<p><strong>ಹುಬ್ಬಳ್ಳಿ:</strong> ‘ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶದಲ್ಲಿ ಎಫ್ಎಂಸಿಜಿ, ಸೋಲಾರ್, ವಾಲ್ವ್ಸ್, ಜವಳಿ ಹಾಗೂ ಆಹಾರಧಾನ್ಯಗಳ ಸಂಸ್ಕರಣೆ ಉದ್ಯಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ’ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫೆ.14 ರಂದು ನಗರದ ಡೆನಿಸನ್ಸ್ ಹೋಟೆಲ್ನಲ್ಲಿ ನಡೆಯುವ ಸಮಾ<br />ವೇಶಕ್ಕೆ 6 ಸಾವಿರ ಉದ್ಯಮಿಗಳಿಗೆ ಆಹ್ವಾನ ನೀಡಲಾಗಿದೆ. 650 ಉದ್ಯಮಿಗಳು ಭಾಗವಹಿಸುವುದನ್ನು ಖಚಿತ ಪಡಿಸಿದ್ದಾರೆ. ಭಾಗವಹಿಸುವವರ ಸಂಖ್ಯೆ ಸಾವಿರಕ್ಕೆ ಏರುವ ನಿರೀಕ್ಷೆ ಇದೆ’ ಎಂದರು.</p>.<p>‘ಹುಬ್ಬಳ್ಳಿಯಲ್ಲಿ ಎಫ್ಎಂಸಿಜಿ ಕ್ಲಸ್ಟರ್ ಮಾಡುವ ಯೋಚನೆ ಇದೆ. ಈ ಭಾಗದಲ್ಲಿ ಹತ್ತಿ ಬೆಳೆಯುವುದರಿಂದ ಜವಳಿಗೆ ಆದ್ಯತೆ ನೀಡಲಾಗುತ್ತಿದೆ. ವಾಲ್ವ್ಸ್ ತಯಾರಿಕೆ ಕಾರ್ಖಾನೆಗಳು ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಇನ್ನಷ್ಟು ಕೈಗಾರಿಕೆಗಳನ್ನು ಆಹ್ವಾನಿಸಲಾಗಿದೆ.</p>.<p>‘ಫುಡ್ ಪಾರ್ಕ್ ಸ್ಥಾಪನೆಗೆ ಪತಂಜಲಿ ಯೋಗ ಸಮಿತಿಯ ಬಾಬಾ ರಾಮದೇವ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ತಂಡ ವೊಂದನ್ನು ಕಳುಹಿಸುವುದಾಗಿ ಅವರು ತಿಳಿಸಿದ್ದಾರೆ. ಟಾಟಾ, ಹಿಂದೂಜಾ ಕಂಪನಿಗಳ ಅಧಿಕಾರಿ ಗಳ ತಂಡಗಳೂ ಭಾಗವಹಿಸಲಿವೆ’ ಎಂದರು.</p>.<p>‘ಈ ಸಮಾವೇಶ ಹುಬ್ಬಳ್ಳಿಗೆ ಮಾತ್ರ ಸೀಮಿತವಾಗಿಲ್ಲ. ಬೆಳಗಾವಿ, ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾ ಪ್ರದೇಶದಲ್ಲೂ ಹೂಡಿಕೆಯ ಬಗೆಗೆ ಕೆಲವರು ಸ್ಪಂದಿಸಿದ್ದಾರೆ. ಮೆಗಾ ಕೈಗಾರಿಕೆಗಳು ಬಂದರೆ, ವಿನಾಯ್ತಿ ನೀಡುವ ಬಗೆಗೂ ನಿರ್ಧರಿಸಲಾಗುವುದು. 15 ರಿಂದ 20 ಒಪ್ಪಂದಗಳಾಗುವ ನಿರೀಕ್ಷೆ ಇದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶದಲ್ಲಿ ಎಫ್ಎಂಸಿಜಿ, ಸೋಲಾರ್, ವಾಲ್ವ್ಸ್, ಜವಳಿ ಹಾಗೂ ಆಹಾರಧಾನ್ಯಗಳ ಸಂಸ್ಕರಣೆ ಉದ್ಯಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ’ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫೆ.14 ರಂದು ನಗರದ ಡೆನಿಸನ್ಸ್ ಹೋಟೆಲ್ನಲ್ಲಿ ನಡೆಯುವ ಸಮಾ<br />ವೇಶಕ್ಕೆ 6 ಸಾವಿರ ಉದ್ಯಮಿಗಳಿಗೆ ಆಹ್ವಾನ ನೀಡಲಾಗಿದೆ. 650 ಉದ್ಯಮಿಗಳು ಭಾಗವಹಿಸುವುದನ್ನು ಖಚಿತ ಪಡಿಸಿದ್ದಾರೆ. ಭಾಗವಹಿಸುವವರ ಸಂಖ್ಯೆ ಸಾವಿರಕ್ಕೆ ಏರುವ ನಿರೀಕ್ಷೆ ಇದೆ’ ಎಂದರು.</p>.<p>‘ಹುಬ್ಬಳ್ಳಿಯಲ್ಲಿ ಎಫ್ಎಂಸಿಜಿ ಕ್ಲಸ್ಟರ್ ಮಾಡುವ ಯೋಚನೆ ಇದೆ. ಈ ಭಾಗದಲ್ಲಿ ಹತ್ತಿ ಬೆಳೆಯುವುದರಿಂದ ಜವಳಿಗೆ ಆದ್ಯತೆ ನೀಡಲಾಗುತ್ತಿದೆ. ವಾಲ್ವ್ಸ್ ತಯಾರಿಕೆ ಕಾರ್ಖಾನೆಗಳು ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಇನ್ನಷ್ಟು ಕೈಗಾರಿಕೆಗಳನ್ನು ಆಹ್ವಾನಿಸಲಾಗಿದೆ.</p>.<p>‘ಫುಡ್ ಪಾರ್ಕ್ ಸ್ಥಾಪನೆಗೆ ಪತಂಜಲಿ ಯೋಗ ಸಮಿತಿಯ ಬಾಬಾ ರಾಮದೇವ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ತಂಡ ವೊಂದನ್ನು ಕಳುಹಿಸುವುದಾಗಿ ಅವರು ತಿಳಿಸಿದ್ದಾರೆ. ಟಾಟಾ, ಹಿಂದೂಜಾ ಕಂಪನಿಗಳ ಅಧಿಕಾರಿ ಗಳ ತಂಡಗಳೂ ಭಾಗವಹಿಸಲಿವೆ’ ಎಂದರು.</p>.<p>‘ಈ ಸಮಾವೇಶ ಹುಬ್ಬಳ್ಳಿಗೆ ಮಾತ್ರ ಸೀಮಿತವಾಗಿಲ್ಲ. ಬೆಳಗಾವಿ, ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾ ಪ್ರದೇಶದಲ್ಲೂ ಹೂಡಿಕೆಯ ಬಗೆಗೆ ಕೆಲವರು ಸ್ಪಂದಿಸಿದ್ದಾರೆ. ಮೆಗಾ ಕೈಗಾರಿಕೆಗಳು ಬಂದರೆ, ವಿನಾಯ್ತಿ ನೀಡುವ ಬಗೆಗೂ ನಿರ್ಧರಿಸಲಾಗುವುದು. 15 ರಿಂದ 20 ಒಪ್ಪಂದಗಳಾಗುವ ನಿರೀಕ್ಷೆ ಇದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>