<p><strong>ಮುಂಬೈ:</strong> ಹಣದುಬ್ಬರದ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಸುಸ್ಥಿರ ಆರ್ಥಿಕ ಬೆಳವಣಿಗೆ ಸಾಧಿಸಲು ಸಾಂಸ್ಥಿಕ ಸುಧಾರಣೆಯ ಅಗತ್ಯ ಇದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಶುಕ್ರವಾರ ಹೇಳಿದೆ.</p>.<p>ಸಗಟು ದರ ಹಣದುಬ್ಬರವು (ಡಬ್ಲ್ಯುಪಿಐ) ಗರಿಷ್ಠ ಮಟ್ಟದಲ್ಲಿ ಇರುವುದರಿಂದ ಚಿಲ್ಲರೆ ಹಣದುಬ್ಬರದ ಮೇಲೆ ಒತ್ತಡವು ನಿಧಾನವಾಗಿ ಹೆಚ್ಚಾಗುವ ಸಾಧ್ಯತೆ ಇದೆ ಆರ್ಬಿಐ ತನ್ನ ವಾರ್ಷಿಕ ವರದಿಯಲ್ಲಿ ಹೇಳಿದೆ.</p>.<p>ಕೈಗಾರಿಕೆಗಳಲ್ಲಿ ಬಳಸುವ ಕಚ್ಚಾ ಸಾಮಗ್ರಿಗಳ ದರವು ಗರಿಷ್ಠ ಮಟ್ಟದಲ್ಲಿದೆ. ಸಾರಿಗೆ ಮತ್ತು ಸಾಗಣೆ ವೆಚ್ಚಗಳು ಹೆಚ್ಚಾಗಿವೆ. ಪೂರೈಕೆ ವ್ಯವಸ್ಥೆಯಲ್ಲಿನ ಅಡಚಣೆಯು ಹಣದುಬ್ಬರದ ಮೇಲೆ ಇನ್ನಷ್ಟು ಪರಿಣಾಮ ಉಂಟುಮಾಡಲಿದೆ ಎಂದು ಹೇಳಿದೆ.</p>.<p>ಉಕ್ರೇನ್ ಬಿಕ್ಕಟ್ಟಿನಿಂದಾಗಿ ಸರಕುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗಿದ್ದು, ಭಾರತವನ್ನೂ ಒಳಗೊಂಡು ಜಾಗತಿಕ ಮಟ್ಟದಲ್ಲಿ ಹಣದುಬ್ಬರ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ವಿವರಿಸಿದೆ.</p>.<p>ಹಣದುಬ್ಬರ ನಿಯಂತ್ರಿಸಲು ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕಡಿಮೆ ಮಾಡಿದೆ. ಅಲ್ಲದೆ, ಉಕ್ಕು ಮತ್ತು ಪ್ಲಾಸ್ಟಿಕ್ ಉದ್ಯಮದಲ್ಲಿ ಬಳಸುವ ಕಚ್ಚಾ ಸಾಮಗ್ರಿಗಳ ಆಮದು ಸುಂಕವನ್ನೂ ಮನ್ನಾ ಮಾಡಿದೆ.</p>.<p>ಇಂಧನ, ತರಕಾರಿ ಮತ್ತು ಅಡುಗೆ ಎಣ್ಣೆಗಳ ದರ ಹೆಚ್ಚಳದಿಂದಾಗಿ ಸಗಟು ದರ ಹಣದುಬ್ಬರವು ಏಪ್ರಿಲ್ನಲ್ಲಿ ದಾಖಲೆಯ ಶೇ 15.8ಕ್ಕೆ ಏರಿಕೆ ಆಗಿದೆ. ಚಿಲ್ಲರೆ ಹಣದುಬ್ಬರವು 8 ವರ್ಷಗಳ ಗರಿಷ್ಠ ಮಟ್ಟವಾದ ಶೇ 7.79ಕ್ಕೆ ತಲುಪಿದೆ.</p>.<p>ಹಣದುಬ್ಬರ ಏರಿಕೆ ಆಗಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಆರ್ಬಿಐ ದಿಢೀರ್ ಸಭೆ ನಡೆಸಿ ರೆಪೊ ದರವನ್ನು ಶೇ 0.40ರಷ್ಟು ಇಳಿಕೆ ಮಾಡಿದೆ.</p>.<p>*</p>.<p>ಡಿಜಿಟಲ್ ಕರೆನ್ಸಿಯನ್ನು ಪರಿಚಯಿಸುವ ಕುರಿತು ಇರುವ ಸಾಧಕ–ಬಾಧಕಗಳನ್ನು ಪರಿಶೀಲಿಸಲಾಗುತ್ತಿದೆ.