<p><strong>ಬೆಂಗಳೂರು</strong>: ನಗರದ ಲ್ಯಾಂಗ್ಫೋರ್ಡ್ ಟೌನ್ನ ಗ್ಲೋಬಲ್ ಟೆಕ್ ಪಾರ್ಕ್ ಕಟ್ಟಡದಲ್ಲಿನ ಎಚ್ಡಿಎಫ್ಸಿ ಬ್ಯಾಂಕ್ನ ಆಧುನಿಕ ಶಾಖೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಚೆಗೆ ಉದ್ಘಾಟಿಸಿದರು.</p>.<p>ಎಚ್ಡಿಎಫ್ಸಿ ಬ್ಯಾಂಕ್ನ ಕರ್ನಾಟಕ ಮತ್ತು ಕೇರಳ ವಿಭಾಗದ ಶಾಖಾ ಬ್ಯಾಂಕಿಂಗ್ ಮುಖ್ಯಸ್ಥ ಅಹ್ಮದ್ ಝಕಾರಿಯಾ ಉಪಸ್ಥಿತರಿದ್ದರು. ಇದೇ ಸಮಯದಲ್ಲಿ ಶಿವಕುಮಾರ್ ಅವರು, ಎಚ್ಡಿಎಫ್ಸಿ ಬ್ಯಾಂಕ್ನ ವಾರ್ಷಿಕ ಫೆಸ್ಟಿವ್ ಟ್ರೀಟ್ಸ್ ಅಭಿಯಾನಕ್ಕೆ ಚಾಲನೆ ನೀಡಿದರು ಎಂದು ಪ್ರಕಟಣೆ ತಿಳಿಸಿದೆ.</p>.<p>ಈ ಅಭಿಯಾನದಲ್ಲಿ ಕಾರ್ಡ್, ಸಾಲ, ಇಎಂಐ ಮೂಲಕ ಹಲವು ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಅದು ಹೇಳಿದೆ.</p>.<p>ಎಚ್ಡಿಎಫ್ಸಿ ಬ್ಯಾಂಕ್ ಕರ್ನಾಟಕದಲ್ಲಿನ ತನ್ನ 528 ಶಾಖೆಗಳು, 1156 ಎಟಿಎಂಗಳು, ಡಿಜಿಟಲ್ ವೇದಿಕೆಗಳು ಮತ್ತು 1 ಲಕ್ಷಕ್ಕೂ ಹೆಚ್ಚು ವ್ಯಾಪಾರಿಗಳ ಜಾಲವನ್ನು ಈ ಅಭಿಯಾನಕ್ಕಾಗಿ ಬಳಸಿಕೊಳ್ಳಲಿದೆ.</p>.<p>ಉದ್ಘಾಟನಾ ಸಮಾರಂಭದಲ್ಲಿ ನಗರಾಭಿವೃದ್ಧಿ ಮತ್ತು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಲ್ಯಾಂಗ್ಫೋರ್ಡ್ ಟೌನ್ನ ಗ್ಲೋಬಲ್ ಟೆಕ್ ಪಾರ್ಕ್ ಕಟ್ಟಡದಲ್ಲಿನ ಎಚ್ಡಿಎಫ್ಸಿ ಬ್ಯಾಂಕ್ನ ಆಧುನಿಕ ಶಾಖೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಚೆಗೆ ಉದ್ಘಾಟಿಸಿದರು.</p>.<p>ಎಚ್ಡಿಎಫ್ಸಿ ಬ್ಯಾಂಕ್ನ ಕರ್ನಾಟಕ ಮತ್ತು ಕೇರಳ ವಿಭಾಗದ ಶಾಖಾ ಬ್ಯಾಂಕಿಂಗ್ ಮುಖ್ಯಸ್ಥ ಅಹ್ಮದ್ ಝಕಾರಿಯಾ ಉಪಸ್ಥಿತರಿದ್ದರು. ಇದೇ ಸಮಯದಲ್ಲಿ ಶಿವಕುಮಾರ್ ಅವರು, ಎಚ್ಡಿಎಫ್ಸಿ ಬ್ಯಾಂಕ್ನ ವಾರ್ಷಿಕ ಫೆಸ್ಟಿವ್ ಟ್ರೀಟ್ಸ್ ಅಭಿಯಾನಕ್ಕೆ ಚಾಲನೆ ನೀಡಿದರು ಎಂದು ಪ್ರಕಟಣೆ ತಿಳಿಸಿದೆ.</p>.<p>ಈ ಅಭಿಯಾನದಲ್ಲಿ ಕಾರ್ಡ್, ಸಾಲ, ಇಎಂಐ ಮೂಲಕ ಹಲವು ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಅದು ಹೇಳಿದೆ.</p>.<p>ಎಚ್ಡಿಎಫ್ಸಿ ಬ್ಯಾಂಕ್ ಕರ್ನಾಟಕದಲ್ಲಿನ ತನ್ನ 528 ಶಾಖೆಗಳು, 1156 ಎಟಿಎಂಗಳು, ಡಿಜಿಟಲ್ ವೇದಿಕೆಗಳು ಮತ್ತು 1 ಲಕ್ಷಕ್ಕೂ ಹೆಚ್ಚು ವ್ಯಾಪಾರಿಗಳ ಜಾಲವನ್ನು ಈ ಅಭಿಯಾನಕ್ಕಾಗಿ ಬಳಸಿಕೊಳ್ಳಲಿದೆ.</p>.<p>ಉದ್ಘಾಟನಾ ಸಮಾರಂಭದಲ್ಲಿ ನಗರಾಭಿವೃದ್ಧಿ ಮತ್ತು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>