<p><strong>ನವದೆಹಲಿ</strong>: ಜಿಎಸ್ಟಿ ದರ ಸರಳೀಕರಣ ಮತ್ತು ಪರಿಹಾರ ಸೆಸ್ ಕುರಿತು ಚರ್ಚಿಸಲು ಶೀಘ್ರವೇ ಸರಕು ಮತ್ತು ಸೇವಾ ತೆರಿಗೆ ಮಂಡಳಿಯ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈಗಾಗಲೇ ದರ ಸರಳೀಕರಣ, ಸ್ಲ್ಯಾಬ್ಗಳ ಪರಿಷ್ಕರಣೆ ಮತ್ತು ಪರಿಹಾರ ಸೆಸ್ಗೆ ಸಂಬಂಧಿಸಿದಂತೆ ಸಚಿವರ ಸಮಿತಿಗಳನ್ನು ರಚಿಸಲಾಗಿದೆ. </p>.<p class="bodytext">ಕಳೆದ ವರ್ಷದ ಡಿಸೆಂಬರ್ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಮಂಡಳಿಯ ಸಭೆ ನಡೆದಿತ್ತು. ಆದರೆ, 148 ಸರಕುಗಳ ಮೇಲಿನ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಿದ್ಧಪಡಿಸಿರುವ ವರದಿಯನ್ನು ಈ ಸಭೆಯಲ್ಲಿ ಮಂಡಿಸಿಲ್ಲ.</p>.<p class="bodytext">ಅಲ್ಲದೆ, ಸಭೆಯು ಆರೋಗ್ಯ ಮತ್ತು ಜೀವ ವಿಮೆ ಕಂತಿನ ಮೇಲಿನ ಜಿಎಸ್ಟಿ ಕಡಿತಗೊಳಿಸುವ ಕುರಿತ ನಿರ್ಧಾರವನ್ನು ಮುಂದೂಡಿತ್ತು. ಈ ಕುರಿತು ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ ಎಂದು ಹೇಳಿವೆ. </p>.<p>ಪರಿಹಾರ ಸೆಸ್ ಅವಧಿಯು 2026ರ ಮಾರ್ಚ್ಗೆ ಅಂತ್ಯಗೊಳ್ಳಲಿದೆ. ಈ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ಅವರ ಅಧ್ಯಕ್ಷತೆಯಲ್ಲಿ ಸಚಿವರ ಸಮಿತಿ ರಚಿಸಲಾಗಿದೆ. </p>.<p>ಭವಿಷ್ಯದಲ್ಲಿ ಈ ಸೆಸ್ ಅನ್ನು ಯಾವ ರೂಪದಲ್ಲಿ ಸಂಗ್ರಹಿಸಬೇಕು. ಜೊತೆಗೆ, ಇದರಿಂದ ಬರುವ ಆದಾಯವನ್ನು ಕೇಂದ್ರ ಮತ್ತು ರಾಜ್ಯಗಳ ನಡುವೆ ಹೇಗೆ ಹಂಚಿಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಸಮಿತಿಯು ಚರ್ಚಿಸಿ ಅಂತಿಮ ವರದಿ ಸಲ್ಲಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜಿಎಸ್ಟಿ ದರ ಸರಳೀಕರಣ ಮತ್ತು ಪರಿಹಾರ ಸೆಸ್ ಕುರಿತು ಚರ್ಚಿಸಲು ಶೀಘ್ರವೇ ಸರಕು ಮತ್ತು ಸೇವಾ ತೆರಿಗೆ ಮಂಡಳಿಯ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈಗಾಗಲೇ ದರ ಸರಳೀಕರಣ, ಸ್ಲ್ಯಾಬ್ಗಳ ಪರಿಷ್ಕರಣೆ ಮತ್ತು ಪರಿಹಾರ ಸೆಸ್ಗೆ ಸಂಬಂಧಿಸಿದಂತೆ ಸಚಿವರ ಸಮಿತಿಗಳನ್ನು ರಚಿಸಲಾಗಿದೆ. </p>.<p class="bodytext">ಕಳೆದ ವರ್ಷದ ಡಿಸೆಂಬರ್ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಮಂಡಳಿಯ ಸಭೆ ನಡೆದಿತ್ತು. ಆದರೆ, 148 ಸರಕುಗಳ ಮೇಲಿನ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಿದ್ಧಪಡಿಸಿರುವ ವರದಿಯನ್ನು ಈ ಸಭೆಯಲ್ಲಿ ಮಂಡಿಸಿಲ್ಲ.</p>.<p class="bodytext">ಅಲ್ಲದೆ, ಸಭೆಯು ಆರೋಗ್ಯ ಮತ್ತು ಜೀವ ವಿಮೆ ಕಂತಿನ ಮೇಲಿನ ಜಿಎಸ್ಟಿ ಕಡಿತಗೊಳಿಸುವ ಕುರಿತ ನಿರ್ಧಾರವನ್ನು ಮುಂದೂಡಿತ್ತು. ಈ ಕುರಿತು ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ ಎಂದು ಹೇಳಿವೆ. </p>.<p>ಪರಿಹಾರ ಸೆಸ್ ಅವಧಿಯು 2026ರ ಮಾರ್ಚ್ಗೆ ಅಂತ್ಯಗೊಳ್ಳಲಿದೆ. ಈ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ಅವರ ಅಧ್ಯಕ್ಷತೆಯಲ್ಲಿ ಸಚಿವರ ಸಮಿತಿ ರಚಿಸಲಾಗಿದೆ. </p>.<p>ಭವಿಷ್ಯದಲ್ಲಿ ಈ ಸೆಸ್ ಅನ್ನು ಯಾವ ರೂಪದಲ್ಲಿ ಸಂಗ್ರಹಿಸಬೇಕು. ಜೊತೆಗೆ, ಇದರಿಂದ ಬರುವ ಆದಾಯವನ್ನು ಕೇಂದ್ರ ಮತ್ತು ರಾಜ್ಯಗಳ ನಡುವೆ ಹೇಗೆ ಹಂಚಿಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಸಮಿತಿಯು ಚರ್ಚಿಸಿ ಅಂತಿಮ ವರದಿ ಸಲ್ಲಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>