<p><strong>ನವದೆಹಲಿ</strong>: ‘ಬೈಜುಸ್ ಕಂಪನಿಯ ಲೆಕ್ಕ ಪರಿಶೋಧನೆಯಲ್ಲಿ ಕಂಡುಬಂದಿರುವ ಲೋಪ ಕುರಿತಂತೆ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯ (ಐಸಿಎಐ) ಶಿಸ್ತು ಸಮಿತಿಯಿಂದ ತನಿಖೆ ನಡೆಯುತ್ತಿದೆ’ ಎಂದು ಸಂಸ್ಥೆಯ ಅಧ್ಯಕ್ಷ ರಂಜೀತ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.</p>.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಸ್ಥೆಯು ಶಿಸ್ತುಪಾಲನೆಗೆ ಸಂಬಂಧಿಸಿದಂತೆ ವಿವಿಧ ಹಂತದ ಕಾರ್ಯವಿಧಾನವನ್ನು ಹೊಂದಿದೆ’ ಎಂದರು. </p>.<p>ಲೆಕ್ಕ ಪರಿಶೋಧನೆಯಲ್ಲಿ ಕಂಡುಬರುವ ಲೋಪದ ವಿಷಯವನ್ನು ಮುಕ್ತಾಯಗೊಳಿಸುವ ಅಥವಾ ತನಿಖೆ ನಡೆಸಲು ಶಿಸ್ತು ಸಮಿತಿಗೆ ಒಪ್ಪಿಸುವ ಅಧಿಕಾರವನ್ನು ಸಂಸ್ಥೆಯ ಶಿಸ್ತು ನಿರ್ದೇಶನಾಲಯ ಹೊಂದಿದೆ. ಹಾಗಾಗಿ, ಬೈಜುಸ್ ಪ್ರಕರಣವನ್ನು ಶಿಸ್ತು ಸಮಿತಿಗೆ ಒಪ್ಪಿಸಿದೆ ಎಂದು ತಿಳಿಸಿದರು.</p>.<p>ಮೇಲ್ನೋಟಕ್ಕೆ ಕಂಡುಬಂದಿರುವ ಲೋಪದ ಬಗ್ಗೆ ಅವರು ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲಿಲ್ಲ.</p>.<p>ಬೈಜುಸ್ ಬಹಿರಂಗಪಡಿಸಿದ್ದ ಹಣಕಾಸಿನ ಮಾಹಿತಿಗಳಲ್ಲಿ ಆ ಕಂಪನಿಯ ಲೆಕ್ಕ ಪರಿಶೋಧಕರು ನಿರ್ಲಕ್ಷ್ಯ ಎಸಗಿರುವುದು ಕಂಡುಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಹಣಕಾಸು ವರದಿ ಪರಿಶೀಲನಾ ಮಂಡಳಿಯು (ಎಫ್ಆರ್ಆರ್ಬಿ) ಐಸಿಎಐನ ಶಿಸ್ತು ನಿರ್ದೇಶನಾಲಯಕ್ಕೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಬೈಜುಸ್ ಕಂಪನಿಯ ಲೆಕ್ಕ ಪರಿಶೋಧನೆಯಲ್ಲಿ ಕಂಡುಬಂದಿರುವ ಲೋಪ ಕುರಿತಂತೆ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯ (ಐಸಿಎಐ) ಶಿಸ್ತು ಸಮಿತಿಯಿಂದ ತನಿಖೆ ನಡೆಯುತ್ತಿದೆ’ ಎಂದು ಸಂಸ್ಥೆಯ ಅಧ್ಯಕ್ಷ ರಂಜೀತ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.</p>.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಸ್ಥೆಯು ಶಿಸ್ತುಪಾಲನೆಗೆ ಸಂಬಂಧಿಸಿದಂತೆ ವಿವಿಧ ಹಂತದ ಕಾರ್ಯವಿಧಾನವನ್ನು ಹೊಂದಿದೆ’ ಎಂದರು. </p>.<p>ಲೆಕ್ಕ ಪರಿಶೋಧನೆಯಲ್ಲಿ ಕಂಡುಬರುವ ಲೋಪದ ವಿಷಯವನ್ನು ಮುಕ್ತಾಯಗೊಳಿಸುವ ಅಥವಾ ತನಿಖೆ ನಡೆಸಲು ಶಿಸ್ತು ಸಮಿತಿಗೆ ಒಪ್ಪಿಸುವ ಅಧಿಕಾರವನ್ನು ಸಂಸ್ಥೆಯ ಶಿಸ್ತು ನಿರ್ದೇಶನಾಲಯ ಹೊಂದಿದೆ. ಹಾಗಾಗಿ, ಬೈಜುಸ್ ಪ್ರಕರಣವನ್ನು ಶಿಸ್ತು ಸಮಿತಿಗೆ ಒಪ್ಪಿಸಿದೆ ಎಂದು ತಿಳಿಸಿದರು.</p>.<p>ಮೇಲ್ನೋಟಕ್ಕೆ ಕಂಡುಬಂದಿರುವ ಲೋಪದ ಬಗ್ಗೆ ಅವರು ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲಿಲ್ಲ.</p>.<p>ಬೈಜುಸ್ ಬಹಿರಂಗಪಡಿಸಿದ್ದ ಹಣಕಾಸಿನ ಮಾಹಿತಿಗಳಲ್ಲಿ ಆ ಕಂಪನಿಯ ಲೆಕ್ಕ ಪರಿಶೋಧಕರು ನಿರ್ಲಕ್ಷ್ಯ ಎಸಗಿರುವುದು ಕಂಡುಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಹಣಕಾಸು ವರದಿ ಪರಿಶೀಲನಾ ಮಂಡಳಿಯು (ಎಫ್ಆರ್ಆರ್ಬಿ) ಐಸಿಎಐನ ಶಿಸ್ತು ನಿರ್ದೇಶನಾಲಯಕ್ಕೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>