<p><strong>ನವದೆಹಲಿ:</strong> ಔಷಧಿಗಳನ್ನು ಕೈಗೆಟಕುವ ಬೆಲೆಯಲ್ಲಿ ಒದಗಿಸಿದ್ದು, ಕೆಲವು ವೈದ್ಯಕೀಯ ಉಪಕರಣಗಳ ಬೆಲೆ ಕಡಿಮೆ ಮಾಡಿದ್ದು ಸೇರಿದಂತೆ ಆರೋಗ್ಯಸೇವಾ ಕ್ಷೇತ್ರದಲ್ಲಿ ತಮ್ಮ ಸರ್ಕಾರ ಕೈಗೊಂಡ ಕ್ರಮಗಳ ಪರಿಣಾಮವಾಗಿ, ಬಡವರಿಗೆ ವಾರ್ಷಿಕವಾಗಿ ಒಟ್ಟು ₹ 50 ಸಾವಿರ ಕೋಟಿಯಷ್ಟು ಉಳಿತಾಯ ಮಾಡಲು ಸಾಧ್ಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>7,500ನೆಯ ಜನೌಷಧಿ ಕೇಂದ್ರವನ್ನು ಶಿಲ್ಲಾಂಗ್ನಲ್ಲಿ ಉದ್ಘಾಟಿಸಿ ಮಾತನಾಡಿದ ಮೋದಿ ಅವರು, ‘ಇಂತಹ ಕೇಂದ್ರಗಳನ್ನು ನಡೆಸುವವರು ಹಾಗೂ ಇದರ ಪ್ರಯೋಜನ ಪಡೆದವರ ಜೊತೆ ನಡೆಸಿದ ಮಾತುಕತೆಗಳ ಮೂಲಕ ನಾನು, ಈ ಯೋಜನೆಯು ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ದೊಡ್ಡ ನೆರವು ನೀಡಿದೆ ಎಂಬುದನ್ನು ಸ್ಪಷ್ಟವಾಗಿ ಕಂಡುಕೊಂಡಿರುವೆ’ ಎಂದರು.</p>.<p>‘ಆಯುಷ್ಮಾನ್ ಭಾರತ ಯೋಜನೆಯು 50 ಕೋಟಿ ಜನರಿಗೆ ₹ 5 ಲಕ್ಷದವರೆಗಿನ ಚಿಕಿತ್ಸೆ ಪಡೆಯಲು ನೆರವಾಗುತ್ತಿದೆ. 1.5 ಕೋಟಿಗಿಂತ ಹೆಚ್ಚು ಜನ ಈಗಾಗಲೇ ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಈ ಯೋಜನೆಯು ಜನರಿಗೆ ₹ 30 ಸಾವಿರ ಕೋಟಿ ಉಳಿತಾಯ ಮಾಡಲು ನೆರವಾಗಿದೆ ಎಂಬ ಅಂದಾಜು ಇದೆ’ ಎಂದು ಪ್ರಧಾನಿ ಹೇಳಿದರು.</p>.<p>ಜನೌಷಧಿ, ಆಯುಷ್ಮಾನ್ ಭಾರತ ಯೋಜನೆಗಳು ಮತ್ತು ವೈದ್ಯಕೀಯ ಉಪಕರಣಗಳ ಬೆಲೆಯಲ್ಲಿ ಆಗಿರುವ ಇಳಿಕೆಯ ಪ್ರಯೋಜನಗಳ ಮೊತ್ತವನ್ನು ಒಟ್ಟುಗೂಡಿಸಿದರೆ, ಬಡವರು ಮತ್ತು ಮಧ್ಯಮ ವರ್ಗದ ಜನ ಪ್ರತಿ ವರ್ಷ ₹ 50 ಸಾವಿರ ಕೋಟಿ ಉಳಿತಾಯ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಔಷಧಿಗಳನ್ನು ಕೈಗೆಟಕುವ ಬೆಲೆಯಲ್ಲಿ ಒದಗಿಸಿದ್ದು, ಕೆಲವು ವೈದ್ಯಕೀಯ ಉಪಕರಣಗಳ ಬೆಲೆ ಕಡಿಮೆ ಮಾಡಿದ್ದು ಸೇರಿದಂತೆ ಆರೋಗ್ಯಸೇವಾ ಕ್ಷೇತ್ರದಲ್ಲಿ ತಮ್ಮ ಸರ್ಕಾರ ಕೈಗೊಂಡ ಕ್ರಮಗಳ ಪರಿಣಾಮವಾಗಿ, ಬಡವರಿಗೆ ವಾರ್ಷಿಕವಾಗಿ ಒಟ್ಟು ₹ 50 ಸಾವಿರ ಕೋಟಿಯಷ್ಟು ಉಳಿತಾಯ ಮಾಡಲು ಸಾಧ್ಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>7,500ನೆಯ ಜನೌಷಧಿ ಕೇಂದ್ರವನ್ನು ಶಿಲ್ಲಾಂಗ್ನಲ್ಲಿ ಉದ್ಘಾಟಿಸಿ ಮಾತನಾಡಿದ ಮೋದಿ ಅವರು, ‘ಇಂತಹ ಕೇಂದ್ರಗಳನ್ನು ನಡೆಸುವವರು ಹಾಗೂ ಇದರ ಪ್ರಯೋಜನ ಪಡೆದವರ ಜೊತೆ ನಡೆಸಿದ ಮಾತುಕತೆಗಳ ಮೂಲಕ ನಾನು, ಈ ಯೋಜನೆಯು ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ದೊಡ್ಡ ನೆರವು ನೀಡಿದೆ ಎಂಬುದನ್ನು ಸ್ಪಷ್ಟವಾಗಿ ಕಂಡುಕೊಂಡಿರುವೆ’ ಎಂದರು.</p>.<p>‘ಆಯುಷ್ಮಾನ್ ಭಾರತ ಯೋಜನೆಯು 50 ಕೋಟಿ ಜನರಿಗೆ ₹ 5 ಲಕ್ಷದವರೆಗಿನ ಚಿಕಿತ್ಸೆ ಪಡೆಯಲು ನೆರವಾಗುತ್ತಿದೆ. 1.5 ಕೋಟಿಗಿಂತ ಹೆಚ್ಚು ಜನ ಈಗಾಗಲೇ ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಈ ಯೋಜನೆಯು ಜನರಿಗೆ ₹ 30 ಸಾವಿರ ಕೋಟಿ ಉಳಿತಾಯ ಮಾಡಲು ನೆರವಾಗಿದೆ ಎಂಬ ಅಂದಾಜು ಇದೆ’ ಎಂದು ಪ್ರಧಾನಿ ಹೇಳಿದರು.</p>.<p>ಜನೌಷಧಿ, ಆಯುಷ್ಮಾನ್ ಭಾರತ ಯೋಜನೆಗಳು ಮತ್ತು ವೈದ್ಯಕೀಯ ಉಪಕರಣಗಳ ಬೆಲೆಯಲ್ಲಿ ಆಗಿರುವ ಇಳಿಕೆಯ ಪ್ರಯೋಜನಗಳ ಮೊತ್ತವನ್ನು ಒಟ್ಟುಗೂಡಿಸಿದರೆ, ಬಡವರು ಮತ್ತು ಮಧ್ಯಮ ವರ್ಗದ ಜನ ಪ್ರತಿ ವರ್ಷ ₹ 50 ಸಾವಿರ ಕೋಟಿ ಉಳಿತಾಯ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>