ಕೇಂದ್ರ ಸರ್ಕಾರ ಈಗಾಗಲೇ ಕೇಂದ್ರ ಸರಕು ಮತ್ತು ಸೇವೆಗಳತೆರಿಗೆ ಅಧಿನಿಯಮ-2017 ಕ್ಕೆ ಕೆಲವು ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿದೆ. ಸರಕು ಮತ್ತು ಸೇವೆಗಳ ತೆರಿಗೆಯು ಇಡೀ ರಾಷ್ಟ್ರದಲ್ಲೇ ಏಕ ರೂಪ ತೆರಿಗೆ ಪದ್ಧತಿ ಜಾರಿಯಲ್ಲಿದೆ.ಅಲ್ಲದೆ, ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಇಲ್ಲದಿರುವುದರಿಂದ, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ-2017ಕ್ಕೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಮ್ಮತಿ ನೀಡಿದೆ.