ಬೀದರ್: ಲಿಂಗಾಯತ ಹಾಗೂ ವೀರಶೈವ ಲಿಂಗಾಯತರಿಗೆ ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ರಾಜ್ಯ ಪೌರಾಡಳಿತ ಸಚಿವ ಈಶ್ವರ ಖಂಡ್ರೆ ನಿರಾಕರಿಸಿದ್ದಾರೆ.
ಸಚಿವರ ಮೊಬೈಲ್ಗೆ ಕರೆ ಮಾಡಿದರೆ ಸ್ವೀಕರಿಸಲಿಲ್ಲ. ಆಪ್ತ ಸಹಾಯಕರ ಮೂಲಕ ಅವರನ್ನು ಸಂಪರ್ಕಿಸಲು ಯತ್ನಿಸಿದಾಗ ‘ಈ ವಿಷಯದಲ್ಲಿ ಏನನ್ನೂ ಮಾತನಾಡುವುದಿಲ್ಲ’ ಎಂದು ಹೇಳಿದ್ದಾರೆ.