ಹಾಸನ: ಓವೈಸಿ ಪಕ್ಷದ ಜೊತೆ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ವಿಚಾರವಾಗಿ ನಾನು ಖಚಿತ ಅಭಿಪ್ರಾಯಕ್ಕೆ ಬಂದಿಲ್ಲ. ಬಿಎಸ್ಪಿ, ಸಿಪಿಐಎಂ, ಎನ್ಸಿಪಿ ಜೊತೆ ಈಗಾಗಲೇ ಹೊಂದಾಣಿಕೆ ಮಾಡಿ ಕೊಳ್ಳಲಾಗಿದೆ. ಮುಂದೆ ಯಾವುದೆ ಕಾರಣಕ್ಕೂ ಬಿಜೆಪಿ ಜೊತೆ ಹೋಗಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲೂ ಬಿಎಸ್ಪಿ ಜೊತೆ ಇರುತ್ತೇನೆ. ನನ್ನ ಜೀವನದ ಹೋರಾಟದ ಫಲ, ಈ ಸಾರಿ ಸರಕಾರ ರಚನೆ ಮಾಡಿಯೇ ತೀರುವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದರು.