ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯ ಸಭೆಯು ಆಗಸ್ಟ್ 27ರಂದು ನಡೆಯುವ ಸಾಧ್ಯತೆ ಇದ್ದು, ರಾಜ್ಯಗಳಿಗೆ ಪರಿಹಾರ ನೀಡುವುದು ಹಾಗೂ ಆದಾಯ ಕೊರತೆಯನ್ನು ತುಂಬಿಕೊಳ್ಳಲು ಮಾರುಕಟ್ಟೆಯಿಂದ ಸಾಲ ಪಡೆಯುವುದರ ಕಾನೂನು ಬಾಧ್ಯತೆಯ ಬಗ್ಗೆ ಅಟಾರ್ನಿ ಜನರಲ್ ನೀಡಿರುವ ಅಭಿಪ್ರಾಯದ ಕುರಿತು ಚರ್ಚೆಯಾಗುವ ನಿರೀಕ್ಷೆ ಇದೆ.