ಗುರುವಾರ , ಮಾರ್ಚ್ 30, 2023
24 °C

ಜಿಎಸ್‌ಟಿ ಜಾರಿ: ನ್ಯಾಯಯುತ ವ್ಯಾಪಾರ ಪ್ರಮಾಣ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ವಿವಿಧ ರಾಜ್ಯಗಳಲ್ಲಿ ಬೇರೆ, ಬೇರೆ ತೆರಿಗೆ ವಿಧಿಸುತ್ತಿದ್ದರಿಂದ ದೇಶದಲ್ಲಿ ನ್ಯಾಯಯುತವಲ್ಲದ ವ್ಯಾಪಾರ ವ್ಯವಸ್ಥೆ ಇತ್ತು. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೂಲಕ ದೇಶದಲ್ಲಿ ಒಂದೇ ತೆರಿಗೆ ಮಾಡಿದ ನಂತರ ನ್ಯಾಯಯುತ ವ್ಯಾಪಾರದ ‍ಪ್ರಮಾಣ ಹೆಚ್ಚಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ ರಾಜ್ಯ ತೆರಿಗೆ ಸಲಹೆ ಗಾರರ ಸಂಘ ಗುರುವಾರ ಜಿಎಸ್‌ಟಿ ಜಾರಿಯ ನಾಲ್ಕನೇ ವರ್ಷದ ದಿನ ಅಂಗವಾಗಿ ಆಯೋಜಿಸಿದ್ದ ವರ್ಚು ವಲ್ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಎಸ್‌ಟಿ ಜಾರಿಯ ನಾಲ್ಕು ವರ್ಷ ಗಳ ಸಾಧನೆ ದೊಡ್ಡದಿದೆ. ಮುಂದಿನ 40 ವರ್ಷಗಳ ಬಗ್ಗೆ ಚಿಂತನೆ ಮಾಡಬೇಕಿದೆ ಎಂದರು. ಪ್ರವಾಸ, ಸಾರಿಗೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತೆರಿಗೆ ವಿಧಿಸುವ ವಿಷಯದಲ್ಲಿ ಸಣ್ಣ ಪ್ರಮಾಣದ ಗೊಂದಲಗಳಿವೆ. ಅವುಗಳನ್ನು ಬಗೆಹರಿಸಿಕೊಂಡು ಮುಂದೆ ಸಾಗಲಾ ಗುತ್ತಿದೆ.  ಹತ್ತು ವರ್ಷಗಳ ಕಾಲ ಚರ್ಚೆ ಮಾಡಿದ ನಂತರ ಜಿಎಸ್‌ಟಿ ಜಾರಿಗೊಳಿಸಲಾಗಿದೆ. ಹಲವಾರು ವೈರುಧ್ಯ ಮತ್ತು ವೈವಿಧ್ಯತೆ ರಾಜ್ಯಗಳನ್ನು ಒಗ್ಗೂಡಿಸಿಕೊಂಡು ಹೋಗುವುದು ಬಹುದೊಡ್ಡ ಕೆಲಸ. ಈ ದೊಡ್ಡ ಕೆಲಸದ ಹಿಂದಿರುವ ಶಕ್ತಿ ಎಂದರೆ ಪ್ರಧಾನಿ ನರೇಂದ್ರ ಮೋದಿ ಎಂದು ಅವರು ಬಣ್ಣಿಸಿದರು. ಜಿಎಸ್‌ಟಿ ವ್ಯವಸ್ಥೆ ದೇಶದಲ್ಲಿ ಯಶಸ್ವಿಯಾಗಲು ತೆರಿಗೆ ಸಲಹೆಗಾರರ ಕೊಡುಗೆ ಅಪಾರವಾಗಿದೆ. ತೆರಿಗೆ ಸಲಹೆಗಾರರು, ತೆರಿಗೆ ಅಧಿಕಾರಿಗಳು ಜಂಟಿಯಾಗಿ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು