ಜಿಎಸ್ಟಿ ವ್ಯವಸ್ಥೆಯ ಅಡಿಯಲ್ಲಿ ರಾಜ್ಯಗಳಿಗೆ ಆಗುವ ವರಮಾನ ನಷ್ಟವನ್ನು ಕೇಂದ್ರವು ಭರ್ತಿ ಮಾಡಿಕೊಡುವ ವ್ಯವಸ್ಥೆಯು ಜೂನ್ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಆದರೆ, ಈ ವ್ಯವಸ್ಥೆಯನ್ನು ಮುಂದುವರಿಸಬೇಕು ಎಂದು ಬಿಜೆಪಿಯ ವಿರೋಧ ಪಕ್ಷಗಳ ಆಡಳಿತ ಇರುವ ರಾಜ್ಯ ಸರ್ಕಾರಗಳು ಬಲವಾಗಿ ಆಗ್ರಹಿಸುತ್ತಿವೆ. ಹೀಗಾಗಿ, ಪರಿಹಾರ ವಿಚಾರವಾಗಿ ಬಿರುಸಿನ ಚರ್ಚೆ ನಡೆಯುವ ಸಾಧ್ಯತೆ ಇದೆ.