<p><strong>ನವದೆಹಲಿ:</strong> ವಿಳಂಬ ಶುಲ್ಕ ಮತ್ತು ವಿಳಂಬ ತೆರಿಗೆ ಪಾವತಿಗೆ ಬಡ್ಡಿ ವಿಧಿಸುವ ಸಂಬಂಧ ಜಿಎಸ್ಟಿ ಮಂಡಳಿ ಸಭೆಯು ಪರಿಹಾರ ಪ್ರಕಟಿಸಿದೆ.</p>.<p>ತೆರಿಗೆ ಪಾವತಿ ಬಾಕಿ ಉಳಿಸಿಕೊಂಡವರಿಗೆ ವಿಳಂಬ ಶುಲ್ಕ ಕಡಿಮೆ ಮಾಡಲಾಗಿದೆ. ತೆರಿಗೆ ಬಾಕಿ ಉಳಿಸಿಕೊಳ್ಳದವರಿಗೆ ವಿಳಂಬ ಶುಲ್ಕವನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ.</p>.<p>ವಾರ್ಷಿಕ ₹ 5 ಕೋಟಿ ಮೊತ್ತದ ವಹಿವಾಟು ನಡೆಸುವವರು ತಡವಾಗಿ ಲೆಕ್ಕಪತ್ರ (ರಿಟರ್ನ್) ಸಲ್ಲಿಸಿರುವುದಕ್ಕೆ ವಿಧಿಸುವ ಬಡ್ಡಿಯನ್ನು ಅರ್ಧದಷ್ಟು ಕಡಿಮೆ ಮಾಡಲಾಗಿದೆ. ಫೆಬ್ರುವರಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳ ರಿಟರ್ನ್ಗಳ ವಿಳಂಬ ಸಲ್ಲಿಕೆಗೆ ವಿಧಿಸಲಾಗುವ ಬಡ್ಡಿಯನ್ನು ಶೇ 18 ರಿಂದ ಶೇ 9ಕ್ಕೆ ಇಳಿಸಲಾಗಿದೆ. ಸೆಪ್ಟೆಂಬರ್ವರೆಗೆ ಈ ಬಡ್ಡಿ ಅನ್ವಯವಾಗಲಿದೆ.</p>.<p>‘ಮೇ, ಜೂನ್ ಮತ್ತು ಜುಲೈ ತಿಂಗಳ ರಿಟರ್ನ್ ಸಲ್ಲಿಕೆ ಗಡುವನ್ನು ಯಾವುದೇ ಬಡ್ಡಿ ಅಥವಾ ವಿಳಂಬ ಶುಲ್ಕ ಪಾವತಿ ಇಲ್ಲದೆ ಸೆಪ್ಟೆಂಬರ್ವರೆಗೆ ವಿಸ್ತರಿಸಲಾಗಿದೆ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಶುಕ್ರವಾರ ನಡೆದ ಜಿಎಸ್ಟಿ ಮಂಡಳಿ ಸಭೆಯ ನಂತರ ಅವರು ಈ ವಿವರ ನೀಡಿದ್ದಾರೆ.</p>.<p>2017ರ ಜುಲೈನಿಂದ 2020ರ ಜನವರಿ ಅವಧಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರದ ನೋಂದಾಯಿತ ಸಂಸ್ಥೆಗಳು ಜಿಎಸ್ಟಿ ರಿಟರ್ನ್ ಸಲ್ಲಿಸಿರದಿದ್ದರೆ ಅವುಗಳಿಗೆ ವಿಳಂಬ ಶುಲ್ಕ ವಿಧಿಸುವುದಿಲ್ಲ. ತಿಂಗಳ ಮಾರಾಟ ರಿಟರ್ನ್ ಸಲ್ಲಿಸದ ಇತರರಿಗೂ ವಿಳಂಬ ಶುಲ್ಕವನ್ನು ಗರಿಷ್ಠ ₹ 500ಕ್ಕೆ ಮಿತಿಗೊಳಿಸಲಾಗಿದೆ.</p>.<p>ಸಿದ್ಧ ಸರಕಿನ ಆಮದು ಸುಂಕವು ಕಚ್ಚಾ ಸರಕಿಗಿಂತ ಹೆಚ್ಚು ಇರುವುದನ್ನು ಸರಿಪಡಿಸಲು ಮಂಡಳಿಯು ಕಾರ್ಯಪ್ರವೃತ್ತವಾಗಿದೆ. ಪಾನ್ ಮಸಾಲಾ ಮೇಲೆ ತೆರಿಗೆ ವಿಧಿಸುವುದು ಮಂಡಳಿಯ ಮುಂದಿನ ಸಭೆಯಲ್ಲಿ ಚರ್ಚೆಗೆ ಬರಲಿದೆ.</p>.<p>‘ಜಿಎಸ್ಟಿ ಸಂಗ್ರಹವು ಶೇ 45ರಷ್ಟು ಕಡಿಮೆಯಾಗಿದೆ. ಇದರಿಂದ ರಾಜ್ಯಗಳಿಗೆ ನೀಡುವ ಜಿಎಸ್ಟಿ ಪರಿಹಾರದಲ್ಲಿ ಸಮಸ್ಯೆ ಎದುರಾಗಿದೆ. ಜುಲೈನಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ಒದಗಿಸುವುದರ ಒಂದೇ ಕಾರ್ಯಸೂಚಿಯು ಇರಲಿದೆ’ ಎಂದೂ ನಿರ್ಮಲಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿಳಂಬ ಶುಲ್ಕ ಮತ್ತು ವಿಳಂಬ ತೆರಿಗೆ ಪಾವತಿಗೆ ಬಡ್ಡಿ ವಿಧಿಸುವ ಸಂಬಂಧ ಜಿಎಸ್ಟಿ ಮಂಡಳಿ ಸಭೆಯು ಪರಿಹಾರ ಪ್ರಕಟಿಸಿದೆ.