<br /><em><strong>–ಆರ್ಬಿಐ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಹಣದುಬ್ಬರದ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಸುಸ್ಥಿರ ಆರ್ಥಿಕ ಬೆಳವಣಿಗೆ ಸಾಧಿಸಲು ಸಾಂಸ್ಥಿಕ ಸುಧಾರಣೆಯ ಅಗತ್ಯ ಇದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಶುಕ್ರವಾರ ಹೇಳಿದೆ.</p>.<p>ಸಗಟು ದರ ಹಣದುಬ್ಬರವು (ಡಬ್ಲ್ಯುಪಿಐ) ಗರಿಷ್ಠ ಮಟ್ಟದಲ್ಲಿ ಇರುವುದರಿಂದ ಚಿಲ್ಲರೆ ಹಣದುಬ್ಬರದ ಮೇಲೆ ಒತ್ತಡವು ನಿಧಾನವಾಗಿ ಹೆಚ್ಚಾಗುವ ಸಾಧ್ಯತೆ ಇದೆ ಆರ್ಬಿಐ ತನ್ನ ವಾರ್ಷಿಕ ವರದಿಯಲ್ಲಿ ಹೇಳಿದೆ.</p>.<p>ಕೈಗಾರಿಕೆಗಳಲ್ಲಿ ಬಳಸುವ ಕಚ್ಚಾ ಸಾಮಗ್ರಿಗಳ ದರವು ಗರಿಷ್ಠ ಮಟ್ಟದಲ್ಲಿದೆ. ಸಾರಿಗೆ ಮತ್ತು ಸಾಗಣೆ ವೆಚ್ಚಗಳು ಹೆಚ್ಚಾಗಿವೆ. ಪೂರೈಕೆ ವ್ಯವಸ್ಥೆಯಲ್ಲಿನ ಅಡಚಣೆಯು ಹಣದುಬ್ಬರದ ಮೇಲೆ ಇನ್ನಷ್ಟು ಪರಿಣಾಮ ಉಂಟುಮಾಡಲಿದೆ ಎಂದು ಹೇಳಿದೆ.</p>.<p>ಉಕ್ರೇನ್ ಬಿಕ್ಕಟ್ಟಿನಿಂದಾಗಿ ಸರಕುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗಿದ್ದು, ಭಾರತವನ್ನೂ ಒಳಗೊಂಡು ಜಾಗತಿಕ ಮಟ್ಟದಲ್ಲಿ ಹಣದುಬ್ಬರ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ವಿವರಿಸಿದೆ.</p>.<p>ಹಣದುಬ್ಬರ ನಿಯಂತ್ರಿಸಲು ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕಡಿಮೆ ಮಾಡಿದೆ. ಅಲ್ಲದೆ, ಉಕ್ಕು ಮತ್ತು ಪ್ಲಾಸ್ಟಿಕ್ ಉದ್ಯಮದಲ್ಲಿ ಬಳಸುವ ಕಚ್ಚಾ ಸಾಮಗ್ರಿಗಳ ಆಮದು ಸುಂಕವನ್ನೂ ಮನ್ನಾ ಮಾಡಿದೆ.</p>.<p>ಇಂಧನ, ತರಕಾರಿ ಮತ್ತು ಅಡುಗೆ ಎಣ್ಣೆಗಳ ದರ ಹೆಚ್ಚಳದಿಂದಾಗಿ ಸಗಟು ದರ ಹಣದುಬ್ಬರವು ಏಪ್ರಿಲ್ನಲ್ಲಿ ದಾಖಲೆಯ ಶೇ 15.8ಕ್ಕೆ ಏರಿಕೆ ಆಗಿದೆ. ಚಿಲ್ಲರೆ ಹಣದುಬ್ಬರವು 8 ವರ್ಷಗಳ ಗರಿಷ್ಠ ಮಟ್ಟವಾದ ಶೇ 7.79ಕ್ಕೆ ತಲುಪಿದೆ.</p>.<p>ಹಣದುಬ್ಬರ ಏರಿಕೆ ಆಗಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಆರ್ಬಿಐ ದಿಢೀರ್ ಸಭೆ ನಡೆಸಿ ರೆಪೊ ದರವನ್ನು ಶೇ 0.40ರಷ್ಟು ಇಳಿಕೆ ಮಾಡಿದೆ.</p>.<p>*</p>.<p>ಡಿಜಿಟಲ್ ಕರೆನ್ಸಿಯನ್ನು ಪರಿಚಯಿಸುವ ಕುರಿತು ಇರುವ ಸಾಧಕ–ಬಾಧಕಗಳನ್ನು ಪರಿಶೀಲಿಸಲಾಗುತ್ತಿದೆ.<br /><em><strong>–ಆರ್ಬಿಐ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>