<p>ಹುಬ್ಬಳ್ಳಿ: ಇಲ್ಲಿನ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಯ ವ್ಯಾಪಾರಸ್ಥರ ಸಂಘ ಹಾಗೂ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ (ಕೆಸಿಸಿಐ) ಆಡಳಿತ ಮಂಡಳಿಗಳ ಜಂಟಿ ಸಭೆ ವ್ಯಾಪಾರಸ್ಥರ ಸಂಘದ ಕಟ್ಟಡದಲ್ಲಿ ಈಚೆಗೆ ನಡೆಯಿತು.</p>.<p>ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಅಭಿವೃದ್ಧಿ, ಮಾರುಕಟ್ಟೆಯ ಸರ್ವತೋಮುಖ ಬೆಳವಣಿಗೆ ಕುರಿತು ಉತ್ತರ ಕರ್ನಾಟಕ ಭಾಗದ ಎಪಿಎಂಸಿ ವರ್ತಕರ ಸಭೆ ನಡೆಸಿ, ಸಂಸ್ಥೆಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಕೆಸಿಸಿಐನಿಂದ ಎಪಿಎಂಸಿ ಆವರಣದ ವಿವಿಧೋದ್ದೇಶ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯಲಿರುವ ಬೃಹತ್ ಕೈಗಾರಿಕಾ ವಸ್ತು ಪ್ರದರ್ಶನ ‘ಇನ್ಕಾಮೆಕ್ಸ್-2026‘ ಉದ್ಘಾಟನೆಗೆ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಲಾಗಿದೆ. ವರ್ತಕರೆಲ್ಲರೂ ಭಾಗವಹಿಸಬೇಕು ಎಂದು ಕೆಸಿಸಿಐ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ ಕೋರಿದರು.</p>.<p>ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರಾಜಕಿರಣ ಬಿ. ಮೆಣಸಿನಕಾಯಿ, ಜಿ.ಕೆ. ಆದಪ್ಪಗೌಡರ ಅಧ್ಯಕ್ಷತೆ ವಹಿಸಿದ್ದರು. ಶ್ರೀನಿವಾಸ ಸೋಳಂಕಿ, ಅಶೋಕ ಎಸ್. ಬಾಳಿಕಾಯಿ, ಚಂದ್ರಶೇಖರ ಪೂಜಾರ, ಪ್ರವೀಣ ಅಗಡಿ, ಎಸ್.ಜಿ. ಕಮ್ಮಾರ, ವೀರಣ್ಣ ಕಲ್ಲೂರ, ಉದಯ ರೇವಣಕರ, ಪ್ರಕಾಶ ಶೃಂಗೇರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-22-1769920797</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಇಲ್ಲಿನ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಯ ವ್ಯಾಪಾರಸ್ಥರ ಸಂಘ ಹಾಗೂ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ (ಕೆಸಿಸಿಐ) ಆಡಳಿತ ಮಂಡಳಿಗಳ ಜಂಟಿ ಸಭೆ ವ್ಯಾಪಾರಸ್ಥರ ಸಂಘದ ಕಟ್ಟಡದಲ್ಲಿ ಈಚೆಗೆ ನಡೆಯಿತು.</p>.<p>ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಅಭಿವೃದ್ಧಿ, ಮಾರುಕಟ್ಟೆಯ ಸರ್ವತೋಮುಖ ಬೆಳವಣಿಗೆ ಕುರಿತು ಉತ್ತರ ಕರ್ನಾಟಕ ಭಾಗದ ಎಪಿಎಂಸಿ ವರ್ತಕರ ಸಭೆ ನಡೆಸಿ, ಸಂಸ್ಥೆಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಕೆಸಿಸಿಐನಿಂದ ಎಪಿಎಂಸಿ ಆವರಣದ ವಿವಿಧೋದ್ದೇಶ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯಲಿರುವ ಬೃಹತ್ ಕೈಗಾರಿಕಾ ವಸ್ತು ಪ್ರದರ್ಶನ ‘ಇನ್ಕಾಮೆಕ್ಸ್-2026‘ ಉದ್ಘಾಟನೆಗೆ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಲಾಗಿದೆ. ವರ್ತಕರೆಲ್ಲರೂ ಭಾಗವಹಿಸಬೇಕು ಎಂದು ಕೆಸಿಸಿಐ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ ಕೋರಿದರು.</p>.<p>ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರಾಜಕಿರಣ ಬಿ. ಮೆಣಸಿನಕಾಯಿ, ಜಿ.ಕೆ. ಆದಪ್ಪಗೌಡರ ಅಧ್ಯಕ್ಷತೆ ವಹಿಸಿದ್ದರು. ಶ್ರೀನಿವಾಸ ಸೋಳಂಕಿ, ಅಶೋಕ ಎಸ್. ಬಾಳಿಕಾಯಿ, ಚಂದ್ರಶೇಖರ ಪೂಜಾರ, ಪ್ರವೀಣ ಅಗಡಿ, ಎಸ್.ಜಿ. ಕಮ್ಮಾರ, ವೀರಣ್ಣ ಕಲ್ಲೂರ, ಉದಯ ರೇವಣಕರ, ಪ್ರಕಾಶ ಶೃಂಗೇರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-22-1769920797</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>