</p>.<p>ತೆರಿಗೆ ಪಾವತಿ ಬಾಕಿ ಉಳಿಸಿಕೊಂಡವರಿಗೆ ವಿಳಂಬ ಶುಲ್ಕ ಕಡಿಮೆ ಮಾಡಲಾಗಿದೆ. ತೆರಿಗೆ ಬಾಕಿ ಉಳಿಸಿಕೊಳ್ಳದವರಿಗೆ ವಿಳಂಬ ಶುಲ್ಕವನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ.</p>.<p>ವಾರ್ಷಿಕ ₹ 5 ಕೋಟಿ ಮೊತ್ತದ ವಹಿವಾಟು ನಡೆಸುವವರು ತಡವಾಗಿ ಲೆಕ್ಕಪತ್ರ (ರಿಟರ್ನ್) ಸಲ್ಲಿಸಿರುವುದಕ್ಕೆ ವಿಧಿಸುವ ಬಡ್ಡಿಯನ್ನು ಅರ್ಧದಷ್ಟು ಕಡಿಮೆ ಮಾಡಲಾಗಿದೆ. ಫೆಬ್ರುವರಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳ ರಿಟರ್ನ್ಗಳ ವಿಳಂಬ ಸಲ್ಲಿಕೆಗೆ ವಿಧಿಸಲಾಗುವ ಬಡ್ಡಿಯನ್ನು ಶೇ 18 ರಿಂದ ಶೇ 9ಕ್ಕೆ ಇಳಿಸಲಾಗಿದೆ. ಸೆಪ್ಟೆಂಬರ್ವರೆಗೆ ಈ ಬಡ್ಡಿ ಅನ್ವಯವಾಗಲಿದೆ.</p>.<p>‘ಮೇ, ಜೂನ್ ಮತ್ತು ಜುಲೈ ತಿಂಗಳ ರಿಟರ್ನ್ ಸಲ್ಲಿಕೆ ಗಡುವನ್ನು ಯಾವುದೇ ಬಡ್ಡಿ ಅಥವಾ ವಿಳಂಬ ಶುಲ್ಕ ಪಾವತಿ ಇಲ್ಲದೆ ಸೆಪ್ಟೆಂಬರ್ವರೆಗೆ ವಿಸ್ತರಿಸಲಾಗಿದೆ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಶುಕ್ರವಾರ ನಡೆದ ಜಿಎಸ್ಟಿ ಮಂಡಳಿ ಸಭೆಯ ನಂತರ ಅವರು ಈ ವಿವರ ನೀಡಿದ್ದಾರೆ.</p>.<p>2017ರ ಜುಲೈನಿಂದ 2020ರ ಜನವರಿ ಅವಧಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರದ ನೋಂದಾಯಿತ ಸಂಸ್ಥೆಗಳು ಜಿಎಸ್ಟಿ ರಿಟರ್ನ್ ಸಲ್ಲಿಸಿರದಿದ್ದರೆ ಅವುಗಳಿಗೆ ವಿಳಂಬ ಶುಲ್ಕ ವಿಧಿಸುವುದಿಲ್ಲ. ತಿಂಗಳ ಮಾರಾಟ ರಿಟರ್ನ್ ಸಲ್ಲಿಸದ ಇತರರಿಗೂ ವಿಳಂಬ ಶುಲ್ಕವನ್ನು ಗರಿಷ್ಠ ₹ 500ಕ್ಕೆ ಮಿತಿಗೊಳಿಸಲಾಗಿದೆ.</p>.<p>ಸಿದ್ಧ ಸರಕಿನ ಆಮದು ಸುಂಕವು ಕಚ್ಚಾ ಸರಕಿಗಿಂತ ಹೆಚ್ಚು ಇರುವುದನ್ನು ಸರಿಪಡಿಸಲು ಮಂಡಳಿಯು ಕಾರ್ಯಪ್ರವೃತ್ತವಾಗಿದೆ. ಪಾನ್ ಮಸಾಲಾ ಮೇಲೆ ತೆರಿಗೆ ವಿಧಿಸುವುದು ಮಂಡಳಿಯ ಮುಂದಿನ ಸಭೆಯಲ್ಲಿ ಚರ್ಚೆಗೆ ಬರಲಿದೆ.</p>.<p>‘ಜಿಎಸ್ಟಿ ಸಂಗ್ರಹವು ಶೇ 45ರಷ್ಟು ಕಡಿಮೆಯಾಗಿದೆ. ಇದರಿಂದ ರಾಜ್ಯಗಳಿಗೆ ನೀಡುವ ಜಿಎಸ್ಟಿ ಪರಿಹಾರದಲ್ಲಿ ಸಮಸ್ಯೆ ಎದುರಾಗಿದೆ. ಜುಲೈನಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ಒದಗಿಸುವುದರ ಒಂದೇ ಕಾರ್ಯಸೂಚಿಯು ಇರಲಿದೆ’ ಎಂದೂ ನಿರ್ಮಲಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>