ರಷ್ಯಾ–ಉಕ್ರೇನ್ ಯುದ್ಧ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಸವಾಲಿನಿಂದ ಕೂಡಿತ್ತು. ದಾಸ್ ಅಧ್ಯಕ್ಷತೆಯಲ್ಲಿ ನಡೆದ ಆರ್ಬಿಐ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯು ಸತತ 11 ಬಾರಿ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. </p>.<p>‘ಭವಿಷ್ಯದ ಆರ್ಥಿಕತೆಯ ಮುನ್ನೋಟ ಹಾಗೂ ಜಾಗತಿಕ ಬಿಕ್ಕಟ್ಟಿನಿಂದಾಗಿ ಬಡ್ಡಿದರ ಪರಿಷ್ಕರಣೆಗೆ ಮುಂದಾಗಿಲ್ಲ’ ಎಂದರು.</p>.<p>‘ನಮ್ಮ ಸುತ್ತಲೂ ನಡೆಯುತ್ತಿರುವ ಆರ್ಥಿಕ ಚಟುವಟಿಕೆಗಳ ಬಗ್ಗೆ ಎಂಪಿಸಿ ಮತ್ತು ಆರ್ಬಿಐಗೆ ಮನದಟ್ಟಾಗಿದೆ. ಹಾಗಾಗಿ, ನಮ್ಮ ಆಯ್ಕೆ ಉತ್ತಮವಾಗಿದೆ’ ಎಂದು ಸಮರ್ಥಿಸಿಕೊಂಡರು.</p>.<p>‘ದೇಶದ ಆರ್ಥಿಕತೆ ಬೆಳವಣಿಗೆಯು ಚೇತರಿಕೆ ಹಾದಿಯಲ್ಲಿದೆ. ಜಾಗತಿಕ ಬಿಕ್ಕಟ್ಟಿನಿಂದ ಎದುರಾಗುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಹೊಂದಿದೆ’ ಎಂದರು.</p>.<p>‘ನೂತನ ಗವರ್ನರ್ ಸಂಜಯ್ ಮಲ್ಹೋತ್ರಾ ಅವರಿಗೆ ಅಪಾರ ಅನುಭವವಿದೆ. ಕೇಂದ್ರೀಯ ಬ್ಯಾಂಕ್ಗೆ ಉತ್ತಮ ಕೊಡುಗೆ ನೀಡಲಿದ್ದಾರೆ’ ಎಂದು ಹೇಳಿದರು.</p>.<p>ತ್ವರಿತಗತಿ ಹಾಗೂ ಸುಲಭವಾಗಿ ಸಾಲ ಸೌಲಭ್ಯ ಕಲ್ಪಿಸಲು ಆರ್ಬಿಐ ಡಿಜಿಟಲ್ ವೇದಿಕೆಯಾದ ಯುನಿಫೈಡ್ ಲೆಂಡಿಂಗ್ ಇಂಟರ್ಫೇಸ್ (ಯುಎಲ್ಐ) ಅನ್ನು ರೂಪಿಸಿದ್ದು, ದೇಶದಾದ್ಯಂತ ಆರಂಭಗೊಳ್ಳಲಿದೆ. ಕೇಂದ್ರೀಯ ಬ್ಯಾಂಕ್ನ ಡಿಜಿಟಲ್ ಕರೆನ್ಸಿಯು (ಸಿಬಿಡಿಸಿ) ಭವಿಷ್ಯದ ಕರೆನ್ಸಿಯಾಗಲಿದೆ ಎಂದು ಹೇಳಿದರು.</p>.<div><blockquote>ಕಳೆದ ಆರು ವರ್ಷದಲ್ಲಿ ಕೇಂದ್ರ ಹಣಕಾಸು ಸಚಿವಾಲಯ ಮತ್ತು ಆರ್ಬಿಐ ನಡುವೆ ಉತ್ತಮ ಸಹಕಾರ ಮತ್ತು ಸಮನ್ವಯವಿತ್ತು</blockquote><span class="attribution">ಶಕ್ತಿಕಾಂತ ದಾಸ್ ಆರ್ಬಿಐನ ನಿರ್ಗಮಿತ ಗವರ್ನರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>